ಶಿವಮೊಗ್ಗದ ಲೈವ್.ಕಾಂ | SHIMOGA NEWS | 18 ಫೆಬ್ರವರಿ 2022
ಶಿವಮೊಗ್ಗದ ತುಂಗಾ ನದಿ ಹೊಸ ಸೇತುವೆ ಮೇಲೆ ಡಾಂಬರೀಕರಣ ಮಾಡಲು ಕೊನೆಗೂ ಅಧಿಕಾರಿಗಳು ನಿರ್ಧರಿಸಿದ್ದಾರೆ. ಶಿವಮೊಗ್ಗ ಲೈವ್.ಕಾಂ ಸಾಲು ಸಾಲು ವರದಿ ಬಳಿಕ ಲೋಕೋಪಯೋಗಿ ಇಲಾಖೆ ಗುಂಡಿ ಮುಕ್ತ ಮಾಡಿ, ಸಂಪೂರ್ಣ ಡಾಂಬರೀಕರಣ ಮಾಡಲು ಹೊರಟಿದೆ.
ತುಂಗಾ ನದಿ ಹೊಸ ಸೇತುವೆ ಮೇಲೆ ಫೆ.19 ಮತ್ತು 20ರಂದು ರಾತ್ರಿ ಡಾಂಬರೀಕರಣ ಕಾಮಗಾರಿ ನಡೆಸಲು ನಿರ್ಧರಿಸಲಾಗಿದೆ. ಆದ್ದರಿಂದ ಈ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಪರ್ಯಾಯ ಮಾರ್ಗವನ್ನು ಸೂಚಿಸಲಾಗಿದೆ.
ಯಾವುದು ಪರ್ಯಾಯ ಮಾರ್ಗ?
ರಾತ್ರಿ ವೇಳೆ ಡಾಂಬಾರೀಕರಣ ಕಾಮಗಾರಿ ನಡೆಯುವ ಸಂದರ್ಭ ವಾಹನ ಸವಾರರಿಗೆ ತೊಂದರೆ ಆಗಬಾರದು ಎಂದು ಜಿಲ್ಲಾಧಿಕಾರಿ ಅವರು ಪರ್ಯಾಯ ಮಾರ್ಗ ಸೂಚಿಸಿದ್ದಾರೆ.
» ಶಿವಮೊಗ್ಗ ನಗರಕ್ಕೆ ಪ್ರವೇಶಿಸುವ ಬೈಕು, ಆಟೋ ಮತ್ತು ಇತರೆ ಲಘು ವಾಹನಗಳು ತುಂಗಾ ನದಿ ಹಳೆ ಸೇತವೆ ಉಪಯೋಗಿಸಿಕೊಳ್ಳಬಹುದು.
» ಶಿವಮೊಗ್ಗ ನಗರಕ್ಕೆ ಪ್ರವೇಶಿಸುವ ಭಾರಿ ವಾಹನಗಳು ವಿದ್ಯಾನಗರ, ಎಂ.ಆರ್.ಎಸ್ ಸರ್ಕಲ್ ಮೂಲಕ ಸಂಚರಿಸಬಹುದು.
» ಹೊನ್ನಾಳಿ ಕಡೆಯಿಂದ ಶಿವಮೊಗ್ಗ ನಗರವನ್ನು ಪ್ರವೇಶಿಸುವ ಎಲ್ಲಾ ಭಾರಿ ವಾಹನಗಳು ಸಂಗೊಳ್ಳಿ ರಾಯಣ್ಣ ಸರ್ಕಲ್, ಕೆಇಬಿ ಸರ್ಕಲ್, ರೈಲ್ವೆ ಸ್ಟೇಷನ್, ಉಷಾ ನರ್ಸಿಂಗ್ ಹೋಂ, 100 ಅಡಿ ರಸ್ತೆ ಮೂಲಕ ಸಂಚರಿಸಬೇಕು.
» ಶಿವಮೊಗ್ಗ ನಗರದಿಂದ ಹೊರಗೆ ಹೋಗುವ ಎಲ್ಲಾ ಬಗೆಯ ವಾಹನಗಳು ಅಶೋಕ ಸರ್ಕಲ್, ಎನ್.ಟಿ.ರಸ್ತೆ, ಸಂದೇಶ ಮೋಟರ್ಸ್ ಸರ್ಕಲ್, ಬೈಪಾಸ್ ರಸ್ತೆ ಮೂಲಕ ಸಂಚರಿಸಬೇಕು ಎಂದು ಜಿಲ್ಲಾಧಿಕಾರಿ ಅದೇಶದಲ್ಲಿ ಸೂಚಿಸಿದ್ದಾರೆ.
ಶಿವಮೊಗ್ಗ ಲೈವ್’ನಲ್ಲಿ ಸಾಲು ಸಾಲು ವರದಿ
ತುಂಗಾ ನದಿ ಹೊಸ ಸೇತುವೆ ಮೇಲಿನ ಯಮಸ್ವರೂಪಿ ಗುಂಡಿಗಳ ಕುರಿತು ಶಿವಮೊಗ್ಗ ಲೈವ್.ಕಾಂ ಸಾಲು ಸಾಲು ವರದಿ ಪ್ರಕಟಿಸಿತ್ತು. ಗುಂಡಿಗಳ ಕಾರಣಕ್ಕೆ ಸಾವು, ನೋವು ಸಂಭವಿಸಿದ ಕುರಿತು ವರದಿಯಲ್ಲಿ ತಿಳಿಸಿದ್ದೆವು. ಸಂಸದ ರಾಘವೇಂದ್ರ ಅವರು ರೈಲ್ವೆ ಮೇಲ್ಸೇತುವೆ ಕಾಮಗಾರಿ ಪರಿಶೀಲನೆಗೆ ಬಂದ ಸಂದರ್ಭ ಗುಂಡಿಗಳಿಗೆ ತೇಪೆ ಹಾಕಲಾಗಿತ್ತು. ಈ ಕುರಿತು ವರದಿ ಪ್ರಕಟವಾಗಿತ್ತು. ಅಧಿಕಾರಿಗಳ ನಡೆ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶವನ್ನು ವ್ಯಕ್ತಪಡಿಸಿದ್ದರು.
ಇದನ್ನೂ ಓದಿ | ಸಂಸದರ ಭೇಟಿಗೂ ಮುಂಚೆ ತುಂಗಾ ನದಿ ಹೊಸ ಸೇತುವೆ ಮೇಲಿನ ಗುಂಡಿಗಳು ಮಾಯ
ಇದನ್ನೂ ಓದಿ | ತುಂಗಾ ನದಿ ಸೇತುವೆ ಮೇಲೆ ಇನ್ನೆಷ್ಟು ಜನರ ಬಲಿಗಾಗಿ ಕಾಯುತ್ತಿದ್ದಾರೆ ಅಧಿಕಾರಿಗಳು? | ದೂರು ದುಮ್ಮಾನ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200