Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » IMPACT | ತುಂಗಾ ನದಿ ಹೊಸ ಸೇತುವೆ ಮೇಲೆ ಡಾಂಬರೀಕರಣ ದಿನಾಂಕ ನಿಗದಿ, ವಾಹನಗಳಿಗೆ ಪರ್ಯಾಯ ಮಾರ್ಗ

IMPACT | ತುಂಗಾ ನದಿ ಹೊಸ ಸೇತುವೆ ಮೇಲೆ ಡಾಂಬರೀಕರಣ ದಿನಾಂಕ ನಿಗದಿ, ವಾಹನಗಳಿಗೆ ಪರ್ಯಾಯ ಮಾರ್ಗ

18/02/2022 8:19 PM
ನಿತಿನ್‌ ಕೈದೊಟ್ಲು

ಶಿವಮೊಗ್ಗದ ಲೈವ್.ಕಾಂ | SHIMOGA NEWS | 18 ಫೆಬ್ರವರಿ 2022

 

» ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗದ ತುಂಗಾ ನದಿ ಹೊಸ ಸೇತುವೆ ಮೇಲೆ ಡಾಂಬರೀಕರಣ ಮಾಡಲು ಕೊನೆಗೂ ಅಧಿಕಾರಿಗಳು ನಿರ್ಧರಿಸಿದ್ದಾರೆ. ಶಿವಮೊಗ್ಗ ಲೈವ್.ಕಾಂ ಸಾಲು ಸಾಲು ವರದಿ ಬಳಿಕ ಲೋಕೋಪಯೋಗಿ ಇಲಾಖೆ ಗುಂಡಿ ಮುಕ್ತ ಮಾಡಿ, ಸಂಪೂರ್ಣ ಡಾಂಬರೀಕರಣ ಮಾಡಲು ಹೊರಟಿದೆ.

Shimoga Nanjappa Hospital Covid Care Center

ತುಂಗಾ ನದಿ ಹೊಸ ಸೇತುವೆ ಮೇಲೆ ಫೆ.19 ಮತ್ತು 20ರಂದು ರಾತ್ರಿ ಡಾಂಬರೀಕರಣ ಕಾಮಗಾರಿ ನಡೆಸಲು ನಿರ್ಧರಿಸಲಾಗಿದೆ. ಆದ್ದರಿಂದ ಈ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಪರ್ಯಾಯ ಮಾರ್ಗವನ್ನು ಸೂಚಿಸಲಾಗಿದೆ.

ಯಾವುದು ಪರ್ಯಾಯ ಮಾರ್ಗ?

ರಾತ್ರಿ ವೇಳೆ ಡಾಂಬಾರೀಕರಣ ಕಾಮಗಾರಿ ನಡೆಯುವ ಸಂದರ್ಭ ವಾಹನ ಸವಾರರಿಗೆ ತೊಂದರೆ ಆಗಬಾರದು ಎಂದು ಜಿಲ್ಲಾಧಿಕಾರಿ ಅವರು ಪರ್ಯಾಯ ಮಾರ್ಗ ಸೂಚಿಸಿದ್ದಾರೆ.

» ಶಿವಮೊಗ್ಗ ನಗರಕ್ಕೆ ಪ್ರವೇಶಿಸುವ ಬೈಕು, ಆಟೋ ಮತ್ತು ಇತರೆ ಲಘು ವಾಹನಗಳು ತುಂಗಾ ನದಿ ಹಳೆ ಸೇತವೆ ಉಪಯೋಗಿಸಿಕೊಳ್ಳಬಹುದು.

» ಶಿವಮೊಗ್ಗ ನಗರಕ್ಕೆ ಪ್ರವೇಶಿಸುವ ಭಾರಿ ವಾಹನಗಳು ವಿದ್ಯಾನಗರ, ಎಂ.ಆರ್.ಎಸ್ ಸರ್ಕಲ್ ಮೂಲಕ ಸಂಚರಿಸಬಹುದು.

» ಹೊನ್ನಾಳಿ ಕಡೆಯಿಂದ ಶಿವಮೊಗ್ಗ ನಗರವನ್ನು ಪ್ರವೇಶಿಸುವ ಎಲ್ಲಾ ಭಾರಿ ವಾಹನಗಳು ಸಂಗೊಳ್ಳಿ ರಾಯಣ್ಣ ಸರ್ಕಲ್, ಕೆಇಬಿ ಸರ್ಕಲ್, ರೈಲ್ವೆ ಸ್ಟೇಷನ್, ಉಷಾ ನರ್ಸಿಂಗ್ ಹೋಂ, 100 ಅಡಿ ರಸ್ತೆ ಮೂಲಕ ಸಂಚರಿಸಬೇಕು.

» ಶಿವಮೊಗ್ಗ ನಗರದಿಂದ ಹೊರಗೆ ಹೋಗುವ ಎಲ್ಲಾ ಬಗೆಯ ವಾಹನಗಳು ಅಶೋಕ ಸರ್ಕಲ್, ಎನ್.ಟಿ.ರಸ್ತೆ, ಸಂದೇಶ ಮೋಟರ್ಸ್ ಸರ್ಕಲ್, ಬೈಪಾಸ್ ರಸ್ತೆ ಮೂಲಕ ಸಂಚರಿಸಬೇಕು ಎಂದು ಜಿಲ್ಲಾಧಿಕಾರಿ ಅದೇಶದಲ್ಲಿ ಸೂಚಿಸಿದ್ದಾರೆ.

ಶಿವಮೊಗ್ಗ ಲೈವ್’ನಲ್ಲಿ ಸಾಲು ಸಾಲು ವರದಿ

ತುಂಗಾ ನದಿ ಹೊಸ ಸೇತುವೆ ಮೇಲಿನ ಯಮಸ್ವರೂಪಿ ಗುಂಡಿಗಳ ಕುರಿತು ಶಿವಮೊಗ್ಗ ಲೈವ್.ಕಾಂ ಸಾಲು ಸಾಲು ವರದಿ ಪ್ರಕಟಿಸಿತ್ತು. ಗುಂಡಿಗಳ ಕಾರಣಕ್ಕೆ ಸಾವು, ನೋವು ಸಂಭವಿಸಿದ ಕುರಿತು ವರದಿಯಲ್ಲಿ ತಿಳಿಸಿದ್ದೆವು. ಸಂಸದ ರಾಘವೇಂದ್ರ ಅವರು ರೈಲ್ವೆ ಮೇಲ್ಸೇತುವೆ ಕಾಮಗಾರಿ ಪರಿಶೀಲನೆಗೆ ಬಂದ ಸಂದರ್ಭ ಗುಂಡಿಗಳಿಗೆ ತೇಪೆ ಹಾಕಲಾಗಿತ್ತು. ಈ ಕುರಿತು ವರದಿ ಪ್ರಕಟವಾಗಿತ್ತು. ಅಧಿಕಾರಿಗಳ ನಡೆ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶವನ್ನು ವ್ಯಕ್ತಪಡಿಸಿದ್ದರು.

ಇದನ್ನೂ ಓದಿ | ಸಂಸದರ ಭೇಟಿಗೂ ಮುಂಚೆ ತುಂಗಾ ನದಿ ಹೊಸ ಸೇತುವೆ ಮೇಲಿನ ಗುಂಡಿಗಳು ಮಾಯ

ಇದನ್ನೂ ಓದಿ | ತುಂಗಾ ನದಿ ಸೇತುವೆ ಮೇಲೆ ಇನ್ನೆಷ್ಟು ಜನರ ಬಲಿಗಾಗಿ ಕಾಯುತ್ತಿದ್ದಾರೆ ಅಧಿಕಾರಿಗಳು? | ದೂರು ದುಮ್ಮಾನ

Shimoga Live News Website Reach Age Wise

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article cycle Shop owner returns purse ದುಡ್ಡು, ಪರ್ಸ್ ಕಳೆದುಕೊಂಡಿದ್ದ ಮಹಿಳೆಯ ಮನೆ ಹುಡುಕಿ ತಲುಪಿಸಿದ ಪಂಕ್ಚರ್ ಶಾಪ್ ರಫೀಕ್
Next Article farmer suicide poison ಶಿವಮೊಗ್ಗ – ಶಿಕಾರಿಪುರ – ರಾಣೆಬೆನ್ನೂರು ರೈಲ್ವೆ ಮಾರ್ಗ ಭೂ ಸ್ವಾಧೀನದಿಂದ ಬೇಸತ್ತು ರೈತ ಆತ್ಮಹತ್ಯೆ

ಇದನ್ನೂ ಓದಿ

130525 CS Shadakshari Press meet in shimoga
SHIVAMOGGA CITY

ಶಿವಮೊಗ್ಗದಲ್ಲಿ ಮೂರು ದಿನ ರಾಜ್ಯಮಟ್ಟದ ಸ್ಪರ್ಧೆಗಳು, ಭಾಗವಹಿಸ್ತಿದ್ದಾರೆ ಸಾವಿರ ಸಾವಿರ ಸರ್ಕಾರಿ ನೌಕರರು, ಹೇಗಿದೆ ವ್ಯವಸ್ಥೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
13/05/2025
BJP-President-BY-Vijayendra-Press-meet-in-shimoga.
POLITICSSHIVAMOGGA CITY

ಬಿಜೆಪಿಯಿಂದ ರಾಜ್ಯಾದ್ಯಂತ ತಿರಂಗ ಯಾತ್ರೆ, ಏನಿದು ಯಾತ್ರೆ? ಎಲ್ಲೆಲ್ಲಿ ಯಾವಾಗ ನಡೆಯುತ್ತೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
13/05/2025
120525-SN-Channabasappa-visits-kote-police-station.webp
CRIME DIARYSHIVAMOGGA CITY

ಶಿವಮೊಗ್ಗದಲ್ಲಿ ಪಾಕಿಸ್ತಾನದ ಪರ ವಾಟ್ಸಪ್ ಸ್ಟೇಟಸ್, ಬಿಜೆಪಿ ಆಕ್ರೋಶ, ಎಂಎಲ್‌ಎ ಗರಂ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/05/2025
Rambapuri-Swamiji-at-mandli-in-Shimoga-city
SHIVAMOGGA CITY

ಶಿವಮೊಗ್ಗದ ಮಂಡ್ಲಿ ದೇವಸ್ಥಾನಕ್ಕೆ ರಂಭಾಪುರ ಶ್ರೀ ಭೂಮಿ ಪೂಜೆ, ಏನೆಲ್ಲ ಆಶೀರ್ವಚನ ನೀಡಿದರು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/05/2025
Savirada-Vachana-in-Shimoga-city.
SHIVAMOGGA CITY

ವಿಶ್ವದಲ್ಲೆ ಮೊದಲ ಬಾರಿ, ಶಿವಮೊಗ್ಗದಲ್ಲಿ 1404 ಮಂದಿಯಿಂದ ವಚನ ಗಾಯನ, ಹೇಗಿತ್ತು? ಇಲ್ಲಿದೆ ಫೋಟೊ ಆಲ್ಬಂ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
09/05/2025
Shimoga-Freedom-Park
SHIVAMOGGA CITY

ಶಿವಮೊಗ್ಗದ ಫ್ರೀಡಂ ಪಾರ್ಕ್‌ಗೆ ಸಾರ್ವಜನಿಕ ಪ್ರವೇಶ ನಿರ್ಬಂಧ, ಯಾವ ಸಮಯದಲ್ಲಿ ನಿರ್ಬಂಧ? ಯಾಕೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
08/05/2025
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?