ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA, 30 JULY 2024 : ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆ ವ್ಯಾಪ್ತಿಯ ಶಿವಮೊಗ್ಗ ಹಾಲು ಒಕ್ಕೂಟದ (ಶಿಮುಲ್) ಆಡಳಿತ ಮಂಡಳಿ ಚುನಾವಣೆಗೆ (Election) ದಿನಾಂಕ ಪ್ರಕಟಿಸಲಾಗಿದೆ. ಇವತ್ತಿನಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ.
ಮತದಾನ ಯಾವಾಗ?
ಮುಂದಿನ ಐದು ವರ್ಷಕ್ಕೆ ಶಿಮುಲ್ನ ಆಡಳಿತ ಮಂಡಳಿಗೆ ನಿರ್ದೇಶಕರ ಆಯ್ಕೆಯಾಗಲಿದೆ. ಜುಲೈ 30ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಆಗಸ್ಟ್ 6ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ. ಆ.8ರಂದು ನಾಮಪತ್ರ ವಾಪಸ್ ಪಡೆಯಬಹುದು. ಆ.14ರಂದು ಮತದಾನ ನಡೆಯಲಿದೆ. ಬಳಿಕ ಮತ ಎಣಿಕೆ ಕಾರ್ಯ ನಡೆಯಲಿದ್ದು, ಫಲಿತಾಂಶ ಪ್ರಕಟಿಸಲಾಗುತ್ತದೆ. ಚುನಾವಣ ಅಧಿಕಾರಿಯಾಗಿ ತಹಶೀಲ್ದಾರ್ ಬಿ.ಎನ್.ಗಿರೀಶ್ ಅವರನ್ನು ನೇಮಕ ಮಾಡಲಾಗಿದೆ.
ಮೂರು ಜಿಲ್ಲೆಯಿಂದ 14 ನಿರ್ದೇಶಕರು
ಶಿಮುಲ್ ಆಡಳಿತ ಮಂಡಳಿಗೆ ಒಟ್ಟು 14 ನಿರ್ದೇಶಕರನ್ನು ಆಯ್ಕೆ ಮಾಡಲಾಗುತ್ತದೆ. ಮೂರು ಜಿಲ್ಲೆಗಳನ್ನು ನಾಲ್ಕು ವಿಭಾಗಗಳಾಗಿ ವಿಂಗಡಿಸಿ ನಿರ್ದೇಶರನ್ನು ಚುನಾಯಿಸಲಾಗುತ್ತದೆ. ಶಿವಮೊಗ್ಗ, ಭದ್ರಾವತಿ ವಿಭಾಗಗಳಿಂದ ತಲಾ ಮೂವರು, ದಾವಣಗೆರೆ ಮತ್ತು ಚಿತ್ರದುರ್ಗ ವಿಭಾಗಗಳಿಂದ ತಲಾ ನಾಲ್ವರು ನಿರ್ದೇಶಕರನ್ನು ಆಯ್ಕೆ ಮಾಡಬೇಕಾಗುತ್ತದೆ.

ಯಾರು ಮತದಾನ ಮಾಡಬಹುದು?
ಶಿಮುಲ್ ವ್ಯಾಪ್ತಿಯ ಹಾಲು ಉತ್ಪಾದಕರ ಸಹಕಾರ ಸಂಘಗಳ ಪ್ರತಿನಿಧಿಗಳು ನಿರ್ದೇಶಕರನ್ನು ಆಯ್ಕೆ ಮಾಡಬಹುದಾಗಿದೆ. ಒಕ್ಕೂಟದಲ್ಲಿ 1406 ಸಂಘಗಳಿವೆ. ಈ ಪೈಕಿ 1171 ಸಂಘಗಳು ಮತದಾನದ ಹಕ್ಕು ಪಡೆದುಕೊಂಡಿವೆ. 235 ಸಂಘಗಳು ಮತದಾನಕ್ಕೆ ಅನರ್ಹಗೊಂಡಿವೆ. ಮತದಾನಕ್ಕೆ ಅರ್ಹವಾಗಿರುವ ಸಂಘಗಳು ತಮ್ಮ ಒಬ್ಬ ಪ್ರತಿನಿಧಿಯನ್ನು ಮತದಾರರನ್ನಾಗಿ ಆಯ್ಕೆ ಮಾಡುತ್ತವೆ. ಈ ಪ್ರತಿನಿಧಿಯು ಒಬ್ಬ ನಿರ್ದೇಶಕರನ್ನು ಆಯ್ಕೆ ಮಾಡಬಹುದಾಗಿದೆ.

ಮತದಾನ ಹೇಗೆ ನಡೆಯಲಿದೆ?
ಒಕ್ಕೂಟವನ್ನು ನಾಲ್ಕು ವಿಭಾಗವಾಗಿ ವಿಂಗಡಿಸಲಾಗಿದೆ. ಶಿವಮೊಗ್ಗ ವಿಭಾಗಕ್ಕೆ ತೀರ್ಥಹಳ್ಳಿ, ಭದ್ರಾವತಿ, ಶಿವಮೊಗ್ಗ ತಾಲೂಕು ಸೇರಲಿವೆ. ಸಾಗರ ವಿಭಾಗಕ್ಕೆ ಸೊರಬ, ಸಾಗರ, ಹೊಸನಗರ, ಶಿಕಾರಿಪುರ ತಾಲೂಕು ಸೇರಲಿವೆ. ದಾವಣಗೆರೆ ವಿಭಾಗಕ್ಕೆ ಹರಿಹರ, ದಾವಣಗೆರೆ, ಹೊನ್ನಾಳಿ, ನ್ಯಾಮತಿ, ಚನ್ನಗಿರಿ, ಜಗಳೂರು ತಾಲೂಕು ಸೇರಲಿವೆ. ಚಿತ್ರದುರ್ಗ ವಿಭಾಗಕ್ಕೆ ಹೊಳಲ್ಕೆರೆ, ಚಿತ್ರದುರ್ಗ, ಹೊಸದುರ್ಗ, ಹಿರಿಯೂರು, ಚಳ್ಳಕೆರೆ, ಮೊಳಕಾಲ್ಮೂರು ತಾಲೂಕು ಸೇರಲಿವೆ. ಪ್ರತಿ ವಿಭಾಗದಿಂದ ಅತಿ ಹೆಚ್ಚು ಮತ ಪಡೆದವರನ್ನು ಆಯ್ಕೆ ಮಾಡಲಾಗುತ್ತದೆ.
ಇದನ್ನೂ ಓದಿ ⇓
ತೀರ್ಥಹಳ್ಳಿಯಲ್ಲಿ ಎಡೆಬಿಡದೆ ಮಳೆ, ಅಪಾಯದ ಮಟ್ಟದಲ್ಲಿ ತುಂಗೆ, ಶಾಲೆ, ಕಾಲೇಜಿಗೆ ರಜೆ
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






