Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗದ ರೈತರಿಗೆ ಶಿಮುಲ್’ನಿಂದ ಮಹಾಶಿವರಾತ್ರಿಯ ಗಿಫ್ಟ್

ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗದ ರೈತರಿಗೆ ಶಿಮುಲ್’ನಿಂದ ಮಹಾಶಿವರಾತ್ರಿಯ ಗಿಫ್ಟ್

28/02/2022 9:07 PM
ನಿತಿನ್‌ ಕೈದೊಟ್ಲು

SHIVAMOGGA LIVE NEWS | 28 ಫೆಬ್ರವರಿ 2022

ಇವತ್ತಿನ ಎಲ್ಲ NEWS
» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

shivamogga live news whatsappa number

ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಹಾಲು ಒಕ್ಕೂಟವು ರೈತರಿಗೆ ಮಹಾಶಿವರಾತ್ರಿ ಹಬ್ಬದ ಕೊಡುಗೆ ನೀಡಿದೆ. ಮಾರ್ಚ್ 1 ರಿಂದ ಒಕ್ಕೂಟದ ವ್ಯಾಪ್ತಿಯ ಜಿಲ್ಲೆಗಳಾದ ಶಿವಮೊಗ್ಗ ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ರೈತರಿಂದ ಖರೀದಿಸುವ ಹಾಲಿನ ದರವನ್ನು ಪ್ರತಿ ಲೀಟರ್’ಗೆ 2.50 ರೂ. ಹೆಚ್ಚಿಸಲಾಗಿದೆ.

Shimoga Nanjappa Hospital Cancer Care

ಶಿಮುಲ್’ನಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಶಿಮುಲ್ ಅಧ್ಯಕ್ಷ ಶ್ರೀಪಾದರಾವ್ ತಿಳಿಸಿದರು ಅವರು, ಒಕ್ಕೂಟವು ತನ್ನ ಒಕ್ಕೂಟದ ಆರ್ಥಿಕ ಪರಿಸ್ಥಿತಿಯನ್ನು ಅವಲೋಕಿಸಿ ಕಾಲ ಕಾಲಕ್ಕೆ ದರ ಪರಿಷ್ಕರಿಸುತ್ತಾ ಬಂದಿದೆ. ಒಕ್ಕೂಟದ ವ್ಯಾಪ್ತಿಯಲ್ಲಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಮಾರಾಟ ಪ್ರಗತಿಯಾಗಿದ್ದು ಫೆ.28 ರಂದು ನಡೆದ ಒಕ್ಕೂಟದ 416 ನೇ ಆಡಳಿತ ಮಂಡಳಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಪ್ರಸ್ತುತ ದರ ಕೆ.ಜಿ ಒಂದಕ್ಕೆ ರೂ. 25.63 ಇದ್ದು ಇದನ್ನು ಪ್ರತಿ ಕೆ.ಜಿ ಗೆ ರೂ.27.86 ಕ್ಕೆ (ಫ್ಯಾಟ್ 3.5% ಎಸ್ಎಫ್ಎನ್ 8.50 ಇರುವ ಹಾಲು)ಹೆಚ್ಚಿಸಲಾಗಿದೆ. ಈ ಪರಿಷ್ಕೃತ ದರವು ಮಾ.1 ರಿಂದ ಜಾರಿಗೆ ಬರಲಿದೆ. ಹೆಚ್ಚು ಹಾಲಿನ ಉತ್ಪಾದನೆ ಮತ್ತು ಹೆಚ್ಚು ಮಾರಾಟದ ಉದ್ದೇಶದಿಂದ ಹಾಗೂ ರೈತರಿಗೆ ಉತ್ತಮ ಆದಾಯ ನೀಡುವ ದೃಷ್ಟಿಯಿಂದ ಒಕ್ಕೂಟ ದರ ಹೆಚ್ಚಳದ ತೀಮರ್ಾನ ಕೈಗೊಂಡಿದೆ.

1.65 ಲಕ್ಷ ರೈತರು

ಒಕ್ಕೂಟದ ವ್ಯಾಪ್ತಿಯಲ್ಲಿ 1.65 ಲಕ್ಷ ರೈತರಿದ್ದು 1360 ಸೊಸೈಟಿಗಳಿವೆ. ಪ್ರತಿ ದಿನ ಗುಣಮಟ್ಟದ ಹಾಲನ್ನು ರೈತರಿಂದ ಸ್ವೀಕರಿಸಲಾಗುತ್ತಿದೆ. ಈಗ ಹೆಚ್ಚಿಸಿರುವ ದರದಿಂದ ಶಿಮುಲ್ ಪ್ರತಿ ತಿಂಗಳು 4.6 ಕೋಟಿ ರೂ. ಹೆಚ್ಚುವರಿ ಹಣ ಪಾವತಿಸಬೇಕಿದೆ. ಜನವರಿ ತಿಂಗಳಲ್ಲಿ ಒಕ್ಕೂಟಕ್ಕೆ 5.5 ಕೋಟಿ ರೂ., ಫೆಬ್ರವರಿಯಲ್ಲಿ 1.75 ಕೋಟಿ ರೂ. ಲಾಭ ಆಗಿದೆ.

ಮಾರ್ಚ್ ಅಂತ್ಯಕ್ಕೆ 2022 ನೇ ಸಾಲಿಗೆ ಅಂದಾಜು ರೂ. 65 ರಿಂದ 70 ಕೋಟಿ ನಿವ್ವಳ ಲಾಭವಾಗಲಿದೆ. ನಂದಿನಿ ಹಾಲು ಮತ್ತು ಉತ್ಪನ್ನಗಳು ಅತ್ಯುತ್ತಮ ಗುಣಮಟ್ಟದಿಂದ ಕೂಡಿದ್ದು, ಗುಣಮಟ್ಟದಲ್ಲಿ  ರಾಜ್ಯದಲ್ಲಿ 2 ನೇ ಸ್ಥಾನದಲ್ಲಿದೆ. ನಂದಿನಿ ಹಾಲಿಗೆ ಹೊರ ರಾಜ್ಯಗಳಿಂದ ಸಹ ಬೇಡಿಕೆ ಹೆಚ್ಚುತ್ತಿದೆ. ಇದೀಗ ದೆಹಲಿ, ಕೇರಳ, ತೆಲಂಗಾಣಗಳಿಗೆ ನಮ್ಮ ಹಾಲು ಹೋಗುತ್ತಿದೆ. ನಂದಿನಿ ಹಾಲನ್ನು ಪ್ರತಿ ಮನೆ ಮನೆಗೆ ತಲುಪಿಸುವ ನಿಟ್ಟಿನಲ್ಲಿ ಸಹ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದರು.

ಹಾಲಿನ ಪೌಡರ್ ಘಟಕ

ಶಿಮುಲ್ ಹಾಲು ಘಟಕದಲ್ಲಿ 150 ಕೋಟಿ ವೆಚ್ಚದಲ್ಲಿ ಹಾಲಿನ ಪೌಡರ್ ಘಟಕ ಸ್ಥಾಪಿಸಲು ಸರಕಾರಕ್ಕೆ ಮನವಿ ಮಾಡಲಾಗಿದೆ. ಸಂಸದ ಬಿ.ವೈ.ರಾಘವೇಂದ್ರ ಅವರು ಕೂಡ ನಮ್ಮ ಪರವಾಗಿ ಮನವಿ ಮಾಡಿದ್ದಾರೆ. ದಾವಣಗೆರೆಯಲ್ಲಿ 3 ಲಕ್ಷ ಲೀಟರ್ ಹಾಲು ಸಂಗ್ರಹಣಾ ಘಟಕ ಸ್ಥಾಪನೆಗೆ 300 ಕೋಟಿ ಅಗತ್ಯವಿದೆ. ಅದನ್ನು ಸರಕಾರದ ಗಮನಕ್ಕೆ ತಂದಿದ್ದೇವೆ.

ಸರಕಾರ ಅನುದಾನ ನೀಡಿದರೆ ರೈತರಿಗೆ ಇನ್ನಷ್ಟು ಅನುಕೂಲವಾಗಲಿದೆ. ಹಾಲು ಉತ್ಪಾದನಾ ವೆಚ್ಚ ಡಬಲ್ ಆಗಿದೆ. ರೈತರಿಗೆ ಈಗಿರುವ ದರ ಸಾಕಾಗುತ್ತಿಲ್ಲ. ಸರಕಾರ ರೈತರ ಪ್ರೋತ್ಸಾಹಧನ ಹೆಚ್ಚಳ ಮಾಡಬೇಕು. ಹಾಲಿದ ದರ ಹೆಚ್ಚಳ ಮಾಡಿದರೆ ರೈತರಿಗೆ ಇನ್ನಷ್ಟು ಲಾಭ ಸಿಗಲಿದೆ ಎಂದು ಶಿಮುಲ್ ಅಧ್ಯಕ್ಷ ಶ್ರೀಪಾದರಾವ್ ತಿಳಿಸಿದರು.

ಶಿಮುಲ್ ವ್ಯವಸ್ಥಾಪಕ ನಿರ್ದೇಶಕ ಬಸವರಾಜಪ್ಪ ಮಾತನಾಡಿ, ನಂದಿನಿ ಹಾಲಿನ ಬ್ರಾಂಡ್ ಹಳ್ಳಿ ಮಟ್ಟಕ್ಕೆ ಕೊಂಡೊಯ್ಯಲು ಯೋಜನೆ ರೂಪಿಸಲಾಗಿದೆ. ನಂದಿನಿ ಔಟ್ಲೇಟ್ ಪ್ರಾಂಚೈಸಿ ಬೇಕಾದವರು ಸಂಪರ್ಕಿಸಿದರೆ, ಅವರಿಗೆ ಬೇಕಾದ ಉಪಕರಣ ಹಾಗೂ ಬ್ರಾಂಡಿಂಗ್ ಮಾಡಿಕೊಡಲಾಗುವುದು. ಉತ್ತಮ ದರ್ಜೆಯ ಹಾಲಿನ ಕಾರಣಕ್ಕೆ ಹೊರ ರಾಜ್ಯಗಳಿಂದಲೂ ಹಾಲಿಗೆ ಬೇಡಿಕೆ ಇದೆ ಎಂದರು.  

ಶಿವಮೊಗ್ಗ ಹಾಲು ಒಕ್ಕೂಟದ ಆಡಳಿತ ಮಂಡಳಿ ನಿರ್ದೇಶಕರುಗಳು ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

ಇದನ್ನೂ ಓದಿ| ಇನ್ಮುಂದೆ ಹೈದರಾಬಾದ್‌ನಲ್ಲೂ ಸಿಗುತ್ತೆ ಶಿವಮೊಗ್ಗದ ಹಾಲು, ಮುತ್ತಿನ ನಗರಿಗೆ ಎಷ್ಟು ಲೀಟರ್ ಹೋಗುತ್ತೆ? ಮಾರಾಟ ಹೇಗೆ?

Shimoga Live news reach january report

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article crime name image ಹೊಸಮನೆಯಲ್ಲಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡ ವ್ಯಕ್ತಿ
Next Article Arrest News Graphics ಶಿವಮೊಗ್ಗದ ಖಾಸಗಿ ಬಸ್ ನಿಲ್ದಾಣದ ಬಳಿ ಯುವಕ ಅರೆಸ್ಟ್

ಇದನ್ನೂ ಓದಿ

Bommanakatte-incident-police-investigation-on
CRIME DIARYSHIVAMOGGA CITY

ಶಿವಮೊಗ್ಗದಲ್ಲಿ ವ್ಯಕ್ತಿಯ ಹತ್ಯೆ, ಕೆರೆ ಏರಿ ಬಳಿ ಮೃತದೇಹ ಪತ್ತೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
22/06/2025
Nanjappa-Hospital-Doctors-Cancer-operation
SHIVAMOGGA CITY

ಸೂಜಿ ಗಾತ್ರದ ರಂಧ್ರದಲ್ಲಿ ಆಪರೇಷನ್‌ ಮಾಡಿದ ಶಿವಮೊಗ್ಗದ ಡಾಕ್ಟರ್‌ಗಳು, ಏನಿದು ಶಸ್ತ್ರಚಿಕಿತ್ಸೆ? ಹೇಗಿತ್ತು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
18/06/2025
Shimoga-News-update
SHIVAMOGGA CITY

ಇಂದು, ನಾಳೆ ಶಿವಮೊಗ್ಗದಲ್ಲಿ ಎನ್‌ಇಎಸ್‌ ಹವ್ಯಾಸಿ ರಂಗತಂಡದಿಂದ ನಾಟಕ, ಎಲ್ಲೆಲ್ಲಿ ಪ್ರದರ್ಶನ ಇರಲಿದೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
17/06/2025
tunga-dam-water-release-and-mantapa-in-shimoga
SHIVAMOGGASHIVAMOGGA CITY

ತುಂಗಾ ಡ್ಯಾಮ್‌ ಎಲ್ಲ ಗೇಟ್‌ ಓಪನ್‌, ಮಂಟಪ ಮುಕ್ಕಾಲು ಭಾಗ ಮುಳುಗಡೆ, ನದಿಯಲ್ಲಿ ಎಷ್ಟು ನೀರು ಹರಿಯುತ್ತಿದೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
16/06/2025
power cut mescom ELECTRICITY
SHIVAMOGGA CITY

ಶಿವಮೊಗ್ಗ ಸಿಟಿಯ ವಿವಿಧೆಡೆ ಜೂನ್‌ 17, 18ರಂದು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
16/06/2025
021023 Gandhi Bazaar during 144 section in Shimoga
CRIME DIARYSHIVAMOGGA CITY

ಗಾಂಧಿ ಬಜಾರ್‌ ಬಟ್ಟೆ ಮಾರುಕಟೆಯಿಂದ ಹೊರ ಬಂದ ಕೆಲಸಗಾರನಿಗೆ ಕಾದಿತ್ತು ಆಘಾತ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
15/06/2025
Previous Next

ಶಿವಮೊಗ್ಗ ಲೈವ್ ಗ್ರೂಪ್ ಸೇರಲು ಕ್ಲಿಕ್ ಮಾಡಿ

🟢 shivamoggalive.com

whatsapp-logo
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?