| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
SHIVAMOGGA LIVE NEWS | 20 JANUARY 2023
SHIMOGA | ಉತ್ಪಾದಕರಿಂದ ಖರೀದಿಸುವ ಹಾಲಿನ (MILK) ದರವನ್ನು ಪರಿಷ್ಕರಿಸಿಲಾಗಿದೆ. ಪ್ರತಿ ಕೆ.ಜಿ. ಹಾಲಿಗೆ 1.50 ರೂ. ಹೆಚ್ಚಳ ಮಾಡಲಾಗಿದೆ ಎಂದು ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ (SHIMUL) ಪ್ರಕಟಣೆಯಲ್ಲಿ ತಿಳಿಸಿದೆ.
![]()
ಜ.16ರಂದು ಅಧ್ಯಕ್ಷ ಶ್ರೀಪಾದ್ ರಾವ್ ಅವರ ನೇತೃತ್ವದಲ್ಲಿ ನಡೆದ ಶಿಮುಲ್ ಆಡಳಿತ ಮಂಡಳಿ ಸಭೆಯಲ್ಲಿ ಉತ್ಪಾದಕರಿಂದ ಹಾಲು (MILK) ಖರೀದಿ ದರವನ್ನು ಹೆಚ್ಚಳ ಮಾಡಲು ತೀರ್ಮಾನಿಸಲಾಗಿದೆ. ದರ ಹೆಚ್ಚಳದಿಂದ ಒಕ್ಕಟದಿಂದ ಸಂಘಗಳಿಗೆ ಪ್ರತಿ ಕೆ.ಜಿ. ಹಾಲಿಗೆ 33.71 ರೂ. ದರ ನೀಡಲಾಗುತ್ತದೆ. ಸಂಘಗಳಿಂದ ಉತ್ಪಾದಕರಿಗೆ ಪ್ರತಿ ಕೆ.ಜಿ. ಹಾಲಿಗೆ 31.85 ರೂ. ದರ ನಿಗದಿಪಡಿಸಲಾಗಿದೆ.
ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗದ ಹಾಲು ಉತ್ಪಾದಕರಿಗೆ ಇದರ ಲಾಭ ದೊರೆಯಲಿದೆ. ಜ.21ರಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ ಎಂದು ಶಿಮುಲ್ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಂದಿನಿ ಸಿಹಿ ಲಸ್ಸಿ
ಒಕ್ಕೂಟದ ಆಡಳಿತ ಮಂಡಳಿ ಸಭೆಯಲ್ಲಿ ಅಧ್ಯಕ್ಷ ಎನ್.ಹೆಚ್.ಶ್ರೀಪಾದ ರಾವ್, ಉಪಾಧ್ಯಕ್ಷ ಹೆಚ್.ಕೆ.ಬಸಪ್ಪ, ನಿರ್ದೇಶಕರಾದ ಸಿ.ವೀರಭದ್ರ ಬಾಬು, ಡಿ.ಆನಂದ್, ವಿದ್ಯಾಧರ, ಜಗದೀಶಪ್ಪ ಬಣಕಾರ್, ಟಿ.ಶಿವಶಂಕರಪ್ಪ, ಪಿ.ತಿಪ್ಪೇಸ್ವಾಮಿ, ಹೆಚ್.ಬಿ.ದಿನೇಶ್, ಬಿ.ಜಿ.ಬಸವರಾಜಪ್ಪ, ಕೆ.ಎ.ತಾರಾನಾಥ, ಕೆ.ಎನ್.ಸೋಮಶೇಖರಪ್ಪ, ಜಿ.ಪಿ.ಯಶವಂತರಾಜು, ಎನ್.ಹೆಚ್.ಭಾಗ್ಯ, ಎಂ.ಸಿದ್ದಲಿಂಗಪ್ಪ, ಎನ್.ಡಿ.ಹರೀಶ್, ವ್ಯವಸ್ಥಾಪಕ ನಿರ್ದೇಶಕ ಡಾ. ಕೆ.ಎಸ್.ಬಸವರಾಜ, ಪಶು ಸಂಗೋಪನೆ ಇಲಾಖೆ ಉಪ ನಿರ್ದೇಶಕ ಡಾ. ಎಸ್.ಬಿ.ಯಲಿ, ಉಪ ನಿಬಂದಕ ವಾಸುದೇವ, ಕರ್ನಾಟಕ ಹಾಲು ಮಹಾಮಂಡಳದ ಪ್ರತಿನಿಧಿ ಬಿ.ಟಿ.ಕಿಶೋರ್, ಒಕ್ಕೂಟ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ – ಶಿವಮೊಗ್ಗದಲ್ಲಿ ವಾಹನ ಸವಾರರಿಗೆ ಗುಲಾಬಿ ಹೂವು ನೀಡಿದ ಪೊಲೀಸ್
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- BREAKING NEWS – ಶಿವಮೊಗ್ಗದ ಖ್ಯಾತ ಡಾಕ್ಟರ್ ಮತ್ತು ಪುತ್ರ ನೇಣಿಗೆ ಶರಣು
- ಬಿಸ್ಕತ್ತು, ಕೇಕ್, ಪಿಜ್ಜಾ, ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ, ಯಾರೆಲ್ಲ ಭಾಗವಹಿಸಬಹುದು?
- ಕ್ರೆಡಿಟ್ ಕಾರ್ಡ್ನಿಂದ ಹಣ ಕಡಿತ, ಎಸ್ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ
- ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?
- ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
- BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್ ಆದೇಶ, ಯಾಕೆ?
- ಶಿವಮೊಗ್ಗದಲ್ಲಿ ಬಸ್ ಹತ್ತಿ ಆಧಾರ್ ಕಾರ್ಡ್ ತೋರಿಸಲು ಮುಂದಾದ ಮಹಿಳೆಗೆ ಕಾದಿತ್ತು ಶಾಕ್, ಆಗಿದ್ದೇನು?
![]()