ಶಿವಮೊಗ್ಗದಲ್ಲಿ ಬೀದಿಗಿಳಿದರು ಹಾಲು ಉತ್ಪಾದಕರು, ರೈತರ ಬದುಕು ಉಳಿಸುವಂತೆ ಆಗ್ರಹ, ಕೇಂದ್ರದ ವಿರುದ್ಧ ಆಕ್ರೋಶ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-9-years-Number-1.avif

ಶಿವಮೊಗ್ಗ ಲೈವ್.ಕಾಂ | SHIMOGA | 22 ಅಕ್ಟೋಬರ್ 2019

ಮುಕ್ತ ವ್ಯಾಪಾರ ಒಪ್ಪಂದದ ವ್ಯಾಪ್ತಿಯಿಂದ ಹಾಲು ಮತ್ತು ಹಾಲಿನ ಉತ್ಪನ್ನಗಳಿಗೆ ವಿನಾಯಿತಿ ನೀಡಬೇಕು ಎಂದು ಒತ್ತಾಯಿಸಿ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳ ವ್ಯಾಪ್ತಿಯ ಶಿವಮೊಗ್ಗ ಹಾಲು ಒಕ್ಕೂಟದ ವತಿಯಿಂದ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

ನೀತಿ ಆಯೋಗದ ವರದಿಯಂತೆ ಹಾಲಿನ ಉತ್ಪಾದನೆಯಲ್ಲಿ ಭಾರತ ಸ್ವಾವಲಂಬಿಯಾಗಿದ್ದು, ಡೇರಿ ಉತ್ಪನ್ನ ರಫ್ತು ಮಾಡುವ ಅವಕಾಶ ಹೊಂದಿದೆ. ಇಂತಹ ಸಂದರ್ಭದಲ್ಲಿ ಮುಕ್ತ ವ್ಯಾಪಾರ ಒಪ್ಪಂದ (ರೀಜನಲ್ ಕಾಂಪ್ರಹೆನ್ಸಿವ್ ಎಕಾನಾಮಿಕ್ ಪಾರ್ಟನರ್ಶಿಪ್-RCEP) ಅಡಿ ಡೇರಿ ಉತ್ಪನ್ನಗಳನ್ನು ಆಮದು ಮಾಡಿಕೊಳ್ಳಲು ಅವಕಾಶ ನೀಡುವುದರಿಂದ ದೇಶದ ಹಾಲು ಉತ್ಪಾದಕರು ಮತ್ತು ಡೇರಿ ಕ್ಷೇತ್ರಕ್ಕೆ ತೀವ್ರ ತೊಂದರೆಯಾಗಲಿದೆ.

ಭಾರತದಲ್ಲಿ ಹೈನುಗಾರಿಕೆಯಿಂದ ಕೂಲಿಕಾರರು, ರೈತರು, ಮಹಿಳೆಯರು ಜೀವನ ನಡೆಸುತ್ತಿದ್ದಾರೆ. ಆದರೆ ನ್ಯೂಜಿಲೆಂಡ್, ಆಸ್ಟ್ರೇಲಿಯಾ, ಯುರೋಪ್ ದೇಶಗಳಲ್ಲಿ ತಾಂತ್ರಿಕತೆಯಿಂದ ಹೈನು ಉತ್ಪಾದನಾ ವೆಚ್ಚ ಕಡಿಮೆ ಇರುತ್ತದೆ. ಈ ಉತ್ಪನ್ನಗಳು ಭಾರತಕ್ಕೆ ಆಮದಾದಲ್ಲಿ ದೇಶೀ ಹೈನುಗಾರಿಕೆ ಕ್ಷೇತ್ರಕ್ಕೆ ಅಪಾರ ಹಾನಿಯಾಗುತ್ತದೆ. ಗ್ರಾಮೀಣ ಭಾಗದ ಹೈನುಗಾರರು ಉತ್ಪಾದಿಸಿದ ಹಾಲಿಗೆ ಗುಣಮಟ್ಟ ಆಧಾರಿತ ಮತ್ತು ಯೋಗ್ಯ ದರದಲ್ಲಿ ವರ್ಷವಿಡಿ ಮಾರುಕಟ್ಟೆ ಲಭ್ಯವಿದೆ. ಗ್ರಾಹಕ ಡೇರಿ ಉತ್ಪನ್ನಗಳಿಗೆ ನೀಡುವ ಶೇ.75ರಷ್ಟು ಮೊತ್ತ ಉತ್ಪಾದಕರಿಗೆ ಸೇರುತ್ತಿದೆ. ಆದರೆ ಬೇರೆ ದೇಶಗಳಲ್ಲಿ ಈ ಪ್ರಮಾಣ ಶೇ.30 ರಿಂದ 35ರಷ್ಟು ಇದೆ.

ಮೇಕ್ ಇನ್ ಇಂಡಿಯಾ ಸಾಕಾರವಾಗಲು ಅತಿದೊಡ್ಡ ದೇಶೀ ಮಾರುಕಟ್ಟೆಯನ್ನು ವಿದೇಶೀಯರಿಗೆ ತೆರೆದಿಡುವ ಬದಲು ಸ್ಥಳೀಯ ಹೈನುಗಾರರಿಗೆ ಉತ್ತೇಜನ ನೀಡಿ ಅವರ ಉದ್ಯೋಗ ಸ್ವಾವಲಂಬನೆಗೆ ಇಂಬು ಕೊಡಬೇಕಿದೆ. ಕೃಷಿ ನಂತರ ಹೈನುಗಾರಿಕೆ ಅತಿದೊಡ್ಡ ಉದ್ಯೋಗವಾಗಿದ್ದು ಈ ಕ್ಷೇತ್ರಕ್ಕೆ ಹಾನಿಯಾಗದಂತೆ ಸೂಕ್ತ ಎಚ್ಚರ ವಹಿಸಬೇಕು. ಡೇರಿ ಉತ್ಪನ್ನಗಳನ್ನು ಮುಕ್ತ ವ್ಯಾಪಾರ ಒಪ್ಪಂದದಿಂದ ಹೊರಗಿಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಶಿಮುಲ್ ಅಧ್ಯಕ್ಷ ಡಿ.ಆನಂದ್, ಪ್ರೊ. ಬಿ.ಎಂ.ಕುಮಾರ ಸ್ವಾಮಿ, ಹೆಚ್.ಬಿ.ದಿನೇಶ್, ತಾರಾನಾಥ್ ಮತ್ತು ಹಾಲು ಉತ್ಪಾದಕ ಸಂಘಟನೆಗಳ ಪ್ರಮುಖರು ಇದ್ದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200

ಸುದ್ದಿಗಾಗಿ ಕರೆ ಮಾಡಿ – 9964634494

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 22, 2019

ಊರಗಡೂರಿನ ಸಂಕೇತ್‌ ಸಮಾಧಿ ಒಡೆದ ದುಷ್ಕರ್ಮಿಗಳು, ಪೋಷಕರ ಆಕ್ರೋಶ

ಊರಗಡೂರಿನ ಸಂಕೇತ್‌ ಸಮಾಧಿ ಒಡೆದ ದುಷ್ಕರ್ಮಿಗಳು, ಪೋಷಕರ ಆಕ್ರೋಶ

ಶಿವಮೊಗ್ಗದಲ್ಲಿ ನಡುರಾತ್ರಿ ಮಳೆ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಇಂದಿನ ಹಾವಾಮಾನ ವರದಿ

ಶಿವಮೊಗ್ಗದಲ್ಲಿ ನಡುರಾತ್ರಿ ಮಳೆ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಇಂದಿನ ಹಾವಾಮಾನ ವರದಿ

ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್‌, ದಾಖಲಾಯ್ತು ಕೇಸ್

ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್‌, ದಾಖಲಾಯ್ತು ಕೇಸ್

ಗುಡ್ಡೇಕಲ್‌ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

ಗುಡ್ಡೇಕಲ್‌ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

ಭದ್ರಾವತಿಯ ಭದ್ರಾ ನದಿಗೆ ರಾಶಿ ರಾಶಿ ತ್ಯಾಜ್ಯ, ವೈಜ್ಞಾನಿಕ ಕ್ರಮಕ್ಕೆ ಒತ್ತಾಯ

ಭದ್ರಾವತಿಯ ಭದ್ರಾ ನದಿಗೆ ರಾಶಿ ರಾಶಿ ತ್ಯಾಜ್ಯ, ವೈಜ್ಞಾನಿಕ ಕ್ರಮಕ್ಕೆ ಒತ್ತಾಯ

ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

ಶಿವಮೊಗ್ಗ ಜಿಲ್ಲೆಯ ಮನೆ ಮನೆಗೂ ಭೇಟಿ ನೀಡ್ತಾರೆ ಗಣತಿದಾರರು, ಏನೇನು ಮಾಹಿತಿ ಕೊಡಬೇಕು?

ಶಿವಮೊಗ್ಗ ಜಿಲ್ಲೆಯ ಮನೆ ಮನೆಗೂ ಭೇಟಿ ನೀಡ್ತಾರೆ ಗಣತಿದಾರರು, ಏನೇನು ಮಾಹಿತಿ ಕೊಡಬೇಕು?

ಕೇಕ್‌, ಬಿಸ್ಕತ್ತು, ಕುಕೀಸ್‌ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

ಕೇಕ್‌, ಬಿಸ್ಕತ್ತು, ಕುಕೀಸ್‌ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

Leave a Comment