ಶಿವಮೊಗ್ಗ: ಜಿಲ್ಲೆಯಲ್ಲಿರುವ ಎಲ್ಲ ಕೊಳಚೆ ಪ್ರದೇಶಗಳನ್ನು (slum free) ಗುರುತಿಸಿ ಅಲ್ಲಿಯ ನಿವಾಸಿಗಳಿಗೆ ಹಕ್ಕುಪತ್ರ ನೀಡಿ ಮುಖ್ಯವಾಹಿನಿಗೆ ತರಲು ಆಂದೋಲನದ ರೀತಿಯಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಸಚಿವ ಮಧು ಬಂಗಾರಪ್ಪ ಅಧಿಕಾರಿಗಳಿಗೆ ಸೂಚಿಸಿದರು.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿದ ಮಧು ಬಂಗಾರಪ್ಪ, ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಕೊಳಚೆ ಪ್ರದೇಶಗಳನ್ನು ಗುರುತಿಸಿ ನಿವಾಸಿಗಳಿಗೆ ಹಕ್ಕುಪತ್ರ, ಇ-ಸ್ವತ್ತು ನೀಡಲು ಕ್ರಮ ಜರುಗಿಸಬೇಕು ಎಂದು ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಿಧಾನ ಪರಿಷತ್ ಸದಸ್ಯೆ ಬಲ್ಕಿಸ್ ಬಾನು, ಜಿಲ್ಲಾ ಪಂಚಾಯಿತಿ ಸಿಇಓ ಹೇಮಂತ್ ಎನ್, ಸಿಸಿಎಫ್ ಹನುಮಂತಪ್ಪ, ಅಪರ ಜಿಲ್ಲಾಧಿಕಾರಿ ಅಭಿಷೇಕ್.ವಿ, ವಿಧಾನ ಪರಿಷತ್ ಮಾಜಿ ಸದಸ್ಯ ಪ್ರಸನ್ನಕುಮಾರ್, ಕೃಷಿ ಮಹಾವಿದ್ಯಾಲಯದ ಆಡಳಿತ ಮಂಡಳಿ ಸದಸ್ಯ ದೇವಿಕುಮಾರ್, ಎಸಿ ಸತ್ಯನಾರಾಯಣ, ಡಿಯುಡಿಸಿ ಅಧಿಕಾರಿಗಳು, ಅರಣ್ಯ ಇಲಾಖೆ ಅಧಿಕಾರಿಗಳು, ಸ್ಲಂ ಬೋರ್ಡ್ ಅಧಿಕಾರಿಗಳು, ಡಿಡಿಪಿಐ, ಇತರೆ ಇಲಾಖೆ ಅಧಿಕಾರಿಗಳು ಹಾಜರಿದ್ದರು.

LATEST NEWS
- ಶಿವಮೊಗ್ಗಕ್ಕೆ ಡಿಜಿಪಿ ಅಲೋಕ್ ಕುಮಾರ್, ಕೇಂದ್ರ ಕಾರಾಗೃಹಕ್ಕೆ ಭೇಟಿ

- ಶಿವಮೊಗ್ಗದಲ್ಲಿ ರೈಲಿಗೆ ಸಿಲುಕಿದ ವ್ಯಕ್ತಿ ಸಾವು, ಎರಡು ಭಾಗವಾದ ದೇಹ

- ಒಂದು ಮೆಸೇಜ್, ಶಿವಮೊಗ್ಗದ ವ್ಯಕ್ತಿಯ ಬ್ಯಾಂಕ್ ಖಾತೆಯಿಂದ ₹6.50 ಲಕ್ಷ ಮಾಯ, ಏನಿತ್ತು ಮೆಸೇಜ್ನಲ್ಲಿ?

- ಸಂಸದ ರಾಘವೇಂದ್ರ ಕಾರಿಗೆ ಮತ್ತೊಂದು ಕಾರು ಡಿಕ್ಕಿ, ಆಗಿದ್ದೇನು?

- ಅರಬಿಳಚಿ ದುರಂತ, ಭದ್ರಾ ನಾಲೆಯಲ್ಲಿ ಎರಡನೇ ಮೃತದೇಹ ಪತ್ತೆ

About The Editor
ನಿತಿನ್ ಆರ್.ಕೈದೊಟ್ಲು





