ಮಾಜಿ ಸಿಎಂ ಯಡಿಯೂರಪ್ಪಗೆ ಶಿವಮೊಗ್ಗದಲ್ಲಿ ಕೆಳದಿ ಶಿವಪ್ಪನಾಯಕ ಪ್ರಶಸ್ತಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 6 ಮಾರ್ಚ್ 2022

ಅಖಿಲ ಭಾರತ ವೀರಶೈವ ಮಹಾಸಭಾದ ವತಿಯಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೆಳದಿ ಶಿವಪ್ಪನಾಯಕ ಪ್ರಶಸ್ತಿ ಪ್ರದಾನ ಮಾಡಲಾಯಿತು.

Shimoga Nanjappa Hospital

ಕುವೆಂಪು ರಂಗಮಂದಿರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ, ಬೆಕ್ಕಿನ ಕಲ್ಮಠದ ಶ್ರೀ ಡಾ. ಮಲ್ಲಿಕಾರ್ಜುನ ಮುರುಘ ರಾಜೇಂದ್ರ ಸ್ವಾಮೀಜಿ ಮತ್ತು ಬಸವಕೇಂದ್ರದ ಶ್ರೀ ಡಾ. ಬಸವ ಮರುಳಸಿದ್ಧ ಸ್ವಾಮೀಜಿ ಅವರು ಪ್ರಶಸ್ತಿ ಪ್ರಧಾನ ಮಾಡಿದರು.

ಏರ್ ಪೋರ್ಟ್’ಗೆ ಹಿರಿಯರು ಸೂಚಿಸಿದ ಹೆಸರು

ಪ್ರಶಸ್ತಿ ಸ್ವೀಕರಿಸಿ  ಮಾತನಾಡಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಶಿವಮೊಗ್ಗ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಶಕ್ತಿ ಮೀರಿ ಪ್ರಯತ್ನ ಮಾಡಿದ್ದೇನೆ. ನಾಡಿನ ಅಭಿವೃದ್ಧಿ ಪಥದಲ್ಲಿ ತೆಗೆದುಕೊಂಡು ಹೋಗುವ ಪ್ರಯತ್ನವಾಗಿದೆ. ಪೂಜ್ಯರ ಆಶೀರ್ವಾದ ಇದ್ದಾಗ ಮತ್ತಷ್ಟು ಕೆಲಸ ಮಾಡುವ ಶಕ್ತಿ ಬರಲಿದೆ ಎಂದರು.

BS Yedyurappa Speaking at Kuvempu Rangamandira

ಕೆಳದಿ ಶಿವಪ್ಪನಾಯಕ ಅವರು ಕೃಷಿಗೆ ಹೆಚ್ಚು ಆದ್ಯತೆ ನೀಡಿದ್ದರು. ಆದ್ದರಿಂದ ಶಿವಮೊಗ್ಗದ ಕೃಷಿ ವಿಶ್ವವಿದ್ಯಾಲಯಕ್ಕೆ ಆವರ ಹೆಸರು ಇಡಲಾಗಿದೆ. ಇನ್ನು ನಾಲ್ಕೈದು ತಿಂಗಳಲ್ಲಿ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಳ್ಳಲಿದೆ. ಎಲ್ಲರ ಅಭಿಪ್ರಾಯ ಪಡೆದು ಯಾವ ಹೆಸರು ಸೂಚಿಸುತ್ತಾರೋ ಅದೆ ಹೆಸರು ಇಡುವಂತೆ ಮುಖ್ಯಮಂತ್ರಿ ಅವರಿಗೆ ಒತ್ತಾಯ ಮಾಡುತ್ತೇನೆ ಎಂದರು.

ಸರ್ವ ಜನರಿಗೆ ಅನುಕೂಲ

ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಮಾತನಾಡಿ, ಕೆಳದಿ ಅರಸರಲ್ಲಿ ಶಿವಪ್ಪನಾಯಕ ಅವರು ಹೆಚ್ಚು ಜನಜನಿತವಾಗಿದ್ದರು. ಎಲ್ಲಾ ವರ್ಗದವರನ್ನು ಸಮಾನವಾಗಿ ಕಂಡಿದ್ದರು. ಅವರ ಹೆಸರಿನ ಪ್ರಶಸ್ತಿಯನ್ನು ಯಡಿಯೂರಪ್ಪ ಅವರಿಗೆ ನೀಡಲಾಗುತ್ತಿದೆ. ಅವರ ಆಡಳಿತಾವಧಿಯಲ್ಲಿ ಕೃಷಿ ಬಜೆಟ್ ಮಂಡಿಸಿ, ಸರ್ವ ಜನರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ ಎಂದರು.

ಪ್ರಶಂಸೆಗೆ ಮೀರಿದ ವ್ಯಕ್ತಿ

ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ, ಸಾಹಿತಿ ಡಾ. ಗೊ.ರು. ಚನ್ನಬಸಪ್ಪ ಮಾತನಾಡಿ, ಯಡಿಯೂರಪ್ಪ ಅವರು ಪ್ರಶಂಸೆಯನ್ನು ಮೀರಿದ ವ್ಯಕ್ತಿ. ಬದುಕಿನ ಧ್ಯೇಯ ಕುರಿತು ವಿಚಾರ ಮಾಡಬೇಕು, ಅಳವಡಿಸಿಕೊಂಡು ಬದುಕುವುದೆ ಅವರಿಗೆ ಮಾಡಿದ ಪ್ರಶಂಸೆ. ಮೈತುಂಬ ಗಾಯ, ನೋವುಗಳನ್ನು ಅನುಭವಿಸಿ ನಾಡಿನ ಅಭ್ಯುದಯಕ್ಕೆ ಹೋರಾಟ ಮಾಡಿದ್ದಾರೆ ಯಡಿಯೂರಪ್ಪ  ಎಂದು ಹೇಳಿದರು.

Shimoga Nanjappa Hospital

ಸಂಸದ ಬಿ.ವೈ.ರಾಘವೇಂದ್ರ, ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ, ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್, ಎಸ್.ರುದ್ರೇಗೌಡ, ಡಿ.ಎಸ್.ಅರುಣ್, ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ, ಸರ್ಕಾರ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ, ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ ರುದ್ರಮುನಿ ಸಜ್ಜನ್ ಸೇರಿದಂತೆ ಹಲವರು ಇದ್ದರು.

ಈ ಮೇಲ್ – shivamoggalive@gmail.com

WhatsApp Number – 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 6, 2022

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment