SHIVAMOGGA LIVE NEWS | 3 MARCH 2024
SHIMOGA : ಲೋಕಸಭೆ ಚುನಾವಣೆಗೆ ಗೀತಾ ಶಿವರಾಜ್ ಕುಮಾರ್ ಸ್ಪರ್ಧಿಸುವ ಕುರಿತು ನಟ ಶಿವರಾಜ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಸಚಿವ ಮಧು ಬಂಗಾರಪ್ಪ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಮುಖ ಸಂಗತಿಗಳ ಕುರಿತು ಮಾತನಾಡಿದರು.
3 ಪ್ರಮುಖ ಪಾಯಿಂಟ್
ಪತ್ನಿ ಗೀತಾ ಶಾಸಕಿ, ಸಂಸದೆಯಾಗಿ ಆಯ್ಕೆಯಾಗಬೇಕು ಎಂಬ ಆಸೆ ಎಲ್ಲರಂತೆ ಪತಿಯಾಗಿ ನನಗೂ ಇದೆ. ಗೀತಾ ಶಿವರಾಜ್ಕುಮಾರ್ ಈಗಾಗಲೇ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಶಾಸಕಿ ಅಥವಾ ಸಂಸದೆಯಾಗಿ ಆಯ್ಕೆಯಾದರೆ ಮಹಿಳೆಯರಿಗೊಂದು ಸ್ಫೂರ್ತಿ ದೊರೆಯಲಿದೆ. ಇದಕ್ಕಾಗಿಯೇ ಅವರು ಜನಪ್ರತಿನಿಧಿ ಆಗಬೇಕು ಎಂಬ ಆಸೆ ಇದೆ.
ಗೀತಾ ಶಿವರಾಜ್ಕುಮಾರ್ ಅವರನ್ನು ಒಬ್ಬ ಸೆಲೆಬ್ರಿಟಿ ಆಗಿ ನೋಡುವ ಅಗತ್ಯ ಇಲ್ಲ. ಸಮಾಜ ಸೇವೆಯಲ್ಲಿ ಎಲ್ಲರ ಜೊತೆಗೆ ಬೆರೆಯುತ್ತಿದ್ದಾರೆ. ಆಕೆ ರಾಜಕೀಯ ಕುಟುಂಬದಿಂದ ಬಂದಿರುವುದರಿಂದ ಸಹಜವಾಗಿ ಚುನಾವಣೆಯಲ್ಲಿ ಸ್ಪರ್ಧಿಸುವ ಆಶಯ ಹೊಂದಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಸಚಿವ ಮಧು ಜನ್ಮದಿನ, ‘ಸ್ಪೆಷಲ್ ಕೇಕ್ನ ಸೀಕ್ರೆಟ್’ ಬಹಿರಂಗಪಡಿಸಿದ ನಟ ಶಿವರಾಜ್ ಕುಮಾರ್
ಪಕ್ಷದ ಹೈಕಮಾಂಡ್ ಅವಕಾಶ ನೀಡಿದರೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಾರೆ. ಇಲ್ಲವಾದರೆ ಬೇಸರವಿಲ್ಲ. ನಾವು ಎಲ್ಲದಕ್ಕೂ ಸಿದ್ಧರಿದ್ದೇವೆ. ಚುನಾವಣೆಯಲ್ಲಿ ಸ್ಪರ್ಧಿಸಿದರೆ ನನ್ನ ಬೆಂಬಲ ಇರುತ್ತದೆ. ಪ್ರಚಾರಕ್ಕೂ ಬರುತ್ತೇನೆ. ಸಿನಿಮಾ ಚಿತ್ರೀಕರಣದ ದಿನಗಳನ್ನು ನೋಡಿಕೊಂಡು ಪ್ರಚಾರ ನಡೆಸುತ್ತೇನೆ. ನಾನು ಸಿನಿಮಾರಂಗದಲ್ಲಿ ಇರುವುದರಿಂದ ರಾಜಕೀಯಕ್ಕೆ ಬರುವ ಯಾವುದೇ ಉದ್ದೇಶ ಹೊಂದಿಲ್ಲ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200