| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
SHIVAMOGGA LIVE NEWS | 5 SEPTEMBER 2023
ಶಿವಮೊಗ್ಗದಲ್ಲಿ ‘ನಿರಾಕರಣೆʼಗೆ ಉತ್ತಮ ಪ್ರತಿಕ್ರಿಯೆ
SHIMOGA : ಹೊಂಗಿರಣ ಸಂಸ್ಥೆ ವತಿಯಿಂದ ಸುವರ್ಣ ಸಂಸ್ಕೃತಿ ಭವನದಲ್ಲಿ ‘ನಿರಾಕರಣೆʼ ಏಕವ್ಯಕ್ತಿ ರಂಗಪ್ರಯೋಗ ಆಯೋಜಿಸಲಾಗಿತ್ತು. ಲೇಖಕಿ ವೀಣಾ ಶಾಂತೇಶ್ವರಿ ಅವರ ಕಥೆ ಆಧರಿಸಿ ಡಾ. ಸಾಸ್ವೆಹಳ್ಳಿ ಸತೀಶ್ ನಿರ್ದೇಶಿಸಿರುವ ನಾಟಕದಲ್ಲಿ ಶೃತಿ ಆದರ್ಶ ಅವರು ಅಭಿನಯಿಸಿದರು. ಏಕವ್ಯಕ್ತಿ ರಂಗ ಪ್ರಯೋಗಕ್ಕೆ ಶಿವಮೊಗ್ಗದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.
ಇದನ್ನೂ ಓದಿ – ಅಡಕತ್ತರಿಯಲ್ಲಿ ಶಿವಮೊಗ್ಗದ ಸಾವಿರ ಆಟೋ ಚಾಲಕರು, ಸಾಲ ಕಟ್ಟಲಾಗುತ್ತಿಲ್ಲ, ಜೀವನ ನಿರ್ವಹಣೆ ಮಾಡಲಾಗುತ್ತಿಲ್ಲ
ಪಾಕಿಸ್ತಾನಕ್ಕೆ ಹೋಗಿ ಎಂದ ಶಿಕ್ಷಕಿ ಬೇರೆ ಶಾಲೆಗೆ ವರ್ಗಾವಣೆ
SHIMOGA : ‘ನೀವು ಪಾಕಿಸ್ತಾನಕ್ಕೆ ಹೋಗಿʼ ಎಂದು ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಬೈದಿದ್ದರು ಎಂಬ ಆರೋಪದ ಹಿನ್ನೆಲೆ ಶಿಕ್ಷಕಿಯನ್ನು ನಿಯೋಜನೆ ಮೇಲೆ ಬೇರೆ ಶಾಲೆಗೆ ವರ್ಗಾಯಿಸಲಾಗಿದೆ. ಉರ್ದು ಶಾಲೆಯೊಂದರ ಶಿಕ್ಷಕಿಯೊಬ್ಬರು ಆ.30ರಂದು ವಿದ್ಯಾರ್ಥಿಗಳಿಗೆ ಬೈದಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಈ ಕುರಿತು ಮಕ್ಕಳು ಪೋಷಕರ ಬಳಿ ಹೇಳಿದ್ದರು. ಈ ಹಿನ್ನೆಲೆ ಜೆಡಿಎಸ್ ಶಿವಮೊಗ್ಗ ನಗರ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ನಸರುಲ್ಲಾ ನೇತೃತ್ವದಲ್ಲಿ ಪೋಷಕರು ಶಾಲೆಗೆ ತೆರಳಿ ಮುಖ್ಯ ಶಿಕ್ಷಕರು ಮತ್ತು ಬಿಇಒ ಅವರಿಗೆ ದುರು ನೀಡಿದ್ದರು. ಈ ಹಿನ್ನೆಲೆ ಶಿಕ್ಷಕಿಯನ್ನು ನಿಯೋಜನೆ ಮೇಲೆ ಬೇರೆ ಶಾಲೆಗೆ ವರ್ಗಾಯಿಸಲಾಗಿದೆ. ಅಲ್ಲದೆ ಅವರ ವಿರುದ್ಧ ಇಲಾಖೆ ವಿಚಾರಣೆ ನಡೆಸಲಾಗುತ್ತಿದೆ.
ಇದನ್ನೂ ಓದಿ – 5 ತಿಂಗಳಿಂದ ಸಂಬಳವಿಲ್ಲ, 8 ತಿಂಗಳಿಂದ ಪ್ರಯಾಣ ಭತ್ಯೆ ಇಲ್ಲ, ಪ್ರತಿಭಟನೆಗೆ ಬಂದವರಿಗೆ ಸಿಕ್ತು ಮಹತ್ವದ ಭರವಸೆ
ಮಳೆಗಾಗಿ ಕುಂಸಿಯಲ್ಲಿ ವಿಶೇಷ ಪೂಜೆ
KUMSI : ಮಳೆಗಾಗಿ ಪ್ರಾರ್ಥಿಸಿ ಕುಂಸಿಯ ಗುರುಪಾದ ಮಟ್ಟಿಯ ಶ್ರೀ ಗುರುಪಾದೇಶ್ವರನಿಗೆ ಗ್ರಾಮಸ್ಥರು ವಿಶೇಷ ಪೂಜೆ ಸಲ್ಲಿಸಿದರು. ಗಣ ಹೋಮ, ವಾಸ್ತು ಹೋಮ, ನವಗ್ರಹ ಹೋಮ, ಮರ್ಜನ ಹೋಮ ನಡೆಸಲಾಯಿತು. ಸೋಮವಾರ 108 ಕುಂಬಾಭಿಷೇಷಕ, ಶಿವ ಸಹಸ್ರನಾಮಾವಳಿ ನೆರವೇರಿಸಿದರು. ಮಹಾಪೂಜೆಯಲ್ಲಿ ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ್ಯಾನಾಯ್ಕ್ ಭಾಗವಹಿಸಿದ್ದರು.
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಶಿವಮೊಗ್ಗದಲ್ಲಿ ಪೊಲೀಸರ ದಾಳಿ, ಸಾಗರದ ವ್ಯಕ್ತಿ ಅರೆಸ್ಟ್, ಕಾರಣವೇನು?
- ದಿನ ಪಂಚಾಂಗ, ಇಂದಿನ ರಾಶಿ ಭವಿಷ್ಯ – ಓದಲು ಇಲ್ಲಿ ಕ್ಲಿಕ್ ಮಾಡಿ
- ಭದ್ರಾವತಿಯಲ್ಲಿ ರೈಲಿನಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಶಿವಮೊಗ್ಗದಲ್ಲಿ ಸಾವು
- ಮಹಿಳೆಯರಿಗೆ ಗುಡ್ ನ್ಯೂಸ್, ಶಿವಮೊಗ್ಗದಲ್ಲಿ ನಾಳೆ ಉತ್ಸವ್ ಮೇಳ, ಏನೇನೆಲ್ಲ ಇರುತ್ತೆ?
- ಅಡಿಕೆ ಧಾರಣೆ | 11 ಡಿಸೆಂಬರ್ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?
- ಶಿವಮೊಗ್ಗದಲ್ಲಿ ನಾಳೆ ಕಂದಾಯೋತ್ಸವ, ಎರಡು ದಿನ ಏನೇನು ಕಾರ್ಯಕ್ರಮ ನಡೆಯಲಿದೆ?
- ಮರದಿಂದ ಬಿದ್ದು ಕಾಳಿಂಗ ಸರ್ಪ ಸಾವು, ಎಲ್ಲಿ? ಹೇಗಾಯ್ತು?
- ಭದ್ರಾವತಿ ಆಕಾಶವಾಣಿಯಲ್ಲಿ ಹೆಲ್ತ್ ಹಿಂಟ್ಸ್, ಬದುಕು ಜಟಕಾಬಂಡಿ ಕಾರ್ಯಕ್ರಮ, ಟೈಮಿಂಗ್ ಏನು?
![]()