ಶಿವಮೊಗ್ಗದಲ್ಲಿ ಯುವನಿಧಿ ಯೋಜನೆಗೆ ಚಾಲನೆ, ಯೋಜನೆಯಿಂದ ಏನೇನೆಲ್ಲ ಲಾಭವಿದೆ? ಇಲ್ಲಿದೆ ಸಿಎಂ ಹೇಳಿದ 4 ಪಾಯಿಂಟ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 12 JANUARY 2024

SHIMOGA : ದೇಶದಲ್ಲಿ ನಿರುದ್ಯೋಗ ಪ್ರಮಾಣ ಹೆಚ್ಚಾಗಿದೆ. ಈ ಸಮಸ್ಯೆಯನ್ನು ದೂರಗೊಳಿಸಿ, ಯುವಕರಲ್ಲಿ ಆತ್ಮಶಕ್ತಿ ತುಂಬುವುದು ಯುವನಿಧಿ ಯೋಜನೆಯ ಮೂಲ ಉದ್ದೇಶ. ನಿರುದ್ಯೋಗಿ ಪದವೀಧರರಿಗೆ ಪ್ರತಿ ತಿಂಗಳು ಭತ್ಯೆ ನೀಡುವುದರ ಜೊತೆಗೆ ಕೌಶಲ್ಯ ಅಭಿವೃದ್ಧಿಗು ಯೋಜನೆ ಸಿದ್ದಪಡಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ನಗರದ ಫ್ರೀಡಂ ಪಾರ್ಕ್‌ನಲ್ಲಿ ಭತ್ತ ತುಂಬಿದ ಕೊಳಗದಲ್ಲಿ ಹೊಂಬಾಳೆ ಅನಾವರಣ ಮಾಡುವ ಮೂಲಕ ಯುವನಿಧಿ ಯೋಜನೆಗೆ ಚಾಲನೆ ನೀಡಿದರು. ರಾಷ್ಟ್ರೀಯ ಯುವದಿನದ ಅಂಗವಾಗಿ ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಗೌರವ ಸಲ್ಲಿಸಿ ಮಾತನಾಡಿದರು.

ಸಿಎಂ ಹೇಳಿದ ಮೂರು ಪಾಯಿಂಟ್

POINT-1-jpg.webpಪದವಿ ಮತ್ತು ಡಿಪ್ಲೋಮಾ ಪಡೆದು ಉದ್ಯೋಗ ಲಭಿಸದೆ ಇರುವ ಯುವಕರಿಗೆ ಎರಡು ವರ್ಷದವರೆಗೆ ಪ್ರತಿ ತಿಂಗಳು ಭತ್ಯೆ ನೀಡಲಾಗುತ್ತದೆ. ಮಾರುಕಟ್ಟೆಯಲ್ಲಿ ಯಾವ ಕ್ಷೇತ್ರಕ್ಕೆ ಯಾವ ಕೌಶಲ್ಯದ ಅಗತ್ಯವಿದೆಯೊ ಅದಕ್ಕೆ ತಕ್ಕ ಕೌಶಲ್ಯಾಭಿವೃದ್ಧಿಗು ಒತ್ತು ನೀಡಲಾಗುತ್ತಿದೆ. ಜೊತೆಗೆ ಉದ್ಯೋಗ ಮೇಳಗಳನ್ನು ಆಯೋಜಿಸಿ ನಿರುದ್ಯೋಗ ಸಮಸ್ಯೆ ನಿವಾರಣೆ ಮಾಡುವುದು ಈ ಯೋಜನೆಯ ಪ್ರಮುಖ ಗುರಿ.

POINT-2-jpg.webpದೇಶದಲ್ಲಿ 2014ರಲ್ಲಿ ನಿರುದ್ಯೋಗ ಪ್ರಮಾಣ ಶೇ.5.5ರಷ್ಟಿತ್ತು. ಈಗ ಶೇ.10.5ಕ್ಕೆ ಏರಿಕೆಯಾಗಿದೆ. ಇದೆ ಕಾರಣಕ್ಕೆ ರಾಜ್ಯ ಸರ್ಕಾರ ಯುವನಿಧಿ ಯೋಜನೆ ಜಾರಿಗೊಳಿಸಿದೆ.

POINT-3-jpg.webpಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸುವ ಮೂಲಕ ರಾಜ್ಯ ಸರ್ಕಾರ ನುಡಿದಂತೆ ನಡೆದಿದೆ. ಗ್ಯಾರಂಟಿ ಯೋಜನೆಗಳಿಂದ ಪ್ರಸ್ತುತ ರಾಜ್ಯದಲ್ಲಿ 1.20 ಕೋಟಿ ಕುಟುಂಬಗಳಿಗೆ ಪ್ರತಿ ತಿಂಗಳು ಐದರಿಂದ ಆರು ಸಾವಿರ ರೂ.ವರೆಗು ನೆರವು ದೊರಯುತ್ತಿದೆ. ಐರೋಪ್ಯ ದೇಶಗಳಲ್ಲಿ ಇಂತಹ ಯೋಜನೆಗಳನ್ನು ಸಾರ್ವತ್ರಿಕ ಮೂಲ ಆದಾಯ ಹೆಚ್ಚಳದ ಕಾರ್ಯಕ್ರಮ ಎಂದು ಕರೆಯಲಾಗುತ್ತದೆ.

POINT 4 jpgಕಳೆದ ವರ್ಷ ಮೇ 20ರಂದು ಅಧಿಕಾರ ಸ್ವೀಕರಿಸುದ ತಕ್ಷಣ ಸಂಪುಟ ಸಭೆ ನಡೆಸಿ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ನಿರ್ಧಾರ ಕೈಗೊಂಡೆವು. ಜೂ.11ರಂದು ಶಕ್ತಿ ಯೋಜನೆಗೆ ಚಾಲನೆ ನೀಡಲಾಯಿತು. ಈಗ 130.28 ಕೋಟಿ ಮಹಿಳೆಯರು ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣ ಮಾಡಿದ್ದಾರೆ. 1.65 ಕೋಟಿ ಕುಟುಂಬಕ್ಕೆ ಗೃಹಜ್ಯೋತಿ ಯೋಜನೆ ಮೂಲಕ 200 ಯುನಿಟ್‌ವರೆಗೆ ಉಚಿತ ವಿದ್ಯುತ್‌ ಪಡೆಯುತ್ತಿದ್ದಾರೆ. ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಐದು ಕೆ.ಜಿ. ಅಕ್ಕಿ ಕೊಡುವ ಭರವಸೆ ನೀಡಿದ್ದೆವು. ಮಾರುಕಟ್ಟೆಯಲ್ಲಿ ಅಕ್ಕಿ ಸಿಗಲಿಲ್ಲ. ಕೇಂದ್ರ ಸರ್ಕಾರ ಅಕ್ಕಿ ಒದಗಿಸಲಿಲ್ಲ. ಹಾಗಾಗಿ ಪ್ರತಿಯೊಬ್ಬರಿಗೂ 170 ರೂ. ನೀಡಲಾಗುತ್ತಿದೆ. 1.18 ಕೋಟಿ ಕುಟುಂಬದ ಯಜಮಾನಿಯರಿಗೆ 2 ಸಾವಿರ ರೂ. ನೀಡುತ್ತಿದ್ದೇವೆ. ಚುನಾವಣೆ ಸಂದರ್ಭ ನೀಡಿದ್ದ ಐದು ಗ್ಯಾರಂಟಿ ಭರವಸೆಗಳನ್ನು ಈಡೇರಿಸಿದ್ದೇವೆ.

ಇದನ್ನೂ ಓದಿ – ‘ಐದು ಗ್ಯಾರಂಟಿ ಬದಲು ಭೂಮಿ ಭಾಗ್ಯ ಕರುಣಿಸಬೇಕಿತ್ತು, ಎಲ್ಲೋಯ್ತು ಮಲೆನಾಡ ಸಮಸ್ಯೆಗಳ ವರದಿ?ʼ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment