ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 14 JANUARY 2023
SHIMOGA : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡು ಕ್ಷೇತ್ರಗಳ ಬದಲು 25 ಕ್ಷೇತ್ರಗಳಲ್ಲಿ ಸ್ಪರ್ಧಿಸಿದರು ಈ ಬಾರಿ ಗೆಲುವು (win) ಸಾಧಿಸುವುದಿಲ್ಲ ಎಂದು ಶಾಸಕ ಕೆ.ಎಸ್.ಈಶ್ವರಪ್ಪ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಎಸ್.ಈಶ್ವರಪ್ಪ, ಸಿದ್ದರಾಮಯ್ಯ ಅವರನ್ನು ಸೋಲಿಸಲು ಅವರ ಪಕ್ಷದವರೆ ಕಾದು ಕೂತಿದ್ದಾರೆ. ಹಾಗಾಗಿ ಈ ಬಾರಿ ಅವರು 25 ಕ್ಷೇತ್ರಗಳಿಂದ ಸ್ಪರ್ಧೆ ಮಾಡಿದರು ಗೆಲ್ಲವುದಿಲ್ಲ (win) ಎಂದರು.
ಹಲವರ ಸೋಲಿಗೆ ಕಾರಣವಾಗಿದ್ದಾರೆ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಹಿಂದೆ ಅವರದ್ದೆ ಪಕ್ಷದ ಡಾ. ಜಿ.ಪರಮೇಶ್ವರ್, ಮಲ್ಲಿಕಾರ್ಜುನ ಖರ್ಗೆ ಅವರು ಸೋಲುವಂತೆ ನೋಡಿಕೊಂಡಿದ್ದರು. ಕೋಲಾರದಲ್ಲಿ ಹೆಚ್.ಮುನಿಯಪ್ಪ ಅವರ ಸೋಲಿಗೆ ಕಾರಣವಾಗಿದ್ದರು. ಇದೆಲ್ಲವನ್ನು ಅವರ ಬೆಂಬಲಿಗರು ಇನ್ನು ಮರೆತಿಲ್ಲ. ಇದೆ ರೀತಿ ಕಾಂಗ್ರೆಸ್ ಪಕ್ಷದ ಇನ್ನೂ ಕೆಲವರ ಸೋಲಿನಲ್ಲಿ ಇವರ ಪಾತ್ರವಿದೆ. ಇದೆ ಕಾರಣಕ್ಕೆ ಅವರೀಗ ಬಾದಾಮಿ ಕ್ಷೇತ್ರವನ್ನು ಬಿಟ್ಟು ಹೊರಟಿದ್ದಾರೆ ಎಂದು ಈಶ್ವರಪ್ಪ ಹೇಳಿದರು.

ನಾಲ್ವರು ಸೇರಿ ಸೋಲಿಸುತ್ತಾರೆ
ಸಿದ್ದರಾಮಯ್ಯ ಅವರಿಗೆ ಎಲ್ಲಿಂದ ಸ್ಪರ್ಧೆ ಮಾಡಬೇಕು ಎಂಬುದು ಗೊತ್ತಾಗುತ್ತಿಲ್ಲ. ಬಾದಾಮಿಯಲ್ಲಿ ಜನರು ಕೈ ಕೊಡುತ್ತಾರೆ ಅನ್ನುವುದು ಗೊತ್ತಿದೆ. ಕೋಲಾರದಿಂದ ಸ್ಪರ್ಧೆ ಮಾಡುತ್ತೇನೆ ಅಂದಿದ್ದರು. ಈಗ ಇದ್ದಕ್ಕಿದ್ದ ಹಾಗೆ ದೇವರು ಪ್ರತ್ಯಕ್ಷವಾಗಿ 2 ಕಡೆ ಸ್ಪರ್ಧಿಸುವಂತೆ ಹೇಳಿದೆ ಅನ್ನುತ್ತಿದ್ದಾರೆ ಎಂದರು.

ಸಿದ್ದರಾಮಯ್ಯ ಅವರು ಶ್ರೀನಿವಾಸ್ ಪ್ರಸಾದ್, ಮುನಿಯಪ್ಪ, ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಅವರನ್ನು ಸೋಲಿಸಿದ್ದರು. ಈ ನಾಲ್ವರು ಈಗ ಸಿದ್ದರಾಮಯ್ಯಗೆ ಉತ್ತರ ಕೊಡಲು ಕಾಯುತ್ತಿದ್ದಾರೆ. ಹಾಗಾಗಿ ಸಿದ್ದರಾಮಯ್ಯ 2 ಕ್ಷೇತ್ರಗಳಲ್ಲ 25 ಕಡೆ ಸ್ಪರ್ಧಿಸಿದರು ಗೆಲುವು ಸಾಧಿಸುವುದಿಲ್ಲ ಎಂದು ಈಶ್ವರಪ್ಪ ತಿಳಿಸಿದರು.
ಇದನ್ನೂ ಓದಿ – ಟಿವಿ ಮಾಧ್ಯಮಗಳಲ್ಲಿ ‘ಕಿಮ್ಮನೆ ಮನೆ ಮೇಲೆ ದಾಳಿ’ ಸುದ್ದಿ, ವಾಸ್ತವವೇನು? ಕಿಮ್ಮನೆ ರತ್ನಾಕರ್ ಫಸ್ಟ್ ರಿಯಾಕ್ಷನ್

LATEST NEWS
- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು


CLICK HERE TO JOIN SHIVAMOGGA LIVE WHATSAPP GROUP



