‘ಸಿದ್ದರಾಮಯ್ಯ ಸೋಲಿಸಲು 4 ಕಾಂಗ್ರೆಸ್ ನಾಯಕರು ಕಾಯುತ್ತಿದ್ದಾರೆ, 25 ಕ್ಷೇತ್ರದಿಂದ ಸ್ಪರ್ಧಿಸಿದರು ಗೆಲ್ಲುವುದಿಲ್ಲ’

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 14 JANUARY 2023

SHIMOGA : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡು ಕ್ಷೇತ್ರಗಳ ಬದಲು 25 ಕ್ಷೇತ್ರಗಳಲ್ಲಿ ಸ್ಪರ್ಧಿಸಿದರು ಈ ಬಾರಿ ಗೆಲುವು (win) ಸಾಧಿಸುವುದಿಲ್ಲ ಎಂದು ಶಾಸಕ ಕೆ.ಎಸ್.ಈಶ್ವರಪ್ಪ ತಿಳಿಸಿದರು.

Siddaramaiah Former Chief Minister

ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಎಸ್.ಈಶ್ವರಪ್ಪ, ಸಿದ್ದರಾಮಯ್ಯ ಅವರನ್ನು ಸೋಲಿಸಲು ಅವರ ಪಕ್ಷದವರೆ ಕಾದು ಕೂತಿದ್ದಾರೆ. ಹಾಗಾಗಿ ಈ ಬಾರಿ ಅವರು 25 ಕ್ಷೇತ್ರಗಳಿಂದ ಸ್ಪರ್ಧೆ ಮಾಡಿದರು ಗೆಲ್ಲವುದಿಲ್ಲ (win) ಎಂದರು.

ಹಲವರ ಸೋಲಿಗೆ ಕಾರಣವಾಗಿದ್ದಾರೆ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಹಿಂದೆ ಅವರದ್ದೆ ಪಕ್ಷದ ಡಾ. ಜಿ.ಪರಮೇಶ್ವರ್, ಮಲ್ಲಿಕಾರ್ಜುನ ಖರ್ಗೆ ಅವರು ಸೋಲುವಂತೆ ನೋಡಿಕೊಂಡಿದ್ದರು. ಕೋಲಾರದಲ್ಲಿ ಹೆಚ್.ಮುನಿಯಪ್ಪ ಅವರ ಸೋಲಿಗೆ ಕಾರಣವಾಗಿದ್ದರು. ಇದೆಲ್ಲವನ್ನು ಅವರ ಬೆಂಬಲಿಗರು ಇನ್ನು ಮರೆತಿಲ್ಲ. ಇದೆ ರೀತಿ ಕಾಂಗ್ರೆಸ್ ಪಕ್ಷದ ಇನ್ನೂ ಕೆಲವರ ಸೋಲಿನಲ್ಲಿ ಇವರ ಪಾತ್ರವಿದೆ. ಇದೆ ಕಾರಣಕ್ಕೆ ಅವರೀಗ ಬಾದಾಮಿ ಕ್ಷೇತ್ರವನ್ನು ಬಿಟ್ಟು ಹೊರಟಿದ್ದಾರೆ ಎಂದು ಈಶ್ವರಪ್ಪ ಹೇಳಿದರು.

Eshwarappa in Shimoga

ನಾಲ್ವರು ಸೇರಿ ಸೋಲಿಸುತ್ತಾರೆ

ಸಿದ್ದರಾಮಯ್ಯ ಅವರಿಗೆ ಎಲ್ಲಿಂದ ಸ್ಪರ್ಧೆ ಮಾಡಬೇಕು ಎಂಬುದು ಗೊತ್ತಾಗುತ್ತಿಲ್ಲ. ಬಾದಾಮಿಯಲ್ಲಿ ಜನರು ಕೈ ಕೊಡುತ್ತಾರೆ ಅನ್ನುವುದು ಗೊತ್ತಿದೆ. ಕೋಲಾರದಿಂದ ಸ್ಪರ್ಧೆ ಮಾಡುತ್ತೇನೆ ಅಂದಿದ್ದರು. ಈಗ ಇದ್ದಕ್ಕಿದ್ದ ಹಾಗೆ ದೇವರು ಪ್ರತ್ಯಕ್ಷವಾಗಿ 2 ಕಡೆ ಸ್ಪರ್ಧಿಸುವಂತೆ ಹೇಳಿದೆ ಅನ್ನುತ್ತಿದ್ದಾರೆ ಎಂದರು.

Shimoga Live 3 Million Reach

ಸಿದ್ದರಾಮಯ್ಯ ಅವರು ಶ್ರೀನಿವಾಸ್ ಪ್ರಸಾದ್, ಮುನಿಯಪ್ಪ, ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಅವರನ್ನು ಸೋಲಿಸಿದ್ದರು. ಈ ನಾಲ್ವರು ಈಗ ಸಿದ್ದರಾಮಯ್ಯಗೆ ಉತ್ತರ ಕೊಡಲು ಕಾಯುತ್ತಿದ್ದಾರೆ. ಹಾಗಾಗಿ ಸಿದ್ದರಾಮಯ್ಯ 2 ಕ್ಷೇತ್ರಗಳಲ್ಲ 25 ಕಡೆ ಸ್ಪರ್ಧಿಸಿದರು ಗೆಲುವು ಸಾಧಿಸುವುದಿಲ್ಲ ಎಂದು ಈಶ್ವರಪ್ಪ ತಿಳಿಸಿದರು.

ಇದನ್ನೂ ಓದಿ – ಟಿವಿ ಮಾಧ್ಯಮಗಳಲ್ಲಿ ‘ಕಿಮ್ಮನೆ ಮನೆ ಮೇಲೆ ದಾಳಿ’ ಸುದ್ದಿ, ವಾಸ್ತವವೇನು? ಕಿಮ್ಮನೆ ರತ್ನಾಕರ್ ಫಸ್ಟ್ ರಿಯಾಕ್ಷನ್

Sigandur Temple Jathre

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment