ಬೆಡ್ ಇಲ್ಲ, ಆಕ್ಸಿಜನ್ ಇಲ್ಲ, ಲಸಿಕೆಯು ಇಲ್ಲ, ಶಿವಮೊಗ್ಗದಲ್ಲಿ ಘೋಷಣೆಯಿಲ್ಲದೆ ಪ್ರತಿಭಟನೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 MAY 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಕರೋನೆ ಎರಡನೆ ಅಲೆ ನಿಯಂತ್ರಿಸುವುದು ಮತ್ತು ಲಸಿಕೆ ನೀಡುವಲ್ಲಿ ವಿಫಲವಾಗಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ವಿಭಿನ್ನವಾಗಿ ಪ್ರತಿಭಟನೆ ನಡೆಸಲಾಯಿತು.

ಜಿಲ್ಲಾಧಿಕಾರಿ ಕಚೇರಿ ಮುಂದೆ ಸಾಮಾಜಿಕ ಅಂತರ ಕಾಯ್ದುಕೊಂಡು, ಮೌನ ಪ್ರತಿಭಟನೆ ನಡೆಸಲಾಯಿತು.

ಎರಡನೆ ಅಲೆಯು ವೇಗವಾಗಿ ಹರಡುತ್ತಿದೆ. ಪರಿಸ್ಥಿತಿ ನಿರ್ವಹಿಸುವಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ವಿಫಲವಾಗಿವೆ. ಸೋಂಕಿತರ ಪ್ರಾಣ ರಕ್ಷಣೆ, ಲಸಿಕೆ, ಬೆಡ್, ಆಕ್ಸಿಜನ್, ವೆಂಟಿಲೇಟರ್ ಒದಗಿಸಲು ಸಾಧ್ಯವಾಗುತ್ತಿಲ್ಲ ಎಂದು ಪ್ರತಿಭಟನಾನಿರತರು ಆಕ್ರೋಶ ವ್ಯಕ್ತಪಡಿಸಿದರು.

18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ಹಾಕಲಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದರು. ಆದರೆ 45 ವರ್ಷ ಮೇಲ್ಪಟ್ಟ ಹಲವರಿಗೆ ಎರಡನೆ ಡೋಸ್ ಲಸಿಕೆ ಕೊಡಲು ಸಾದ್ಯವಾಗುತ್ತಿಲ್ಲ. ಇದರಿಂದ ಜನರು ಗೊಂದಲಕ್ಕೀಡಾಗಿದ್ದು, ಆತಂಕಗೊಂಡಿದ್ದಾರೆ ಎಂದು ಆಪಾದಿಸಿದರು.

ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ.ಗಿರೀಶ್, ಪ್ರಮುಖರಾದ ಪ್ರವೀಣ್ ಕುಮಾರ್, ಹೆಚ್.ಸಿ.ಯೋಗೇಶ್, ಕೆ.ರಂಗನಾಥ್, ಬಿ.ಲೋಕೇಶ್, ಇ.ಟಿ.ನಿತಿನ್, ಎಸ್‍.ಎಸ್.ಕುಮರೇಶ್, ಆರ್‍.ಕಿರಣ್, ವೆಂಕಟೇಶ್ ಕಲ್ಲೂರು, ಗಗನ್, ಸುಹಾಸ್ ಸೇರಿದಂತೆ ಹಲವರು ಇದ್ದರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment