ಶಿವಮೊಗ್ಗದಲ್ಲಿ ಸರಳ ದಸರಾ, ಬನ್ನಿ ಮಂಟಪ್ಪಕ್ಕೆ ಸಚಿವ ಈಶ್ವರಪ್ಪ ಬರಲ್ಲ, ಯಾವೆಲ್ಲ ಆಚರಣೆಗಳಿರ್ತವೆ? ಏನಿರಲ್ಲ?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

119060214 954258745054036 6933822829653446782 o.jpg? nc cat=105& nc sid=110474& nc ohc=XxkfaKGqL3MAX JHRqz& nc ht=scontent.fixe1 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಸೆಪ್ಟಂಬರ್ 2020

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಕರೋನಾ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಈ ಬಾರಿ ಶಿವಮೊಗ್ಗ ನಗರದಲ್ಲಿ ಅತ್ಯಂತ ಸರಳವಾಗಿ ಸಾಂಪ್ರದಾಯಿಕವಾಗಿ ದಸರಾ ಹಬ್ಬ ಆಚರಿಸಲಾಗುವುದು ಅಂತಾ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.

ಮಹಾನಗರ ಪಾಲಿಕೆ ಸಭಾಂಗಣದಲ್ಲಿ ದಸರಾ ಆಚರಣೆ ಕುರಿತು ಕರೆಯಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಕರೋನಾ ಎಲ್ಲೆಡೆ ತೀವ್ರಗತಿಯಲ್ಲಿ ಹೆಚ್ಚುತ್ತಿದ್ದು, ನಾವು ಈಗಾಗಲೇ ಹಲವಾರು ಪ್ರೀತಿಪಾತ್ರರನ್ನು ಕಳೆದುಕೊಂಡಿದ್ದೇವೆ. ಜನರನ್ನು ಸೇರಿಸಿ ಕರೋನಾ ಹರಡಲು ನಾವು ಯಾವುದೇ ಕಾರಣಕ್ಕೂ ಅವಕಾಶ ಮಾಡಬಾರದು. ಈ ಹಿನ್ನೆಲೆಯಲ್ಲಿ ಈಗಾಗಲೇ ಮಹಾನಗರ ಪಾಲಿಕೆಯಲ್ಲಿ ತೀರ್ಮಾನಿಸಿರುವಂತೆ ಅತ್ಯಂತ ಸರಳವಾಗಿ ದಸರಾ ಆಚರಿಸಲಾಗುವುದು ಎಂದು ಹೇಳಿದರು.

ಮುಜರಾಯಿ ದೇವಾಲಯಗಳಿಗೆ ಮಾತ್ರ ಅವಕಾಶ

ಚಂದ್ರಶೇಖರ ಆಜಾದ್ ಮೈದಾನದಲ್ಲಿ ನಡೆಯುವ ಬನ್ನಿ ಕಾರ್ಯಕ್ರಮಕ್ಕೆ ಪ್ರತಿ ವರ್ಷದಂತೆ ಎಲ್ಲಾ ದೇವಾಲಯಗಳ ದೇವರನ್ನು ಈ ಬಾರಿ ಕರೆದುಕೊಂಡು ತರಲು ಅವಕಾಶವಿಲ್ಲ. ಶಿವಮೊಗ್ಗ ನಗರದ ಮುಜರಾಯಿ ಇಲಾಖೆ ದೇವಸ್ಥಾನಗಳಿಂದ ದೇವರನ್ನು ಕರೆ ತರಬಹುದಾಗಿದೆ. ಖಾಸಗಿ ದೇವಾಲಯಗಳ ದೇವರನ್ನು ಕರೆ ತರಲು ಅವಕಾಶವಿಲ್ಲ. ದೇವರನ್ನು ಕರೆ ತರುವ ಸಂದರ್ಭದಲ್ಲಿ ಮೆರವಣಿಗೆ ಮಾಡುವಂತಿಲ್ಲ. ಸಾಂಕೇತಿಕವಾಗಿ ಬನ್ನಿ ಮಂಟಪಕ್ಕೆ ಕರೆ ತಂದು ವಿಧಿ ವಿಧಾನಗಳನ್ನು ನಡೆಸಲಾಗುವುದು ಎಂದು ಅವರು ಹೇಳಿದರು.

ಮನೆಯಲ್ಲಿ, ಮನೆ ಸಮೀಪದಲ್ಲೇ ಹಬ್ಬ ಆಚರಿಸಿ

ಸಾರ್ವಜನಿಕರು ತಮ್ಮ ಮನೆಯಲ್ಲಿಯೇ ಹಾಗೂ ಮನೆ ಸಮೀಪದ ದೇವಾಲಯಗಳಲ್ಲಿಯೇ ದಸರಾ ಆಚರಿಸಬೇಕು. ಬನ್ನಿಯನ್ನು ಶ್ರದ್ಧಾಪೂರ್ವಕ ತಮ್ಮ ದೇವರಿಗೆ ಸಮರ್ಪಿಸಬಹುದು. ತಾನು ಸಹ ಈ ಬಾರಿ ಬನ್ನಿ ಕಡಿಯುವ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

ಶಿವಮೊಗ್ಗದಲ್ಲಿ ಗರಿಷ್ಟ ಅಲಂಕಾರ

ದಸರ ಸಂದರ್ಭದಲ್ಲಿ ಶಿವಮೊಗ್ಗ ನಗರಾದ್ಯಂತ ಪ್ರತಿವರ್ಷದಂತೆ ಗರಿಷ್ಟ ಅಲಂಕಾರ ಮಾಡಬೇಕು. ಚಂದ್ರಶೇಖರ ಆಜಾದ್ ಮೈದಾನದಲ್ಲಿ ನಡೆಯುವ ಬನ್ನಿ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಭಾಗವಹಿಸದೇ ಸಹಕರಿಸಬೇಕು. ದಸರಾ ಆಚರಣೆಯ ಎಲ್ಲಾ ಕಾರ್ಯಕ್ರಮಗಳನ್ನು ಟಿವಿ, ಇಂಟರ್‍ನೆಟ್ ಮೂಲಕ ನೇರ ಪ್ರಸಾರ ಮಾಡಲು ವ್ಯವಸ್ಥೆ ಕಲ್ಪಿಸಲಾಗುವುದು. ಜನರು ಮನೆಯಲ್ಲಿಯೇ ಕುಳಿತು ಎಲ್ಲಾ ಕಾರ್ಯಕ್ರಮಗಳನ್ನು ವೀಕ್ಷಿಸಬಹುದಾಗಿದೆ ಎಂದರು.

ಮೇಯರ್ ಸುವರ್ಣಾ ಶಂಕರ್, ಉಪ ಮೇಯರ್ ಸುರೇಖಾ ಮುರಳೀಧರ್, ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ, ಅಪರ ಜಿಲ್ಲಾಧಿಕಾರಿ ಜಿ.ಅನುರಾಧ, ಪೊಲೀಸ್ ವರಿಷ್ಟಾಧಿಕಾರಿ ಕೆ.ಎಂ.ಶಾಂತರಾಜು ಉಪಸ್ಥಿತರಿದ್ದರು.

119042982 954233958389848 2251827388540787956 o.jpg? nc cat=100& nc sid=8024bb& nc ohc=M11J4AM3B1UAX wbglB& nc ht=scontent.fixe1 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment