| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
SHIVAMOGGA LIVE NEWS | 12 JANUARY 2024
SHIMOGA : ಯುವನಿಧಿ ಯೋಜನೆ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಚಪ್ಪಾಳೆ, ಘೋಷಣೆಗಳು ಜೋರಾಗಿದ್ದವು.
ಡಿಕೆ.. ಡಿಕೆ.. ಘೋಷಣೆ
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕಾರ್ಯಕ್ರಮದ ವೇದಿಕೆಗೆ ಆಗಮಿಸುತ್ತಿದ್ದಂತೆ ಕಾರ್ಯಕರ್ತರು ಡಿಕೆ, ಡಿಕೆ ಎಂದು ಘೋಷಣೆ ಆರಂಭಿಸಿದರು. ವಿದ್ಯಾರ್ಥಿಗಳು ಕೂಡ ಇದನ್ನು ಅನಸುರಿಸಿ ಜೋರಾಗಿ ಘೋಷಣೆ ಕೂಗಿದರು. ಎಲ್ಲರತ್ತ ಕೈ ಬೀಸಿ ಡಿ.ಕೆ. ಶಿವಕುಮಾರ್ ವಂದನೆ ಸಲ್ಲಿಸಿದರು. ಇನ್ನು, ಅವರು ಭಾಷಣಕ್ಕೆ ಆಗಮಿಸುತ್ತಿದ್ದಂತೆ ಕಾರ್ಯಕರ್ತರು ಪುನಃ ಘೋಷಣೆ ಮೊಳಗಿಸಿದರು.
ಸಂಸದ ರಾಘವೇಂದ್ರಗೆ ಅಚ್ಚರಿ
ಯುವನಿಧಿ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಕಾರ್ಯಕರ್ತರು ದೊಡ್ಡ ಸಂಖ್ಯೆಯಲ್ಲಿ ಸೇರಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ನೋಡಲು, ಭಾಷಣ ಕೇಳಲು ಜನ ಸೇರಿದ್ದರು. ಹಾಗಾಗಿ ಕಾರ್ಯಕ್ರಮ ಸಂಪೂರ್ಣ ಕಾಂಗ್ರೆಸ್ಮಯವಾಗಿತ್ತು. ಆದರೂ ಸ್ವಾಗತದ ವೇಳೆ ಸಂಸದ ರಾಘವೇಂದ್ರ ಅವರ ಹೆಸರು ಹೇಳುತ್ತಿದ್ದಂತೆ ಸಭೆಯಲ್ಲಿ ಯುವಕರು ಜೋರಾಗಿ ಕೂಗಿ, ಚಪ್ಪಾಳೆ ತಟ್ಟಿದ್ದರು. ಇದನ್ನು ಗಮನಿಸಿ ಸಂಸದ ರಾಘವೇಂದ್ರ ಅಚ್ಚರಿಗೊಂಡರು.
ಇದನ್ನೂ ಓದಿ – ಸಿಎಂ ಬರುವ ಮುನ್ನ ವಿದ್ಯಾರ್ಥಿಗಳಿಂದ ಭರ್ಜರಿ ಡಾನ್ಸ್, ಪುನೀತ್ ರಾಜ್ಕುಮಾರ್ಗೆ ಟಾರ್ಚ್ ಲೈಟ್ ಸಲ್ಯೂಟ್
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಶಿವಮೊಗ್ಗದಲ್ಲಿ 300 ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ, ಇಲ್ಲಿವೆ ಸಾಲು ಸಾಲು ಫೋಟೊಗಳು
- ಇವತ್ತು ಉತ್ತರಾಷಾಢ ನಕ್ಷತ್ರ, ದ್ವಾದಶಿ, ರಾಶಿ ಫಲ ಹೇಗಿದೆ? – ಓದಲು ಇಲ್ಲಿ ಕ್ಲಿಕ್ ಮಾಡಿ
- ಶಿವಮೊಗ್ಗದ ಜೊತೆಗೆ ಶಾಮನೂರು ನಂಟು, ಇಲ್ಲಿತ್ತು ವ್ಯಾವಹಾರಿಕ ಸಂಬಂಧ, ಶಿಷ್ಯರ ಬಳಗ, ಚಿಕ್ಕಮ್ಮನ ಮನೆ
- ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ ಮೈಸೂರಿನ ವ್ಯಕ್ತಿ
- ಯಡೇಹಳ್ಳಿ ಕ್ರಾಸ್ ಬಳಿ ಅರಣ್ಯ ಸಂಚಾರಿ ದಳದ ದಾಳಿ, ಕಾರಾವಾರದ ವ್ಯಕ್ತಿ ಅರೆಸ್ಟ್
- ಅಡಿಕೆ ಎಲೆಚುಕ್ಕಿ ರೋಗ, ಬಾಕಿ ಹಣ ಬಿಡುಗಡೆಗೆ ಸಿಎಂ ಸೂಚನೆ
- ಕಿತ್ತೂರು ರಾಣಿ ಚನ್ನಮ್ಮ, ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ
- ಸಾಗರ ನಗರಸಭೆ ಎಚ್ಚರಿಕೆ, ಬೀದಿ ನಾಯಿಗಳ ನಿಯಂತ್ರಣ ಕುರಿತು ಪ್ರಮುಖ ಪ್ರಕಟಣೆ
![]()