ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA | 2 ಮಾರ್ಚ್ 2020
ಶಿವಮೊಗ್ಗ ನಗರದ ಕೊಳಚೆ ಪ್ರದೇಶಗಳಲ್ಲಿರುವ ಮನೆಗಳಿಗೆ ಹಕ್ಕುಪತ್ರ ನೀಡಬೇಕು ಎಂದು ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯರು ಒತ್ತಾಯಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಹಾನಗರ ಪಾಲಿಕೆ ಕಾರ್ಪೊರೇಟರ್ ರಮೇಶ್ ಹೆಗ್ಡೆ, ಶಿವಮೊಗ್ಗ ನಗರದಲ್ಲಿ 54 ಕೊಳಚೆ ಪ್ರದೇಶಗಳಿವೆ. ಇದರಲ್ಲಿ ಸುಮಾರು 8 ಸಾವಿರ ಕುಟುಂಬಗಳು ಮನೆ ಕಟ್ಟಿಕೊಂಡಿದ್ದಾರೆ. ಈ ಪೈಕಿ 2012ರಲ್ಲಿ 2741 ಮನೆಗಲಿಗೆ ಸರ್ಕಾರದ ವತಿಯಿಂದ ಹಕ್ಕುಪತ್ರ ಕೊಡಲಾಗಿದೆ. ಉಳಿದ 3219 ಮನೆಗಳಿಗೆ ಈವರೆಗೂ ಹಕ್ಕು ಪತ್ರ ಕೊಟ್ಟಿಲ್ಲ. ಕೂಡಲೇ ಹಕ್ಕುಪತ್ರ ವಿತರಣೆ ಮಾಡಬೆಕು ಎಂದು ಆಗ್ರಹಿಸಿದರು.
ಖಾತೆ ಮಾಡಿ, ತೆರಿಗೆ ಕಟ್ಟಿಸಿಕೊಳ್ಳಿ
2012ರಲ್ಲಿ ಹಕ್ಕುಪತ್ರ ನೀಡಿರುವ ಮನೆಗಳಿಗೆ ಖಾತೆ ಮಾಡಿ, ಪಾಲಿಕೆ ವತಿಯಿಂದ ಆಸ್ತಿ ತೆರಿಗೆ ಕಟ್ಟಿಸಿಕೊಳ್ಳಬೇಕು. ಖಾಸಗಿ ಒಡೆತನದ ಜಾಗದಲ್ಲಿರುವ ಕೊಳಚೆ ಪ್ರದೇಶದ ಭೂ ಸ್ವಾಧೀನ ಮಾಡಿಕೊಂಡು, ಹಕ್ಕುಪತ್ರ ನೀಡಬೇಕು ಎಂದು ರಮೇಶ್ ಹೆಗ್ಡೆ ಸರ್ಕಾರವನ್ನು ಒತ್ತಾಯಿಸಿದರು.
ಅಮೀರ್ ಅಹಮದ್ ಕಾಲೋನಿ 2ನೇ ಹಂತದ 111 ಮನೆಗಳು, ಕರ್ಲಹಟ್ಟಿಯ 41 ಮನೆಗಳಿಗೆ ಕೂಡಲೇ ಪರಿಚಯ ಪತ್ರ ನೀಡಬೇಕು. ಇನ್ನು, ಹೊಸದಾಗಿ ಘೋಷಿಸಿರುವ ಡಾ.ಅಂಬೇಡ್ಕರ್ ಕಾಲೋನಿ, ಜನತಾ ಕಾಲೋನಿ, ಸತ್ಯಹರಿಶ್ಚಂದ್ರ ನಗರ, ಕೆಳಗಿನ ತುಂಗಾನಗರ 2ನೇ ಹಂತ, ಇಮಾಮ್ ಬಾಡ, ಸಿದ್ದೇಶ್ವರನಗರದ ಕೊಳಚೆ ಪ್ರದೇಶದ ಸುಮಾರು 600 ಮನೆಗಳಿಗೂ ಪರಿಚಯ ಪತ್ರ ನೀಡಬೇಕು ಎಂದರು.
ಸಾಲ ಮಂಜೂರಾತಿ ಮಾಡಿಸಿ
ಸುಭಾಷ್ ನಗರ, ಶಾಂತಿನಗರ ಮತ್ತು ಇತರೆ ಕೊಳಚೆ ಪ್ರದೇಶಗಳಲ್ಇಲ 650 ಮನೆ ನಿರ್ಮಾಣಕ್ಕೆ ಬ್ಯಾಂಕ್ ಸಾಲ ಮಂಜೂರಾತಿ ಮಾಡಿಸಬೇಕು. ಅಲ್ಲದೆ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಬೇಕು. 2019ರ ಆಗಸ್ಟ್ ತಿಂಗಳಿನ ಪ್ರವಾಹಕ್ಕೆ ಕೊಳಚೆ ಪ್ರದೇಶಗಳಲ್ಲಿ ಮನೆ ಕಳೆದುಕೊಂಡವರಿಗೆ ಅದನ್ನು ಅಧಿಕೃತ ಮನೆಗಳೆಂದು ಪರಿಗಣಿಸಿ 5 ಲಕ್ಷ ರೂ. ಮಂಜೂರು ಮಾಡಿಸಬೇಕು ಎಂದು ಒತ್ತಾಯಿಸಿದರು.
ಪಾಲಿಕೆ ವಿರೋಧ ಪಕ್ಷದ ನಾಯಕ ಹೆಚ್.ಸಿ.ಯೋಗೇಶ್, ಕಾರ್ಪೊರೇಟರ್ ಯಮುನಾ ರಂಗೇಗೌಡ, ಪ್ರಮುಖರಾದ ವಿಶ್ವನಾಥ ಕಾಶಿ ಸೇರಿದಂತೆ ಹಲವರು ಪತ್ರಿಕಾಗೋಷ್ಠಿಯಲ್ಲಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















