SHIVAMOGGA LIVE NEWS
SHIMOGA | ನಾಗರ ಹಾವು ಹಿಡಿಯಲು ಹೋದಾಗ ಇಬ್ಬರು ಮಹಿಳೆಯರ ಮೈಮೇಲೆ ದೇವರು (SNAKE GOD) ಬಂದಿದೆ. ನಾಗರ ಹಾವನ್ನು ಹಿಡಿಯಬಾರದು, ಅದನ್ನು ಅಲ್ಲಿಯೆ ಬಿಡಬೇಕು ಎಂದು ಉರಗ ರಕ್ಷಕ ಸ್ನೇಕ್ ಕಿರಣ್ ಅವರಿಗೆ ಸೂಚನೆ ಸೂಚನೆ ನೀಡಿದ ಘಟನೆ ನಡೆದಿದೆ.
ಶಿವಮೊಗ್ಗದ ಹೊನ್ನಾಳಿ ರಸ್ತೆಯ ಫ್ಲೈ ಓವರ್ ಪಕ್ಕದ ಚೌಡೇಶ್ವರಿ ಕಾಲೋನಿಯಲ್ಲಿರುವ ಶಂಕರ ರೇಂಜ್ ನರ್ಸರಿಯಲ್ಲಿ ಘಟನೆ ಸಂಭವಿಸಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಒಂದು ಅಡಿಯ ನಾಗರ ಹಾವು (SNAKE GOD)
ನರ್ಸರಿಯಲ್ಲಿ ಹಾವು ಕಾಣಿಸಿಕೊಂಡಿದೆ ಎಂದು ನಾಗರಾಜ್ ಎಂಬುವವರು ಶಿವಮೊಗ್ಗದ ಉರಗ ರಕ್ಷಕ ಸ್ನೇಕ್ ಕಿರಣ್ ಅವರಿಗೆ ಕರೆ ಮಾಡಿದ್ದರು. ನರ್ಸರಿಯಲ್ಲಿ ಹಾವು ಕಾಣಿಸಕೊಂಡ ಜಾಗದಲ್ಲಿ ಹುಡುಕಿದಾಗ ಸುಮಾರು ಒಂದು ಅಡಿ ಉದ್ದದ ನಾಗರ ಹಾವು ಸಿಕ್ಕಿದೆ. ಸ್ನೇಕ್ ಕಿರಣ್ ಅವರು ಹಾವನ್ನು ರಕ್ಷಣೆ ಮಾಡಿ, ಕಾಡಿಗೆ ಕೊಂಡೊಯ್ದು ಬಿಡಲು ಸನ್ನದ್ಧರಾಗಿದ್ದರು.
ಮೈಮೇಲೆ ಬಂತು ದೇವರು (SNAKE GOD)
ಸ್ನೇಕ್ ಕಿರಣ್ ಅವರು ಹಾವನ್ನು ರಕ್ಷಣೆ ಮಾಡುತ್ತಿದ್ದ ವೇಳೆ ನರ್ಸರಿಯಲ್ಲಿದ್ದ ಮಹಿಳೆಯರು ಸುತ್ತುವರೆದು ನೋಡುತ್ತಿದ್ದರು. ಮಹಿಳೆಯರ ಗುಂಪಿನಲ್ಲಿದ್ದ ವಾಸುಕಿ ಮತ್ತು ನೇತ್ರ ಎಂಬ ಮಹಿಳೆಯರ ವರ್ತನೆ ಬದಲಾಯಿತು. ಇಬ್ಬರು ಜೋರಾಗಿ ಕೂಗಿಕೊಂಡರು, ಹಾವಿನಂತೆ ವರ್ತನೆ ಮಾಡಲು ಶುರು ಮಾಡಿದರು. ನೆಲದ ಬಿದ್ದು ಹೊರಳಾಡಿದರು. ಹಾಗಾಗಿ ಅಕ್ಕಪಕ್ಕದಲ್ಲಿದ್ದ ಉಳಿದ ಮಹಿಳೆಯರು ಹೆದರಿಕೊಂಡು ಓಡಿದ್ದಾರೆ.
‘ಹಾವನ್ನು ಅಲ್ಲಿಯೆ ಬಿಟ್ಟುಬಿಡಿ’
ಮೈ ಮೇಲೆ ದೇವರು (SNAKE GOD) ಬಂದಿದ್ದನ್ನು ಕಂಡು ಸ್ನೇಕ್ ಕಿರಣ್ ಸಹಿತ ಅಲ್ಲಿದ್ದವರು ಆತಂಕಗೊಂಡಿದ್ದಾರೆ. ಸ್ನೇಕ್ ಕಿರಣ್ ಹಿಡಿದಿರುವ ಹಾವನ್ನು ಎಲ್ಲೂ ಕೊಂಡೊಯ್ಯಬಾರದು. ಇಲ್ಲಿಯೇ ಸಮೀಪದಲ್ಲಿರುವ ಜಾಗದಲ್ಲಿ ಬಿಡಬೇಕು ಎಂದು ಸೂಚನೆ ನೀಡಿದ್ದಾರೆ. ಬಳಿಕ ಮಹಿಳೆಯರು ಹೇಳಿದ ಜಾಗದಲ್ಲೇ ಸ್ನೇಕ್ ಕಿರಣ್ ಅವರು ನಾಗರ ಹಾವನ್ನ ಬಿಟ್ಟಿದ್ದಾರೆ. ಅಲ್ಲದೆ ಮಹಿಳೆಯರಿಗೆ ಪೂಜೆ ಮಾಡಿದ್ದಾರೆ. ಇದಾದ ಮೇಲೆ ಮಹಿಳೆಯರು ಶಾಂತವಾಗಿದ್ದಾರೆ.
ಹಾವು ಹಿಡಿದ ಸಂದರ್ಭ ಮೈಮೇಲೆ ದೇವರು ಬಂದಿದ್ದನ್ನು ಕಂಡು ಸ್ನೇಕ್ ಕಿರಣ್, ನಾಗರಾಜ್ ಮತ್ತು ಮಹಿಳೆಯರು ಕೆಲಕಾಲ ಆತಂಕಗೊಂಡಿದ್ದರು.
ಕ್ಲಿಕ್ ಮಾಡಿ ಇದನ್ನೂ ಓದಿ | ಮುಳುಗಿದ ಲಾಂಚ್, ಜನರ ಪರದಾಟ, ಇನ್ನಾದರೂ ಬಗೆಹರಿಯುತ್ತಾ ಸಮಸ್ಯೆ?
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.