SHIVAMOGGA LIVE NEWS | SNAKE | 06 ಮೇ 2022
ಶಾಲೆಯ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪ್ರಾಕ್ಟಿಸ್’ಗೆ ಹಾಕಿದ್ದ ನೆಟ್’ಗೆ ಸಿಲುಕಿದ್ದ ಹಾವನ್ನು ಉರಗ ತಜ್ಞ ಸ್ನೇಕ್ ಕಿರಣ್ ಅವರು ರಕ್ಷಣೆ ಮಾಡಿದ್ದಾರೆ.
ಶಿವಮೊಗ್ಗ ವಿನೋಬನಗರ ಡಿವಿಎಸ್ ಶಾಲೆ ಕ್ರೀಡಾಂಗಣದಲ್ಲಿ ಹಾವನ್ನ ರಕ್ಷಣೆ ಮಾಡಲಾಗಿದೆ. ಬಳಿಕ ಹಾವುಗಳ ಕುರಿತು ಸ್ನೇಕ್ ಕಿರಣ್ ಅವರು ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಮಾಹಿತಿ ನೀಡಿದರು.
ಏನಿದು ಘಟನೆ?
ಶಾಲೆಯ ಕ್ರೀಡಾಂಗಣದಲ್ಲಿ ಕ್ರಿಕೆಟ್ ತರಬೇತಿಗೆ ನೆಟ್ ಹಾಕಲಾಗಿದೆ. ಕೇರೆ ಹಾವೊಂದು ಈ ನೆಟ್ ಒಳಗೆ ಸಿಲುಕಿತ್ತು. ಬಿಡಿಸಿಕೊಳ್ಳಲಾಗದೆ ಒದ್ದಾಡುತ್ತಿತ್ತು. ಇದನ್ನು ಗಮನಿಸಿದ ಕೋಚ್ ನಾಗಭೂಷಣ್ ಅವರು ಸ್ನೇಕ್ ಕಿರಣ್ ಅವರಿಗೆ ಮಾಹಿತಿ ನೀಡಿದ್ದರು.
ಸ್ಥಳಕ್ಕೆ ಆಗಮಿಸಿದ ಸ್ನೇಕ್ ಕಿರಣ್ ಅವರು ನೆಟ್’ನಲ್ಲಿ ಸಿಲುಕಿದ್ದ ಕೇರೆ ಹಾವನ್ನು ರಕ್ಷಣೆ ಮಾಡಿದರು. ಬಳಿಕ ಹಾವುಗಳ ಕುರಿತು ವಿದ್ಯಾರ್ಥಿಗಳು, ಶಿಕ್ಷಕರಿಗೆ ಮಾಹಿತಿ ನೀಡಿದರು.
ಸ್ನೇಕ್ ಕಿರಣ್ ಅವರ ಕಾರ್ಯಕ್ಕೆ ವಿದ್ಯಾರ್ಥಿಗಳು, ಶಿಕ್ಷಕರು ಮೆಚ್ಚುಗೆ ವ್ಯಕ್ತಪಡಿಸಿದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಮಗುವಿನ ಶೂ ಒಳಗಿತ್ತು ಮೂರಡಿ ಉದ್ದದ ಹಾವು..!
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200