ಶಿವಮೊಗ್ಗದಲ್ಲಿ ನಿಷೇಧಾಜ್ಞೆಗೆ ವರ್ತಕರು ಗರಂ, ಗಾಂಧಿ ಬಜಾರ್‌ ಬಂದ್‌ಗೆ ಆಕ್ರೋಶ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 02 OCTOBER 2023

SHIMOGA : ರಾಗಿಗುಡ್ಡದಲ್ಲಿ ಕಲ್ಲು ತೂರಟ ಪ್ರಕರಣ ಹಿನ್ನೆಲೆ ಶಿವಮೊಗ್ಗ ನಗರದಾದ್ಯಂತ ನಿಷೇಧಾಜ್ಞೆ ವಿಧಿಸಲಾಗಿದೆ‌. ಇದರಿಂದ ನಗರದ ವಾಣಿಜ್ಯ ಉದ್ಯಮಕ್ಕೆ ತೊಂದರೆ ಉಂಟಾಗಿದೆ. ನಿಷೇಧಾಜ್ಞೆಯನ್ನು ರಾಗಿಗುಡ್ಡಕ್ಕೆ (ragi gudda) ಸೀಮಿತಗೊಳಿಸಬೇಕು ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಗೋಪಿನಾಥ್ ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಗಿಗುಡ್ಡದಲ್ಲಿ (ragi gudda) ಘಟನೆ ಸಂಭವಿಸಿದೆ. ಆದರೆ ಗಾಂಧಿ ಬಜಾರ್ ಸೇರಿದಂತೆ ವಿವಿಧೆಡೆ ಅಂಗಡಿ – ಮುಂಗಟ್ಟು ಬಂದ್ ಮಾಡಿಸಲಾಗಿದೆ. ಇದರಿಂದ ವಾಣಿಜ್ಯೋದ್ಯಮಕ್ಕೆ ತೊಂದರೆ ಉಂಟಾಗಿದೆ. ಈಗಾಗಲೆ ಕಳೆದ ವಾರ ಮೂರ್ನಾಲ್ಕು ದಿನ ವಿವಿಧ ಕಾರಣಕ್ಕೆ ಉದ್ಯಮಗಳಲ್ಲಿ ಸ್ಥಗಿತಗೊಳಿಸಿದ್ದೆವು. ಈಗ ಪುನಃ ವ್ಯವಹಾರ ಸ್ಥಗಿತ ಮಾಡಿದರೆ ಸಮಸ್ಯೆಯಾಗಲಿದೆ ಎಂದರು.

ಇದನ್ನೂ ಓದಿ- ಹೊಳೆಹೊನ್ನೂರು ಸಮೀಪ ಭೀಕರ ಅಪಘಾತ, ಮೂವರು ಯುವಕರ ದೇಹ ಛಿದ್ರ ಛಿದ್ರ

ನಿಷೇಧಾಜ್ಞೆಯನ್ನು ಇಡೀ ನಗರಕ್ಕೆ ವಿಸ್ತರಿಸಿರುವ ಕ್ರಮ ಸರಿಯಲ್ಲ ಎಂದು ಜಿಲ್ಲಾಧಿಕಾರಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದೇವೆ. ಮಧ್ಯಾಹ್ನದ ನಂತರ ಅಂಗಡಿಗಳನ್ನು ತೆಗೆದು ವ್ಯಾಪಾರ ನಡೆಸುತ್ತೇವೆ.

ಕಾಂಗ್ರೆಸ್ ನಾಯಕ ಎಂ‌‌.ಶ್ರೀಕಾಂತ್ ಮಾತನಾಡಿ, ಮೂರ್ನಾಲ್ಕು ದಿನ ವ್ಯಾಪಾರ ಸ್ಥಗಿತಗೊಳಿಸಿದರೆ ಬಡವರು ಸೇರಿದಂತೆ ಹಲವರಿಗೆ ತೊಂದರೆ ಆಗಲಿದೆ. ಈ ಸಂಬಂಧ ನಗರದಲ್ಲಿ ಶಾಂತಿಯುತ ವಾತಾವರಣ ಇದೆ ಎಂದು ಎಲ್ಲರು ಒಗ್ಗೂಡಿ ತೋರಿಸಬೇಕಿದೆ ಎಂದರು.

ಇದನ್ನೂ ಓದಿ- 314 ರೈಲು ವೇಳಾಪಟ್ಟಿ ಬದಲು, ಶಿವಮೊಗ್ಗದ ಯಾವ್ಯಾವ ರೈಲುಗಳ ಸಮಯ ಬದಲು?

ಗಾಂಧಿ ಬಜಾರ್ ವರ್ತಕರ ಸಂಘದ ಅಧ್ಯಕ್ಷ ವಿಜಯಕುಮಾರ್ ದಿನಕರ್ ಮಾತನಾಡಿ, ಜಿಲ್ಲಾಧಿಕಾರಿ, ಜಿಲ್ಲಾರಕ್ಷಣಾಧಿಕಾರಿಯನ್ನು ಭೇಟಿಯಾಗಿದ್ದೇವೆ. ಮಾಧ್ಯಮಗಳಲ್ಲಿ ವರದಿ ಆಧರಿಸಿ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ. ಮಾಧ್ಯಮಗಳು ಧಗಧಗ ಎಂದು ವರದಿ ಮಾಡುವುದು ನಿಲ್ಲಿಸಬೇಕು ಎಂದು ಮನವಿ ಮಾಡಿದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 2, 2023

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

Leave a Comment