ಲಕ್ಷ ಕೋಟಿ ಪ್ಯಾಕೇಜ್, ಶಿವಮೊಗ್ಗದಲ್ಲಿ ಯಾರಿಗೆ ಸಿಕ್ಕಿದೆ ಪರಿಹಾರ? ರಸ್ತೆಗಿಳಿದು ಪರಿಶೀಲನೆ ಆರಂಭಿಸಿದ ಕಾಂಗ್ರೆಸ್

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 29 ಮೇ 2020

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಕರೋನ ಲಾಕ್‌ಡೌನ್‌ ಹಿನ್ನೆಲೆ ಸಂಕಷ್ಟಕ್ಕೆ ಸಿಲುಕಿರುವ ಹಲವು ಉದ್ಯಮ ಮತ್ತು ಅಸಂಘಟಿತ ಕಾರ್ಮಿಕರಿಗೆ, ಕೇಂದ್ರ ಮತ್ತು ರಾಜ್ಯ ಸರ್ಕಾರ ಕೋಟಿ ಕೋಟಿಯ ಪ್ಯಾಕೇಜುಗಳನ್ನು ಘೋಷಿಸಿವೆ. ಆದರೆ ಈ ಪ್ಯಾಕೇಜುಗಳು ಸಾಮಾನ್ಯ ಜನರಿಗೆ ತಲುಪಿಲ್ಲ ಎಂಬ ಆರೋಪವಿದೆ. ಇದರ ಪರಿಶೀಲನೆಗಾಗಿ ಜಿಲ್ಲಾ ಕಾಂಗ್ರೆಸ್ ಬೀದಿಗಿಳಿದಿದೆ.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ನೇತೃತ್ವದ ನಿಯೋಗ, ಶಿವಮೊಗ್ಗ ನಗರದ ವಿವಿಧೆಡೆ ಸಂಚರಿಸಿ, ಜನರೊಂದಿಗೆ ಚರ್ಚೆ ನಡೆಸುತ್ತಿದೆ. ಪರಿಹಾರ ಬಂದಿರುವ ಕುರಿತು ಪರಿಶೀಲನೆ ನಡೆಸುತ್ತಿದೆ.

https://www.youtube.com/watch?v=6RY_LGHp1zA&feature=youtu.be

ಬೀದಿ ಬದಿ ವ್ಯಾಪಾರಿಗಳು, ಆಟೋ ಚಾಲಕರು, ಅಸಂಘಟಿತ ವಲಯದ ಕಾರ್ಮಿಕರನ್ನು ಮಾತನಾಡಿಸಲಾಗಿದೆ. ಇವರ ಅಭಿಪ್ರಾಯಗಳ ವಿಡಿಯೋ ರೆಕಾರ್ಡ್ ಮಾಡಿಕೊಳ್ಳಲಾಗಿದೆ. ಈ ವಿಡಿಯೋಗಳನ್ನು ರಾಜ್ಯ ಕಾಂಗ್ರೆಸ್‍ಗೆ ಕಳುಹಿಸಲು ನಿರ್ಧರಿಸಲಾಗಿದೆ.

https://www.youtube.com/watch?v=N7_zFZ_Bw8U&feature=youtu.be

ಸ್ಪೀಕ್ ಅಪ್ ಇಂಡಿಯಾ ಅಭಿಯಾನ

ರೆಕಾರ್ಡ್ ಮಾಡಿಕೊಂಡಿರುವ ವಿಡಿಯೋಗಳನ್ನು ಸ್ಪೀಕ್ ಅಪ್ ಇಂಡಿಯಾ ಎಂಬ ಹ್ಯಾಶ್ ಟ್ಯಾಗ್ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಅಪ್‍ಡೋಲ್ ಮಾಡಲಾಗುತ್ತಿದೆ. ವಿಡಿಯೋಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ಕಾಂಗ್ರೆಸ್ ಪಕ್ಷ ತಿಳಿಸಿದೆ.

https://www.youtube.com/watch?v=Qevh0IkjPpw&feature=youtu.be

ಈ ಕುರಿತು ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸುಂದರೇಶ್, ಕೇಂದ್ರ ಮತ್ತು ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಹಣ ಜನರಿಗೆ ತಲುಪಿದೆಯೋ ಇಲ್ಲವೋ ಅನ್ನುವ ಕುರಿತು ಸರ್ವೆ ಮಾಡುತ್ತಿದ್ದೇವೆ. ಆದರೆ ಈತನಕ ಯಾರಿಗೂ ಒಂದು ರುಪಾಯಿ ಪರಿಹಾರ ಬಂದಿಲ್ಲ ಎಂದು ತಿಳಿಸಿದರು.

https://www.facebook.com/Raghushimogait/videos/578872133022291/?t=41

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment