ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
SHIVAMOGGA LIVE NEWS | 2 FEBRUARY 2024
SHIMOGA : ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗವು ನೀರಿನ ಕಂದಾಯ ಮತ್ತು ಬಾಕಿ ಕಂದಾಯ ವಸೂಲಾತಿಗೆ ವಿಶೇಷ ಕೌಂಟರ್ ಆರಂಭಿಸುತ್ತಿದೆ. ಫೆ.4ರಂದು ವಿವಿಧೆಡೆ ಕೌಂಟರ್ಗಳನ್ನು ತೆರೆಯಲಾಗುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಎಲ್ಲೆಲ್ಲಿ ಕೌಂಟರ್ ತೆರೆಯಲಾಗುತ್ತದೆ?
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ – ಹೊಳೆಹೊನ್ನೂರು ಮುಖ್ಯರಸ್ತೆ ಹತ್ತಿರ, ಹಳೇ ಜೈಲ್ ಗೇಟ್ ಎದುರು- ರಾಜೇಂದ್ರನಗರ ಪಾರ್ಕ್ ಹತ್ತಿರ, ಅಪೂರ್ವ ಕಾಲೇಜ್ ಎದುರು – ಬೊಮ್ಮನಕಟ್ಟೆ ಮುಖ್ಯರಸ್ತೆ, ಕಿದ್ವಾಯಿ ಶಾಲೆ ಪಕ್ಕ – ಆರ್.ಎಂ.ಎಲ್.ನಗರ, ಹರಿಗೆ ಗಣಪತಿ ದೇವಸ್ಥಾನದ ಹತ್ತಿರ.
ನೀರಿನ ಸಂಪರ್ಕ ಕಡಿತವಾಗಲಿದೆ
ನೀರಿನ ಖಾತೆದಾರರು ಬಾಕಿ ಉಳಿಸಿಕೊಂಡಿರುವ ಕಂದಾಯ ಪಾವತಿಸಬೇಕು. ಇಲ್ಲವಾದಲ್ಲಿ ನೀರಿನ ಸಂಪರ್ಕ ಕಡಿತಗೊಳಿಸಲಾಗುತ್ತದೆ ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗ – ಯಶವಂತಪುರ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಅನುಮಾನಾಸ್ಪದ ಸಾವು, ದರೋಡೆ ಬಳಿಕ ಕೊಲೆ ಶಂಕೆ






