SHIVAMOGGA LIVE NEWS, 21 DECEMBER 2024
ಶಿವಮೊಗ್ಗ : ಅನಾರೋಗ್ಯ ಹಿನ್ನೆಲೆ ಚಿಕಿತ್ಸೆಗೆ ಅಮೆರಿಕಾಗೆ ತೆರಳಿರುವ ನಟ ಶಿವರಾಜ್ ಕುಮಾರ್ (Shivarajkumar) ಶೀಘ್ರ ಗುಣವಾಗಲಿ ಎಂದು ಪ್ರಾರ್ಥಿಸಿ ಶಿವಮೊಗ್ಗದಲ್ಲಿ ಪೂಜೆ ಸಲ್ಲಿಸಲಾಯಿತು. ಜ್ಯುವೆಲ್ ರಾಕ್ ಹೊಟೇಲ್ ರಸ್ತೆಯಲ್ಲಿರುವ ಪಂಚಮುಖಿ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು.
ನಟ ಶಿವರಾಜ್ ಕುಮಾರ್ ಅಭಿಮಾನಿಗಳು ಮತ್ತು ಐಎನ್ಟಿಯುಸಿ ಸಂಘಟನೆ ವತಿಯಿಂದ ದೇವರಿಗೆ ಪೂಜೆ ಸಲ್ಲಿಸಲಾಯಿತು. ಕೆಪಿಸಿಸಿ ಕಾರ್ಯದರ್ಶಿ ದೇವೇಂದ್ರಪ್ಪ ನೇತೃತ್ವದಲ್ಲಿ ಪೂಜೆ ಸಲ್ಲಿಸಿ, ಈಡುಗಾಯಿ ಒಡೆಯಲಾಯಿತು. ಇದೇ ವೇಳೆ ನಟ ಶಿವರಾಜ್ ಕುಮಾರ್ ಶೀಘ್ರ ಗುಣವಾಲಿ ಎಂದು ಘೋಷಣೆ ಕೂಗಿದರು. ಇಲ್ಲಿದೆ ಪೂಜೆಯ ವಿಡಿಯೋ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಶೂ ಒಳಗಿಂದ ಹೆಡೆ ಎತ್ತಿದ ನಾಗರಹಾವು
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200