ನಟ ಶಿವರಾಜ್‌ ಕುಮಾರ್‌ಗಾಗಿ ವಿಶೇಷ ಪೂಜೆ, ಈಡುಗಾಯಿ ಒಡೆದು ಪ್ರಾರ್ಥನೆ

SHIVAMOGGA LIVE NEWS, 21 DECEMBER 2024

ಶಿವಮೊಗ್ಗ : ಅನಾರೋಗ್ಯ ಹಿನ್ನೆಲೆ ಚಿಕಿತ್ಸೆಗೆ ಅಮೆರಿಕಾಗೆ ತೆರಳಿರುವ ನಟ ಶಿವರಾಜ್‌ ಕುಮಾರ್‌ (Shivarajkumar) ಶೀಘ್ರ ಗುಣವಾಗಲಿ ಎಂದು ಪ್ರಾರ್ಥಿಸಿ ಶಿವಮೊಗ್ಗದಲ್ಲಿ ಪೂಜೆ ಸಲ್ಲಿಸಲಾಯಿತು. ಜ್ಯುವೆಲ್‌ ರಾಕ್‌ ಹೊಟೇಲ್‌ ರಸ್ತೆಯಲ್ಲಿರುವ ಪಂಚಮುಖಿ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು.

ನಟ ಶಿವರಾಜ್‌ ಕುಮಾರ್‌ ಅಭಿಮಾನಿಗಳು ಮತ್ತು ಐಎನ್‌ಟಿಯುಸಿ ಸಂಘಟನೆ ವತಿಯಿಂದ ದೇವರಿಗೆ ಪೂಜೆ ಸಲ್ಲಿಸಲಾಯಿತು. ಕೆಪಿಸಿಸಿ ಕಾರ್ಯದರ್ಶಿ ದೇವೇಂದ್ರಪ್ಪ ನೇತೃತ್ವದಲ್ಲಿ ಪೂಜೆ ಸಲ್ಲಿಸಿ, ಈಡುಗಾಯಿ ಒಡೆಯಲಾಯಿತು. ಇದೇ ವೇಳೆ ನಟ ಶಿವರಾಜ್‌ ಕುಮಾರ್‌ ಶೀಘ್ರ ಗುಣವಾಲಿ ಎಂದು ಘೋಷಣೆ ಕೂಗಿದರು. ಇಲ್ಲಿದೆ ಪೂಜೆಯ ವಿಡಿಯೋ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಶೂ ಒಳಗಿಂದ ಹೆಡೆ ಎತ್ತಿದ ನಾಗರಹಾವು

Kalleshwara-Enterprises.webp
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment