SHIVAMOGGA LIVE NEWS, 15 FEBRUARY 2025
ಶಿವಮೊಗ್ಗ : ಕುಂಭಮೇಳಕ್ಕೆ ತೆರಳುವವರ ಅನುಕೂಲಕ್ಕಾಗಿ ಶಿವಮೊಗ್ಗದಿಂದ ವಿಶೇಷ ರೈಲು (Train) ವ್ಯವಸ್ಥೆ ಮಾಡಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ರೈಲಿಗೆ ಈಗಾಗಲೇ ಆನ್ಲೈನ್ ಟಿಕೆಟ್ ಬುಕಿಂಗ್ ಆರಂಭವಾಗಿದೆ.
ಯಾವಾಗ ಹೊರಡಲಿದೆ ರೈಲು?
» ಫೆಬ್ರವರಿ 22ರ ಶನಿವಾರ ಸಂಜೆ 4.40ಕ್ಕೆ ಶಿವಮೊಗ್ಗದಿಂದ (ರೈಲು ಸಂಖ್ಯೆ. 06223) ರಂದು ಹೊರಟು ಫೆಬ್ರವರಿ 24ರ ಬೆಳಿಗ್ಗೆ 11.10ಕ್ಕೆ ಪ್ರಯಾಗರಾಜ್ ತಲುಪಲಿದೆ.
» ಫೆಬ್ರವರಿ 25ರಂದು ಬೆಳಿಗ್ಗೆ 5.40ಕ್ಕೆ ಪ್ರಯಾಗರಾಜ್ನಿಂದ (ರೈಲು ಸಂಖ್ಯೆ 06224) ಹೊರಟು ಫೆಬ್ರವರಿ 27ರ ಬೆಳಿಗ್ಗೆ 6.45ಕ್ಕೆ ಶಿವಮೊಗ್ಗ ತಲುಪಲಿದೆ.
ಫೆಬ್ರವರಿ 15 ರ ಮಧ್ಯಾಹ್ನದ ನಂತರ ವಿಶೇಷ ರೈಲಿನ ಬುಕಿಂಗ್ ಸೇವೆ ಆರಂಭವಾಗಲಿದ್ದು, ಯಾತ್ರಾರ್ಥಿಗಳು ಇದರ ಸದುಪಯೋಗ ಪಡಿಸಿಕೊಳ್ಳಬೇಕು. ಮಹಾ ಕುಂಭಮೇಳ ಯಾತ್ರಾರ್ಥಿಗಳ ಪ್ರಯಾಣಕ್ಕೆ ಅನುಕೂಲ ಮಾಡಿ ಕೊಟ್ಟಿರುವ ರೈಲ್ವೆ ಇಲಾಖೆಗೆ ತುಂಬು ಹೃದಯದ ಧನ್ಯವಾದಗಳು.
• ಬಿ.ವೈ.ರಾಘವೇಂದ್ರ, ಸಂಸದ
ಇದನ್ನೂ ಓದಿ » ಶಿವಮೊಗ್ಗಕ್ಕೆ ಲಗ್ಗೆ ಇಟ್ಟ ರ್ಯಾಪಿಡೋ ಬೈಕ್ ಟ್ಯಾಕ್ಸಿ, ಆಟೋ ಚಾಲಕರ ಆಕ್ರೋಶ, ಏನಿದು ರ್ಯಾಪಿಡೋ?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200