SHIVAMOGGA LIVE NEWS | 17 MARCH 2024
SHIMOGA : ಲೋಕಸಭೆ ಚುನಾವಣೆ ಘೋಷಣೆಯಾದ ಮೇಲೆ ಪ್ರಧಾನಿ ನರೇಂದ್ರ ಮೋದಿ ಅವರು ಇದೇ ಮೊದಲ ಬಾರಿ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಶಿವಮೊಗ್ಗದಲ್ಲಿ ಮೊದಲ ಚುನಾವಣಾ ಪ್ರಚಾರ ಸಭೆ ನಡೆಸಲಿದ್ದಾರೆ. ಇದಕ್ಕಾಗಿ ಅಲ್ಲಮ ಪ್ರಭು ಮೈದಾನ ಸಂಪೂರ್ಣ ಸಜ್ಜಾಗಿದೆ.
ಹೇಗಿದೆ ಸಮಾವೇಶದ ವೇದಿಕೆ?
ಫ್ರೀಡಂ ಪಾರ್ಕ್ನಲ್ಲಿ ಬೃಹತ್ ವೇದಿಕೆ ನಿರ್ಮಿಸಲಾಗಿದೆ. ಬಿಜೆಪಿ ಧ್ವಜದ ಬಣ್ಣದ ಹಿನ್ನೆಲೆ ನಿರ್ಮಿಸಲಾಗಿದೆ. ವೇದಿಕೆಯ ಎರಡು ಬದಿಯಲ್ಲಿಯು ಮೆಟಲ್ ಡಿಟೆಕ್ಟರ್ ಅಳವಡಿಸಲಾಗಿದೆ. ಪ್ರಧಾನಿ ಕಾರ್ಯಕ್ರಮವಾಗಿರುವ ಹಿನ್ನೆಲೆ ವೇದಿಕೆ ಮುಂಭಾಗ ಡಿ ಜೋನ್ ಎಂದು ಘೋಷಿಸಲಾಗಿದೆ. ಅನುಮತಿ ಇಲ್ಲದೆ ಇಲ್ಲಿ ಯಾರಿಗೂ ಪ್ರವೇಶ ಇರುವುದಿಲ್ಲ. ವೇದಿಕೆ ಹಿಂಭಾಗ ಮತ್ತು ಅಕ್ಕಪಕ್ಕದಲ್ಲಿ ತಾತ್ಕಾಲಿಕ ಕೊಠಡಿಗಳನ್ನು ಸ್ಥಾಪಿಸಲಾಗಿದೆ. ಪ್ರಧಾನಿ ಕಚೇರಿ ಸಿಬ್ಬಂದಿ, ಭದ್ರತಾ ಸಿಬ್ಬಂದಿ, ವಿವಿಐಪಿ ಕೊಠಡಿಗಳು ಇಲ್ಲಿವೆ.
ವೇದಿಕೆ ಮೇಲೆ ಯಾರೆಲ್ಲ ಇರ್ತಾರೆ?
‘ಸಮಾವೇಶದ ವೇದಿಕೆ ಮೇಲೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ನಾಲ್ಕು ಲೋಕಸಭೆ ಕ್ಷೇತ್ರಗಳ ಅಭ್ಯರ್ಥಿಗಳಾದ ಶಿವಮೊಗ್ಗದ ಬಿ.ವೈ.ರಾಘವೇಂದ್ರ, ಚಿತ್ರದುರ್ಗದ ನಾರಾಯಣಸ್ವಾಮಿ, ಕೇಂದ್ರ ಸಚಿವ ಜಿ.ಎಂ.ಸಿದ್ದೇಶ್ವರ, ದಾವಣಗೆರೆ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ, ಉಡುಪಿ – ಚಿಕ್ಕಮಗಳೂರು ಲೋಕಸಭೆ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ, ದಕ್ಷಿಣ ಕನ್ನಡದ ಅಭ್ಯರ್ಥಿ ಬ್ರಿಜೇಶ್ ಚೌಟ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಆರಗ ಜ್ಞಾನೇಂದ್ರ, ಸಿ.ಟಿ.ರವಿ, ಮಾಜಿ ಮತ್ತು ಹಾಲಿ ಶಾಸಕರು, ಮೈತ್ರಿ ಪಕ್ಷ ಜೆಡಿಎಸ್ನ ಶಾಸಕರು ವೇದಿಕೆ ಮೇಲಿರಲಿದ್ದಾರೆʼ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಮಾಧ್ಯಮಗಳಿಗೆ ತಿಳಿಸಿದರು.
ಮೈದಾನದಲ್ಲಿ ಆಸನಗಳು ಸಿದ್ಧ
ಬೃಹತ್ ಪೆಂಡಾಲ್ ಹಾಕಲಾಗಿದ್ದು ಅದರ ಅಡಿ ದೊಡ್ಡ ಸಂಖ್ಯೆಯ ಚೇರ್ಗಳನ್ನು ಹಾಕಲಾಗಿದೆ. ಎರಡು ಲಕ್ಷಕ್ಕಿಂತಲು ಹೆಚ್ಚು ಜನರು ಸೇರುವ ಸಾಧ್ಯತೆ ಇದೆ ಎಂದು ಬಿಜೆಪಿ ಮುಖಂಡರು ತಿಳಿಸಿದ್ದಾರೆ. ವೇದಿಕೆ ಮುಂಭಾಗ ಒಂದು ಕಡೆ ವಿವಿಐಪಿ ಗ್ಯಾಲರಿ, ಮತ್ತೊಂದು ಕಡೆ ಪತ್ರಕರ್ತರ ಗ್ಯಾಲರಿ ಸ್ಥಾಪಿಸಲಾಗಿದೆ. ಅದರ ಹಿಂಭಾಗದಲ್ಲಿ ಸಾರ್ವಜನಿಕರಿಗೆ ಕೂರಲು ಆಸನದ ವ್ಯವಸ್ಥೆ ಮಾಡಲಾಗಿದೆ.
ಈಗ ಎಸ್ಪಿಜಿ ಕಂಟ್ರೋಲ್ನಲ್ಲಿ ವೇದಿಕೆ
ಇನ್ನು, ಪ್ರಧಾನ ಮಂತ್ರಿಯ ಭದ್ರತಾ ಪಡೆ ಸ್ಪೆಷಲ್ ಪ್ರೊಟೆಕ್ಷನ್ ಗ್ರೂಪ್ (ಎಸ್ಪಿಜಿ) ಈಗಾಗಲೆ ವೇದಿಕೆ ಬಳಿ ಆಗಮಿಸಿದೆ. ಅಲ್ಲಮಪ್ರಭು ಮೈದಾನವನ್ನು ಎಸ್ಪಿಜಿ ಕಮಾಂಡೊಗಳು ತಮ್ಮ ಸುಪರ್ದಿಗೆ ಪಡೆದುಕೊಂಡಿದ್ದಾರೆ. ಮೈದಾನದ ಒಳ, ಹೊರಗೆ ಹೋಗುವ ಪ್ರತಿಯೊಬ್ಬರ ಮೇಲೂ ನಿಗಾ ವಹಿಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗ ಜೆಡಿಎಸ್ ಕಚೇರಿಗೆ ಸಂಸದ ರಾಘವೇಂದ್ರ, ಬಿಜೆಪಿ ಮುಖಂಡರು ಭೇಟಿ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200