ಶಿವಮೊಗ್ಗದಲ್ಲಿ 301 ಕಲಾವಿದರ ಜೊತೆಗೆ ವೀಣೆ ನುಡಿಸಿದ ಮೈಸೂರು ರಾಜವಂಶಸ್ಥ, ಹೇಗಿತ್ತು ಕಾರ್ಯಕ್ರಮ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಸರಸ್ವತಿ ಸಂಗೀತ ವಿದ್ಯಾಲಯದ ರಜತ ಮಹೋತ್ಸವ ಸಂಭ್ರಮದ ಅಂಗವಾಗಿ, ಸುಶ್ರಾವ್ಯ ಸಂಗೀತ ವಿದ್ಯಾಲಯ, ಸಾಯಿಸೃತಿ ಸಂಗೀತ ವಿದ್ಯಾಲಯದ ಸಹಭಾಗಿತ್ವದಲ್ಲಿ ಫ್ರೀಡಂ ಪಾರ್ಕ್‌ನಲ್ಲಿ ಭಾನುವಾರ ವಿಶಿಷ್ಟ ಸಾಂಸ್ಕೃತಿಕ ಕಾರ್ಯಕ್ರಮ ವೀಣಾ ತ್ರಿಶತೋತ್ಸವ (Veena Trishatotsava) ನಡೆಯಿತು.

ಕಾರ್ಯಕ್ರಮದಲ್ಲಿ 301 ಕಲಾವಿದರು ಏಕಕಾಲದಲ್ಲಿ ವೀಣೆ ನುಡಿಸಿದರು. ವಿಘ್ನವಿನಾಶಕ ಗಣಪನ ಸ್ತುತಿಯೊಂದಿಗೆ ವೀಣಾ ತ್ರಿಶತೋತ್ಸವಕ್ಕೆ ಚಾಲನೆ ನೀಡಲಾಯಿತು. ನಂತರ ಕಾಯೋ ಶ್ರೀ ಗೌರಿಯನ್ನು ಮೈಸೂರಿನ ರಾಜವಂಶಸ್ಥ, ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ನುಡಿಸಿದರು.

Total-Readers-of-Shivamogga-Live
” ಭಾರತೀಯರು ತಮ್ಮ ಧರ್ಮ, ನೆಲದ ಬಗ್ಗೆ ನಿಜವಾದ ಭಾವನೆಯನ್ನು ಅನುಭವಿಸಬೇಕಾದರೆ ಅದು ಇಲ್ಲಿನ ಪಾರಂಪರಿಕ ಕಲೆಯಿಂದ ಮಾತ್ರ ಸಾಧ್ಯ. ಪಾಶ್ಚಾತ್ಯ ದೇಶದಿಂದ ಬಂದ ಸಂಗೀತವನ್ನು ಸ್ವಾಗತಿಸೋಣ. ಅದರ ಮಧ್ಯೆ ಕರ್ನಾಟಕದ ಪರಂಪರೆಯ ಕಲೆ ಹಾಗೂ ಸಂಗೀತ ಉಳಿಸಿ ಬೆಳೆಸೋಣ. ಆಗ ಒಳ್ಳೆಯ ಸಮಾಜ ಕಟ್ಟಲು ಸಾಧ್ಯ ಈ ಪರಂಪರೆಯ ಅಗ್ರಪಂಕ್ತಿಯನ್ನು ಮೈಸೂರು ಸೇರಿದಂತೆ ಬೇರೆ ಬೇರೆ ರಾಜಮನೆತನಗಳು ಕಲಾ ಪೋಷಣೆ ಮೂಲಕ ಮಾಡಿ ತೋರಿಸಿವೆ. ”
ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಮೈಸೂರು – ಕೊಡಗು ಸಂಸದ
” ವೀಣೆ ಭಾರತದ ಸಾಂಸ್ಕೃತಿಕ ರಾಯಭಾರಿ. ಕಲೆಗೆ ಭಾಷೆ, ಧರ್ಮ ಇಲ್ಲ. ಈ ಡಿಜಿಟಲ್ ಯುಗದಲ್ಲಿ ಮಕ್ಕಳಿಗೆ ವೀಣಾ ಅಭ್ಯಾಸ ಮಾಡಿಸುವ ಮೂಲಕ ಈ ಕಲೆಯ ಸಂರಕ್ಷಣೆಯನ್ನು ನಮ್ಮ ಹೆಣ್ಣುಮಕ್ಕಳು ಮಾಡುತ್ತಿದ್ದಾರೆ. ಅವರ ಸಹಭಾಗಿತ್ವ ಇದ್ದಾಗ ಮಾತ್ರ ಸಂಸ್ಕೃತಿ ಉಳಿಸಿ, ಬೆಳೆಸಿಕೊಂಡು ಹೋಗಲು ಸಾಧ್ಯವಿದೆ.”
ಬಿ.ವೈ.ರಾಘವೇಂದ್ರ, ಶಿವಮೊಗ್ಗ ಸಂಸದ

ಇದನ್ನೂ ಓದಿ » ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್‌

ರಜತಮಹೋತ್ಸವ ಆಚರಣಾ ಸಮಿತಿ ಗೌರವಾಧ್ಯಕ್ಷರೂ ಆದ ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್, ಶಾಸಕ ಎಸ್.ಎನ್.ಚನ್ನಬಸಪ್ಪ, ವಿಧಾನಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ, ಝರೋದಾ ಕಂಪನಿ ಮುಖ್ಯಸ್ಥೆ ರೇವತಿ ಕಾಮತ್, ಗೀತಾ ರಮಾನಂದ್, ಮಾಜಿ ಶಾಸಕರಾದ ಎಚ್.ಎಂ.ಚಂದ್ರಶೇಖರಪ್ಪ, ಕೆ.ಬಿ.ಪ್ರಸನ್ನಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಉಮೇಶ್ ಹಾಲಾಡಿ, ವಿದುಷಿ ಪದ್ಮನಿ ಸುಧೀರ್ ಇದ್ದರು. ಪ್ರಾಸ್ತಾವಿಕವಾಗಿ ವಿಜಯಲಕ್ಷ್ಮಿ ಮಾತನಾಡಿದರು.

Splendid Veena Trishatotsava in Shivamogga! 301 artists perform together at Freedom Park. MP Yaduveer Wadiyar joins the grand event
Splendid Veena Trishatotsava in Shivamogga! 301 artists perform together at Freedom Park. MP Yaduveer Wadiyar joins the grand event
Splendid Veena Trishatotsava in Shivamogga! 301 artists perform together at Freedom Park. MP Yaduveer Wadiyar joins the grand event

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 19, 2026

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

BREAKING NEWS – ಶಿವಮೊಗ್ಗದ ಸಿಂಹಧಾಮದಲ್ಲಿ ನೀರಾನೆ ದಾಳಿ ಡಾಕ್ಟರ್‌ ಸಾವು

BREAKING NEWS – ಶಿವಮೊಗ್ಗದ ಸಿಂಹಧಾಮದಲ್ಲಿ ನೀರಾನೆ ದಾಳಿ ಡಾಕ್ಟರ್‌ ಸಾವು

ಡಿ.ಬಿ.ಹಳ್ಳಿ ಕ್ರಾಸ್‌ನಲ್ಲಿ ಅಪಘಾತ, ಮಹಿಳೆಯ ಕೈ ಮೂಳೆ ಕಟ್‌, ಆಗಿದ್ದೇನು?

ಡಿ.ಬಿ.ಹಳ್ಳಿ ಕ್ರಾಸ್‌ನಲ್ಲಿ ಅಪಘಾತ, ಮಹಿಳೆಯ ಕೈ ಮೂಳೆ ಕಟ್‌, ಆಗಿದ್ದೇನು?

ಕೋಟೆ ದೇಗುಲದಲ್ಲಿ ದೇವರಿಗೆ ಮಹಾವಿಷ್ಣು ಅಲಂಕಾರ, ಪಂಚಾಂಗ ಶ್ರವಣ, ಇವತ್ತು ಯಾವ ಅಲಂಕಾರ ಇರಲಿದೆ?

ಕೋಟೆ ದೇಗುಲದಲ್ಲಿ ದೇವರಿಗೆ ಮಹಾವಿಷ್ಣು ಅಲಂಕಾರ, ಪಂಚಾಂಗ ಶ್ರವಣ, ಇವತ್ತು ಯಾವ ಅಲಂಕಾರ ಇರಲಿದೆ?

ಶಿವಮೊಗ್ಗದಲ್ಲಿ ಯುವಕನ ಮೇಲೆ ಬಿಯರ್‌ ಬಾಟಲಿಯಿಂದ ಅಟ್ಯಾಕ್‌, ಕಾರಣವೇನು?

ಶಿವಮೊಗ್ಗದಲ್ಲಿ ಯುವಕನ ಮೇಲೆ ಬಿಯರ್‌ ಬಾಟಲಿಯಿಂದ ಅಟ್ಯಾಕ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಜಾಸ್ತಿಯಾಗಲಿದೆ ಬಿಸಿಲು, ರಾತ್ರಿ ವೇಳೆ ಮುಂದುವರೆಯುತ್ತಾ ತಂಪು?

ಶಿವಮೊಗ್ಗ ಜಿಲ್ಲೆಯಲ್ಲಿ ಜಾಸ್ತಿಯಾಗಲಿದೆ ಬಿಸಿಲು, ರಾತ್ರಿ ವೇಳೆ ಮುಂದುವರೆಯುತ್ತಾ ತಂಪು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಉಷಾ ನರ್ಸಿಂಗ್‌ ಹೋಂ ಬಳಿ ಅಂಬ್ಯುಲೆನ್ಸ್‌ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಬಳಿ ಅಂಬ್ಯುಲೆನ್ಸ್‌ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

Leave a Comment