ಶಿವಮೊಗ್ಗ: ಸರಸ್ವತಿ ಸಂಗೀತ ವಿದ್ಯಾಲಯದ ರಜತ ಮಹೋತ್ಸವ ಸಂಭ್ರಮದ ಅಂಗವಾಗಿ, ಸುಶ್ರಾವ್ಯ ಸಂಗೀತ ವಿದ್ಯಾಲಯ, ಸಾಯಿಸೃತಿ ಸಂಗೀತ ವಿದ್ಯಾಲಯದ ಸಹಭಾಗಿತ್ವದಲ್ಲಿ ಫ್ರೀಡಂ ಪಾರ್ಕ್ನಲ್ಲಿ ಭಾನುವಾರ ವಿಶಿಷ್ಟ ಸಾಂಸ್ಕೃತಿಕ ಕಾರ್ಯಕ್ರಮ ವೀಣಾ ತ್ರಿಶತೋತ್ಸವ (Veena Trishatotsava) ನಡೆಯಿತು.
ಕಾರ್ಯಕ್ರಮದಲ್ಲಿ 301 ಕಲಾವಿದರು ಏಕಕಾಲದಲ್ಲಿ ವೀಣೆ ನುಡಿಸಿದರು. ವಿಘ್ನವಿನಾಶಕ ಗಣಪನ ಸ್ತುತಿಯೊಂದಿಗೆ ವೀಣಾ ತ್ರಿಶತೋತ್ಸವಕ್ಕೆ ಚಾಲನೆ ನೀಡಲಾಯಿತು. ನಂತರ ಕಾಯೋ ಶ್ರೀ ಗೌರಿಯನ್ನು ಮೈಸೂರಿನ ರಾಜವಂಶಸ್ಥ, ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ನುಡಿಸಿದರು.
” ಭಾರತೀಯರು ತಮ್ಮ ಧರ್ಮ, ನೆಲದ ಬಗ್ಗೆ ನಿಜವಾದ ಭಾವನೆಯನ್ನು ಅನುಭವಿಸಬೇಕಾದರೆ ಅದು ಇಲ್ಲಿನ ಪಾರಂಪರಿಕ ಕಲೆಯಿಂದ ಮಾತ್ರ ಸಾಧ್ಯ. ಪಾಶ್ಚಾತ್ಯ ದೇಶದಿಂದ ಬಂದ ಸಂಗೀತವನ್ನು ಸ್ವಾಗತಿಸೋಣ. ಅದರ ಮಧ್ಯೆ ಕರ್ನಾಟಕದ ಪರಂಪರೆಯ ಕಲೆ ಹಾಗೂ ಸಂಗೀತ ಉಳಿಸಿ ಬೆಳೆಸೋಣ. ಆಗ ಒಳ್ಳೆಯ ಸಮಾಜ ಕಟ್ಟಲು ಸಾಧ್ಯ ಈ ಪರಂಪರೆಯ ಅಗ್ರಪಂಕ್ತಿಯನ್ನು ಮೈಸೂರು ಸೇರಿದಂತೆ ಬೇರೆ ಬೇರೆ ರಾಜಮನೆತನಗಳು ಕಲಾ ಪೋಷಣೆ ಮೂಲಕ ಮಾಡಿ ತೋರಿಸಿವೆ.
”
ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಮೈಸೂರು – ಕೊಡಗು ಸಂಸದ
” ವೀಣೆ ಭಾರತದ ಸಾಂಸ್ಕೃತಿಕ ರಾಯಭಾರಿ. ಕಲೆಗೆ ಭಾಷೆ, ಧರ್ಮ ಇಲ್ಲ. ಈ ಡಿಜಿಟಲ್ ಯುಗದಲ್ಲಿ ಮಕ್ಕಳಿಗೆ ವೀಣಾ ಅಭ್ಯಾಸ ಮಾಡಿಸುವ ಮೂಲಕ ಈ ಕಲೆಯ ಸಂರಕ್ಷಣೆಯನ್ನು ನಮ್ಮ ಹೆಣ್ಣುಮಕ್ಕಳು ಮಾಡುತ್ತಿದ್ದಾರೆ. ಅವರ ಸಹಭಾಗಿತ್ವ ಇದ್ದಾಗ ಮಾತ್ರ ಸಂಸ್ಕೃತಿ ಉಳಿಸಿ, ಬೆಳೆಸಿಕೊಂಡು ಹೋಗಲು ಸಾಧ್ಯವಿದೆ.”
ರಜತಮಹೋತ್ಸವ ಆಚರಣಾ ಸಮಿತಿ ಗೌರವಾಧ್ಯಕ್ಷರೂ ಆದ ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್, ಶಾಸಕ ಎಸ್.ಎನ್.ಚನ್ನಬಸಪ್ಪ, ವಿಧಾನಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ, ಝರೋದಾ ಕಂಪನಿ ಮುಖ್ಯಸ್ಥೆ ರೇವತಿ ಕಾಮತ್, ಗೀತಾ ರಮಾನಂದ್, ಮಾಜಿ ಶಾಸಕರಾದ ಎಚ್.ಎಂ.ಚಂದ್ರಶೇಖರಪ್ಪ, ಕೆ.ಬಿ.ಪ್ರಸನ್ನಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಉಮೇಶ್ ಹಾಲಾಡಿ, ವಿದುಷಿ ಪದ್ಮನಿ ಸುಧೀರ್ ಇದ್ದರು. ಪ್ರಾಸ್ತಾವಿಕವಾಗಿ ವಿಜಯಲಕ್ಷ್ಮಿ ಮಾತನಾಡಿದರು.
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ