SHIVAMOGGA LIVE NEWS | 29 ಮಾರ್ಚ್ 2022
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಕಾರ್ಯಕರ್ತರು ಪಕ್ಷದ ಆಸ್ತಿ ಎಂದು ಜೆಡಿಎಸ್ ಮುಖಂಡ ಎಂ.ಶ್ರೀಕಾಂತ್ ಹೇಳಿದರು.
ಜೆಡಿಎಸ್ ಕಾರ್ಯಾಲಯದಲ್ಲಿ ಶ್ರೀಕಾಂತ್ ಜನ್ಮದಿನದ ಪ್ರಯುಕ್ತ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ತಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ಚಿರಋಣಿ ಎಂದರು.
ಮುಂದಿನ ದಿನಗಳಲ್ಲಿಯೂ ಪಕ್ಷ ಹಾಗೂ ತಮ್ಮ ಮೇಲೆ ಇದೇ ರೀತಿ ಪ್ರೀತಿ, ವಿಶ್ವಾಸ ಹೊಂದಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮಾಜಿ ಶಾಸಕಿ ಶಾರದಾ ಪೂರ್ಯ ನಾಯ್ಕ್ ಮಾತನಾಡಿ, ಶ್ರೀಕಾಂತ್ ಅವರು ಜೆಡಿಎಸ್ ಪಕ್ಷದ ಸಂಘಟನೆಯಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಜಿಲ್ಲೆಯಲ್ಲಿ ಪಕ್ಷ ಸದೃಢವಾಗಲು ಎಂ.ಶ್ರೀಕಾಂತ್ ಅವರ ಕೊಡುಗೆ ಸಾಕಷ್ಟಿದೆ ಎಂದರು.
ಜಿಲ್ಲೆಯಲ್ಲಿ ಪಕ್ಷ ಇನ್ನಷ್ಟು ಸದೃಢವಾಗಬೇಕು. ಈ ದಿಕ್ಕಿನಲ್ಲಿ ಪ್ರಯತ್ನ ನಡೆಯಬೇಕಿದೆ. ಕಾರ್ಯಕರ್ತರು ಒಗ್ಗಟ್ಟಿನಿಂದ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳಬೇಕು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಎಂ.ಶ್ರೀಕಾಂತ್ ಅವರ ಜನ್ಮದಿಂದ ಪ್ರಯುಕ್ತ ಕಾರ್ಯಕರ್ತರು ಹಾಗೂ ಅವರ ಅಭಿಮಾನಿಗಳಿಗೆ ಮಧ್ಯಾಹ್ನದ ಭೋಜನದ ವ್ಯವಸ್ಥೆ ಮಾಡಲಾಗಿತ್ತು. ಕಾರ್ಯಕ್ರಮದಲ್ಲಿ ಪಕ್ಷದ ಪ್ರಮುಖರಾದ ಕಾಂತರಾಜ, ನಾಗರಾಜ್ ಕಂಕಾರಿ, ಹೆಚ್.ಪಾಲಾಕ್ಷಿ, ಸತ್ಯನಾರಾಯಣ, ನರಸಿಂಹ ಗಂಧದ ಮನೆ, ತ್ಯಾಗರಾಜ, ರಾಜಣ್ಣ, ಶಾಂತ ಸುರೇಂದ್ರ, ಸಿದ್ದಪ್ಪ ಮತ್ತಿತರರು ಉಪಸ್ಥಿತರಿದ್ದರು.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
LATEST NEWS
- ವಿದ್ಯಾನಗರ ಸೇತುವೆ ನಾಮಕರಣ ವಿಚಾರ, ಮುಖ್ಯಮಂತ್ರಿಗೆ ಪತ್ರ ಬರೆದ ಮಾಜಿ ಮಿನಿಸ್ಟರ್

- ಹೊಸನಗರದಿಂದ ಶಿವಮೊಗ್ಗದ ಕಡೆಗೆ ತೆರಳುತ್ತಿದ್ದ ಲಾರಿಗಳು ಪೊಲೀಸ್ ವಶಕ್ಕೆ, ಕಾರಣವೇನು?

- ಎಂಪಿಎಂ ನಿವೃತ್ತ ಕಾರ್ಮಿಕ ನೇಣು ಬಿಗಿದು ಆತ್ಮಹತ್ಯೆ

- ಶಿವಮೊಗ್ಗದ ಹಲವೆಡೆ ಜನವರಿ 21ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

- ಶಿವಮೊಗ್ಗದ ಲಾಡ್ಜ್ಗಳಲ್ಲಿ ಪೊಲೀಸರಿಂದ ದಿಢೀರ್ ತಪಾಸಣೆ, ಏನೆಲ್ಲ ಪರಿಶೀಲಿಸಿದರು?

About The Editor
ನಿತಿನ್ ಆರ್.ಕೈದೊಟ್ಲು






