SHIVAMOGGA LIVE NEWS | SHIMOGA | 13 ಏಪ್ರಿಲ್ 2022
ಕೆ.ಎಸ್. ಈಶ್ವರಪ್ಪ ಕೂಡಲೆ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಶ್ರೀಕಾಂತ್ ಒತ್ತಾಯಿಸಿದ್ದಾರೆ.
ಸಚಿವ ಈಶ್ವರಪ್ಪ ಅವರು ಗುತ್ತಿಗೆದಾರರಿಗೆ ಶೇ. 40 ಕಮೀಷನ್ ಕೇಳಿದ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಲಿಲ್ಲ. ಆದ್ದರಿಂದ ಇವತ್ತು ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಳ್ಳುವಂತಾಗಿದೆ. ಇದರ ಹೊಣೆಯನ್ನು ಸರ್ಕಾರ ಹೊತ್ತು ಮೃತರ ಕುಟುಂಬಕ್ಕೆ ತಕ್ಷಣ ಪರಿಹಾರ ನೀಡಬೇಕು ಎಂದು ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.
ಸಚಿವ ಈಶ್ವರಪ್ಪ ವಿರುದ್ಧ ಸೂಕ್ತ ತನಿಖೆ ನಡೆಸಬೇಕು. ಭ್ರಷ್ಟಾಚಾರ ಹಾಗೂ ಕಮಿಷನ್ ವಿಷಯದ ಬಗ್ಗೆ ಸ್ಪಷ್ಟ ತನಿಖೆ ನಡೆಸಬೇಕು. ಸಚಿವ ಈಶ್ವರಪ್ಪ ಅವರನ್ನು ತಕ್ಷಣ ಸಂಪುಟದಿಂದ ಕೈಬಿಡಬೇಕು ಎಂದು ಶ್ರೀಕಾಂತ್ ಆಗ್ರಹಿಸಿದ್ದಾರೆ.
ಇದನ್ನೂ ಓದಿ | ಶಿವಮೊಗ್ಗದಲ್ಲಿ ಪಂಜು ಹಿಡಿದು ಸಚಿವರ ಕಚೇರಿಗೆ ಮುತ್ತಿಗೆ ಯತ್ನ
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – [email protected]
WhatsApp Number – 7411700200