ದಕ್ಷಿಣ ಭಾರತದ ಮೊದಲ ರೈತ ಮಹಾ ಪಂಚಾಯತ್ಗೆ ಸೈನ್ಸ್ ಮೈದಾನ ಸಜ್ಜು, ಹೇಗಿದೆ ವ್ಯವಸ್ಥೆ?

ಸೈಟ್‌ ಮಾರಾಟಕ್ಕಿದೆ

ಶಿವಮೊಗ್ಗದ ಬಿದಿರೆಯಲ್ಲಿ ಸೈಟ್‌ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559

ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್‌ಗೆ ಪ್ರವೇಶಾತಿ ಆರಂಭ

⇒ ಪೂರ್ತಿ ಡಿಟೇಲ್ಸ್‌ಗೆ ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 MARCH 2021

ದಕ್ಷಿಣ ಭಾರತದ ಮೊದಲ ರೈತ ಮಹಾ ಪಂಚಾಯಿತಿಗೆ ಶಿವಮೊಗ್ಗದ ಸೈನ್ಸ್ ಮೈದಾನ ಸಜ್ಜಾಗಿದೆ. ಸಮಾವೇಶದ ಅಂತಿಮ ಹಂತದ ಸಿದ್ಧತೆಗಳು ಆರಂಭವಾಗಿವೆ.

ಸೈನ್ಸ್ ಮೈದಾನದಲ್ಲಿ ಬೃಹತ್ ವೇದಿಕೆ ಸಿದ್ಧವಾಗಿದೆ. ವೇದಿಕೆ ಮುಂಭಾಗದ ಸಭೀಕರಿಗಾಗಿ ಆಸನದ ವ್ಯವಸ್ಥೆ ಮಾಡಲಾಗುತ್ತಿದೆ. ಪ್ರಮುಖರಾದ ಕೆ.ಟಿ.ಗಂಗಾಧರ್, ಎಂ.ಶ್ರೀಕಾಂತ್, ಕೆ.ಎಲ್.ಅಶೋಕ್ ಸೇರಿದಂತೆ ಹಲವರು ಅಂತಿಮ ಸಿದ್ಧತೆಯ ಪರಿಶೀಲನೆ ನಡೆಸಿದರು.

ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟದ ನೇತೃತ್ವ ವಹಿಸಿರುವ ರಾಕೇಶ್ ಟಿಕಾಯತ್, ಡಾ. ದರ್ಶನ್ ಪಾಲ್, ಯುದ್ದವೀರ್ ಸಿಂಗ್ ಅವರು ಶಿವಮೊಗ್ಗದ ರೈತ ಮಹಾ ಪಂಚಾಯತ್ ಸಮಾವೇಶದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳ ವಿರುದ್ಧ ದೇಶಾದ್ಯಂತ ಹೋರಾಟ ನಡೆಯುತ್ತಿದೆ. ಇದೆ ಕಾರಣದೊಂದಿಗೆ ಶಿವಮೊಗ್ಗದಲ್ಲಿಯೂ ಹೋರಾಟ ನಡೆಯುತ್ತಿದೆ. ರೈತರಲ್ಲಿ ಜಾಗೃತಿ ಮೂಡಿಸಿ, ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಲಾಗುತ್ತಿದೆ ಎಂದು ರೈತ ಮುಖಂಡ ಕೆ.ಟಿ.ಗಂಗಾಧರ್ ತಿಳಿಸಿದರು.

ಇನ್ನು, ರೈತ ಮಹಾ ಪಂಚಾಯತ್ ಸಾಮಾವೇಶದಲ್ಲಿ ಪಾಲ್ಗೊಳ್ಳುವವರು ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಮಾಸ್ಕ್ ಧರಿಸಬೇಕು. ಸ್ಯಾನಿಟೈಸ್‍ ಮಾಡಿಕೊಳ್ಳುವುದು ಕೂಡ ಕಡ್ಡಾಯಗೊಳಿಸಲಾಗಿದೆ. ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕು ಎಂದು ರೈತ ಮುಖಂಡರು ಮನವಿ ಮಾಡಿದ್ದಾರೆ.

ಮತ್ತೊಂದೆಡೆ ಸಮಾವೇಶಕ್ಕೆ ಬರುವವರಿಗೆ ದಾನಿಗಳು ಕುಡಿಯುವ ನೀರು, ಮಜ್ಜಿಗೆ ಮತ್ತು ಕಲ್ಲಂಗಡಿ ನೀಡಲು ಮುಂದಾಗಿದ್ದಾರೆ.  ಬಿಸಿಲ ಝಳ ಇರುವುದರಿಂದ ರೈತರಿಗೆ ಹಣ್ಣು, ದಾಹ ಇಂಗಿಸಿಕೊಳ್ಳಲು ನೀರು, ಮಜ್ಜಿಗೆ ನೀಡುತ್ತಿರುವುದಾಗಿ ರೈತ ಮುಖಂಡ ಕೆ.ಟಿ.ಗಂಗಾಧರ್ ತಿಳಿಸಿದರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

Leave a Comment