ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 9 ಮೇ 2020
ನಗರದ ಬೀದಿ ಬದಿ ವ್ಯಾಪಾರ ಮಾಡುವವರಿಗೆ ವ್ಯಾಪಾರ ಮಾಡಲು ಅನುಮತಿ ನೀಡುವಂತೆ ಒತ್ತಾಯಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.
ಶಿವಮೊಗ್ಗ ಮಹಾನಗರಪಾಲಿಕೆ ವತಿಯಿಂದ ಕರ್ನಾಟಕ ಬೀದಿ ಬದಿ ವ್ಯಾಪಾರಿಗಳ (ಜೀವನೋ ಪಾಯ ಸಂರಕ್ಷಣೆ ಬೀದಿ ವ್ಯಾಪಾರ ನಿಯಂತ್ರಣ) ನಿಯಮಗಳು 2019 ರ ಅಡಿಯಲ್ಲಿ ಗುರುತಿನ ಚೀಟಿ ಪಡೆದು, ಶಿವಮೊಗ್ಗ ನಗರದ ಬೀದಿ ಬದಿಯಲ್ಲಿ ಹಲವಾರು ಜನ ಹಣ್ಣು, ತರಕಾರಿ, ಗೋಬಿ ಮಂಚೂರಿ, ಕಾಫಿ, ಟೀ, ತಿಂಡಿಗಾಡಿ ಮುಂತಾದ ವ್ಯಾಪಾರ ನಡೆಸುತ್ತಾ ಜೀವನ ಸಾಗಿಸುತ್ತಿರುವುದಾಗಿ ತಿಳಿಸಿದರು.
ಇದರಲ್ಲಿ ಹಲವರು ಕಡು ಬಡವರಾಗಿದ್ದು, ತಮ್ಮ ಜೀವನೋಪಾಯಕ್ಕೆ ಬೀದಿ ಬದಿ ವ್ಯಾಪಾರ ವನ್ನೇ ಅವಲಂಬಿಸಿರುತ್ತಾರೆ. ಬೀದಿ ಬದಿ ವ್ಯಾಪಾರ ಬಿಟ್ಟು ಅವರಿಗೆ ಬೇರೆ ಯಾವುದೇ ಆದಾಯ ಮೂಲಗಳಿರುವುದಿಲ್ಲ. ಈಗ ಸರ್ಕಾರದ ಲಾಕ್ ಡೌನ್ ಆದೇಶದಿಂದಾಗಿ ಬೀದಿ ಬದಿಯಲ್ಲಿ ವ್ಯಾಪಾರ ಮಾಡಲು ಬಿಡುತ್ತಿಲ್ಲ ಅಳಲು ತೋಡಿಕೊಂಡರು.
ಆದ್ದರಿಂದ ಜೀವನ ನಡೆಸಲು ಬಹಳ ಕಷ್ಟವಾಗಿರುತ್ತದೆ. ತಮ್ಮನ್ನೆ ನಂಬಿಕೊಂಡ ಕುಟುಂಬ ಬೀದಿಗೆ ಬೀಳುವಂತಾಗಿದೆ ಎಂದು ಹೇಳಿದರು. ಆದರೆ ಕೆಲವು ವ್ಯಾಪಾರಸ್ಥರಿಗೆ ವ್ಯಾಪಾರ ಮುಂದುವರಿಸಲು ಅನುಮತಿ ದೊರೆತಿದ್ದು, ಅವರು ತಮ್ಮ ದಿನನಿತ್ಯದ ವ್ಯಾಪಾರವನ್ನು ಮಾಡುತ್ತಿದ್ದಾರೆ. ಆದರೆ ನಮಗೆ ಅವಕಾಶ ನೀಡಿಲ್ಲ. ಇದರಿಂದಾಗಿ ಜೀವನ ನಡೆಸುವುದೇ ದುಸ್ತರವಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ನಾರಾಯಣ, ಶೇಷಯ್ಯ. ವಿನಯ, ಇಮ್ರಾನ್, ನಾಗರಾಜ್ ಮತ್ತಿತರರು ಉಪಸ್ಥಿತರಿದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






