| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()

ಶಿವಮೊಗ್ಗ ಲೈವ್.ಕಾಂ | SHIMOGA | 9 ಮೇ 2020
ನಗರದ ಬೀದಿ ಬದಿ ವ್ಯಾಪಾರ ಮಾಡುವವರಿಗೆ ವ್ಯಾಪಾರ ಮಾಡಲು ಅನುಮತಿ ನೀಡುವಂತೆ ಒತ್ತಾಯಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.
ಶಿವಮೊಗ್ಗ ಮಹಾನಗರಪಾಲಿಕೆ ವತಿಯಿಂದ ಕರ್ನಾಟಕ ಬೀದಿ ಬದಿ ವ್ಯಾಪಾರಿಗಳ (ಜೀವನೋ ಪಾಯ ಸಂರಕ್ಷಣೆ ಬೀದಿ ವ್ಯಾಪಾರ ನಿಯಂತ್ರಣ) ನಿಯಮಗಳು 2019 ರ ಅಡಿಯಲ್ಲಿ ಗುರುತಿನ ಚೀಟಿ ಪಡೆದು, ಶಿವಮೊಗ್ಗ ನಗರದ ಬೀದಿ ಬದಿಯಲ್ಲಿ ಹಲವಾರು ಜನ ಹಣ್ಣು, ತರಕಾರಿ, ಗೋಬಿ ಮಂಚೂರಿ, ಕಾಫಿ, ಟೀ, ತಿಂಡಿಗಾಡಿ ಮುಂತಾದ ವ್ಯಾಪಾರ ನಡೆಸುತ್ತಾ ಜೀವನ ಸಾಗಿಸುತ್ತಿರುವುದಾಗಿ ತಿಳಿಸಿದರು.
ಇದರಲ್ಲಿ ಹಲವರು ಕಡು ಬಡವರಾಗಿದ್ದು, ತಮ್ಮ ಜೀವನೋಪಾಯಕ್ಕೆ ಬೀದಿ ಬದಿ ವ್ಯಾಪಾರ ವನ್ನೇ ಅವಲಂಬಿಸಿರುತ್ತಾರೆ. ಬೀದಿ ಬದಿ ವ್ಯಾಪಾರ ಬಿಟ್ಟು ಅವರಿಗೆ ಬೇರೆ ಯಾವುದೇ ಆದಾಯ ಮೂಲಗಳಿರುವುದಿಲ್ಲ. ಈಗ ಸರ್ಕಾರದ ಲಾಕ್ ಡೌನ್ ಆದೇಶದಿಂದಾಗಿ ಬೀದಿ ಬದಿಯಲ್ಲಿ ವ್ಯಾಪಾರ ಮಾಡಲು ಬಿಡುತ್ತಿಲ್ಲ ಅಳಲು ತೋಡಿಕೊಂಡರು.
ಆದ್ದರಿಂದ ಜೀವನ ನಡೆಸಲು ಬಹಳ ಕಷ್ಟವಾಗಿರುತ್ತದೆ. ತಮ್ಮನ್ನೆ ನಂಬಿಕೊಂಡ ಕುಟುಂಬ ಬೀದಿಗೆ ಬೀಳುವಂತಾಗಿದೆ ಎಂದು ಹೇಳಿದರು. ಆದರೆ ಕೆಲವು ವ್ಯಾಪಾರಸ್ಥರಿಗೆ ವ್ಯಾಪಾರ ಮುಂದುವರಿಸಲು ಅನುಮತಿ ದೊರೆತಿದ್ದು, ಅವರು ತಮ್ಮ ದಿನನಿತ್ಯದ ವ್ಯಾಪಾರವನ್ನು ಮಾಡುತ್ತಿದ್ದಾರೆ. ಆದರೆ ನಮಗೆ ಅವಕಾಶ ನೀಡಿಲ್ಲ. ಇದರಿಂದಾಗಿ ಜೀವನ ನಡೆಸುವುದೇ ದುಸ್ತರವಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ನಾರಾಯಣ, ಶೇಷಯ್ಯ. ವಿನಯ, ಇಮ್ರಾನ್, ನಾಗರಾಜ್ ಮತ್ತಿತರರು ಉಪಸ್ಥಿತರಿದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಶಿವಮೊಗ್ಗದಲ್ಲಿ 300 ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ, ಇಲ್ಲಿವೆ ಸಾಲು ಸಾಲು ಫೋಟೊಗಳು
- ಇವತ್ತು ಉತ್ತರಾಷಾಢ ನಕ್ಷತ್ರ, ದ್ವಾದಶಿ, ರಾಶಿ ಫಲ ಹೇಗಿದೆ? – ಓದಲು ಇಲ್ಲಿ ಕ್ಲಿಕ್ ಮಾಡಿ
- ಶಿವಮೊಗ್ಗದ ಜೊತೆಗೆ ಶಾಮನೂರು ನಂಟು, ಇಲ್ಲಿತ್ತು ವ್ಯಾವಹಾರಿಕ ಸಂಬಂಧ, ಶಿಷ್ಯರ ಬಳಗ, ಚಿಕ್ಕಮ್ಮನ ಮನೆ
- ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ ಮೈಸೂರಿನ ವ್ಯಕ್ತಿ
- ಯಡೇಹಳ್ಳಿ ಕ್ರಾಸ್ ಬಳಿ ಅರಣ್ಯ ಸಂಚಾರಿ ದಳದ ದಾಳಿ, ಕಾರಾವಾರದ ವ್ಯಕ್ತಿ ಅರೆಸ್ಟ್
- ಅಡಿಕೆ ಎಲೆಚುಕ್ಕಿ ರೋಗ, ಬಾಕಿ ಹಣ ಬಿಡುಗಡೆಗೆ ಸಿಎಂ ಸೂಚನೆ
- ಕಿತ್ತೂರು ರಾಣಿ ಚನ್ನಮ್ಮ, ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ
- ಸಾಗರ ನಗರಸಭೆ ಎಚ್ಚರಿಕೆ, ಬೀದಿ ನಾಯಿಗಳ ನಿಯಂತ್ರಣ ಕುರಿತು ಪ್ರಮುಖ ಪ್ರಕಟಣೆ
![]()