ಶಿವಮೊಗ್ಗ ಲೈವ್.ಕಾಂ | SHIMOGA NEWS | 9 MAY 2021
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ರಾಜ್ಯಾದ್ಯಂತ 14 ದಿನ ಲಾಕ್ ಡೌನ್ ಘೋಷಣೆಯಾಗಿದೆ. ಶಿವಮೊಗ್ಗದಲ್ಲಿ ಬಿಗಿಯಾದ ಲಾಕ್ಡೌನ್ ಕೈಗೊಳ್ಳಲು ನಿರ್ಧರಿಸಲಾಗಿದೆ. ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ಸ್ವಾತಂತ್ರ್ಯ ನೀಡಿದೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ನೇತೃತ್ವದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಸಚಿವರ ಸೂಚನೆ ಏನು?
ಲಾಕ್ಡೌನ್ ಪರಿಣಾಮಕಾರಿ ಆಗಬೇಕಿದ್ದರೆ ಪೊಲೀಸ್ ಇಲಾಖೆಯದ್ದು ಪ್ರಮುಖ ಜವಾಬ್ದಾರಿ
ವಾರ್ಡ್ವಾರು ನಾಖಾಬಂಧಿ ಹಾಕಬೇಕು. ವಾರ್ಡ್ನ ವ್ಯಾಪ್ತಿಯಲ್ಲೇ ಓಡಾಡಬೇಕು. ಮೆಡಿಕಲ್ ಶಾಪ್ಗೆ ಹೋಗಬೇಕಾದರೂ ನಡೆದುಕೊಂಡೆ ಹೋಗಬೇಕು.
ಒಂದೇ ಒಂದು ವಾಹನ ಓಡಾಡಿದರೆ ಆ ಭಾಗದಲ್ಲಿ ಡ್ಯೂಟಿಯಲ್ಲಿ ಇರುವ ಪೊಲೀಸ್ ಸಿಬ್ಬಂದಿ ಮೇಲೆ ಕ್ರಮ ಕೈಗೊಳ್ಳಿ.
ಎಲ್ಲಾ ದಿನಸಿ ಅಂಗಡಿ ಮುಂದೆ ಡಿಸ್ಟೆನ್ಸ್ ಮೇಂಟೇನ್ ಮಾರ್ಕ್ ಮಾಡಬೇಕು. ಕೋವಿಡ್ ನಿಯಮ ಉಲ್ಲಂಘಿಸಿದರೆ ಅಂಗಡಿ ಬಾಗಿಲು ಹಾಕಿಸಿ, ಜನರ ವಿರುದ್ಧ ಕ್ರಮ ಕೈಗೊಳ್ಳಬೇಕು.
ಪೊಲೀಸರಿಗೆ ಪೂರ್ಣ ಜವಾಬ್ದಾರಿ ನೀಡಲಾಗುತ್ತದೆ. ಒಂದು ವೇಳೆ ಜನರ ನಿಯಂತ್ರಣ ಆಗದಿದ್ದರೆ ಪೊಲೀಸರ ವಿರುದ್ಧ ಕ್ರಮಕ್ಕೆ ಸೂಚಿಸಲಾಗುತ್ತದೆ.
ನೆಹರೂ ಸ್ಟೇಡಿಯಂ, ಪಾರ್ಕುಗಳಲ್ಲಿ ವಾಕಿಂಗ್ ಮಾಡಲು ಕೂಡ ಅವಕಾಶ ಇರುವುದಿಲ್ಲ.
ಜಿಲ್ಲಾ ರಕ್ಷಣಾಧಿಕಾರಿ ಹೇಳಿದ್ದೇನು?
LATEST NEWS
- ವಿದ್ಯಾನಗರ ಸೇತುವೆ ನಾಮಕರಣ ವಿಚಾರ, ಮುಖ್ಯಮಂತ್ರಿಗೆ ಪತ್ರ ಬರೆದ ಮಾಜಿ ಮಿನಿಸ್ಟರ್

- ಹೊಸನಗರದಿಂದ ಶಿವಮೊಗ್ಗದ ಕಡೆಗೆ ತೆರಳುತ್ತಿದ್ದ ಲಾರಿಗಳು ಪೊಲೀಸ್ ವಶಕ್ಕೆ, ಕಾರಣವೇನು?

- ಎಂಪಿಎಂ ನಿವೃತ್ತ ಕಾರ್ಮಿಕ ನೇಣು ಬಿಗಿದು ಆತ್ಮಹತ್ಯೆ

- ಶಿವಮೊಗ್ಗದ ಹಲವೆಡೆ ಜನವರಿ 21ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

- ಶಿವಮೊಗ್ಗದ ಲಾಡ್ಜ್ಗಳಲ್ಲಿ ಪೊಲೀಸರಿಂದ ದಿಢೀರ್ ತಪಾಸಣೆ, ಏನೆಲ್ಲ ಪರಿಶೀಲಿಸಿದರು?

About The Editor
ನಿತಿನ್ ಆರ್.ಕೈದೊಟ್ಲು






