ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ವಿವಿಧ ದೇಶಗಳ ನಡುವೆ ಉಂಟಾಗುತ್ತಿರುವ ಯುದ್ಧ ಮತ್ತು ಸಂಘರ್ಷಗಳು ಮಾನವ ಕುಲಕ್ಕೆ ಮಾರಕವಾಗಿವೆ. ಯುದ್ದ ತಪ್ಪಿಸಿ ಶಾಂತಿಯ (global peace) ಮಾರ್ಗವನ್ನು ಅನುಸರಿಸೋಣ ಎಂದು ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜು ಹಾಗೂ ಕಮಲಾ ನೆಹರು ರಾಷ್ಟ್ರೀಯ ಮಹಿಳಾ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಯುದ್ದ ಮಾನವ ಲೋಕದಲ್ಲಿನ ಮಾಯದ ಗಾಯ. ಸಾವಿರಾರು ನಿರಪರಾಧಿಗಳು, ಅಮಾಯಕರು ಜೀವ ಕಳೆದುಕೊಳ್ಳುತ್ತಿದ್ದಾರೆ. ಮನೆ, ಮೂಲ ಸೌಕರ್ಯ, ಪ್ರಕೃತಿ ಸಂಪತ್ತು ನಾಶವಾಗುತ್ತಿವೆ. ದೇಶಗಳ ಆರ್ಥಿಕ ಸ್ಥಿತಿ ಕುಸಿಯುತ್ತಿವೆ. ಸಮಾಜದಲ್ಲಿ ಅಶಾಂತಿ ವಾತಾವರಣ ನಿರ್ಮಾಣವಾಗುತ್ತಿದೆ ಎಂದು ಮನವಿಯಲ್ಲಿ ತಿಳಿಸಿದೆ.

ಈ ಹಿನ್ನೆಲೆ ಶಾಂತಿಯ ಮಹತ್ವವನ್ನು ಅರಿತು, ಸಮಸ್ಯೆಗಳನ್ನು ಹಿಂಸೆಯ ಬದಲು ಸ್ನೇಹ ಭಾವದಿಂದ ಪರಿಹರಿಸಬೇಕು. ರಾಷ್ಟ್ರಗಳು ಪರಸ್ಪರ ಸಹಕಾರ, ಸಹಬಾಳ್ವೆ ಮತ್ತು ಪರಸ್ಪರ ಗೌರವದ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು. ಶಿಕ್ಷಣ ನಮ್ಮಲ್ಲಿ ಶಾಂತಿ, ಸೌಹಾರ್ದತೆ ಕಲಿಸಿದೆ. ಯುದ್ಧ ಸಮಸ್ಯೆಗಳ ಪರಿಹಾರವಲ್ಲ, ಶಾಂತಿಯೆ ಶಾಶ್ವತ ಪರಿಹಾರ ಎಂದು ವಿದ್ಯಾರ್ಥಿಗಳು ಹೇಳಿದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಇಂಡಿಗೋ ವಿಮಾನ ಸಿಬ್ಬಂದಿಯನ್ನು ಅಡ್ಡಗಟ್ಟಿ ದೊಣ್ಣೆಯಿಂದ ದಾಳಿ
ಉಪನ್ಯಾಸಕರಾದ ಪ್ರವೀಣ್, ಶ್ರೀಲಲಿತಾ, ಸ್ಮಿತಾ ರೂಪೇಶ್, ನಕ್ಷಾ, ಸೌಪರ್ಣಿಕಾ, ಗಾಯತ್ರಿ, ರಾಘವೇಂದ್ರ, ರಶ್ಮಿ, ಭಾರತಿ ದಯಾನಂದ, ಡಾ. ಬಸವಾರಾಜ್, ಎಸ್.ಮಂಜು ಸೇರಿದಂತೆ ಮತ್ತಿತರರು ಇದ್ದರು.
LATEST NEWS
- ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

- ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

- ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

- ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ JDS ಕಾರ್ಯಕರ್ತರ ಸಭೆ, MLA ಮಹತ್ವದ ಸೂಚನೆ, ಏನದು?

- ATNC, ಕಮಲಾ ನೆಹರು ಕಾಲೇಜು ವಿದ್ಯಾರ್ಥಿಗಳಿಂದ ವಿಭಿನ್ನ ಮನವಿ, ಏನಿದು?

About The Editor
ನಿತಿನ್ ಆರ್.ಕೈದೊಟ್ಲು














