SHIVAMOGGA LIVE NEWS | 30 ಮಾರ್ಚ್ 2022
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಕುವೆಂಪು ವಿಶ್ವವಿದ್ಯಾಲಯದ ಮೊದಲನೇ ವರ್ಷದ ಪದವಿ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ ಹೆಚ್ಚಳ ಮಾಡಿರುವುದನ್ನು ವಿರೋಧಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಕುವೆಂಪು ವಿವಿ ಮೊದಲನೇ ವರ್ಷದ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ ಬಿಎ, ಬಿ.ಎಸ್.ಸಿ. ವಿದ್ಯಾರ್ಥಿಗಳಿಗೆ ಸುಮಾರು 300ರೂ. ಮತ್ತು ಬಿಕಾಂ, ಬಿಬಿಎ, ಬಿಸಿಎ ವಿದ್ಯಾರ್ಥಿಗಳಿಗೆ ಸುಮಾರು 800 ರೂ. ಶುಲ್ಕ ಹೆಚ್ಚಳ ಮಾಡಿರುವುದನ್ನು ವಿದ್ಯಾರ್ಥಿಗಳು ಖಂಡಿಸಿದರು.
ವಿದ್ಯಾರ್ಥಿಗಳಿಗೆ ಶುಲ್ಕ ಪಾವತಿಸಲು ಹೊರೆಯಾಗುತ್ತದೆ. ಈ ಕೂಡಲೇ ಶುಲ್ಕ ಹೆಚ್ಚಳ ಆದೇಶ ಹಿಂಪಡೆಯಬೇಕು. ಅಷ್ಟೇ ಅಲ್ಲದೇ ವಿದ್ಯಾರ್ಥಿಗಳ ರಿಜಿಸ್ಟರ್ ನಂಬರ್ ದೊರಕದೇ ಇರುವುದರಿಂದ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ. ಈ ಸಮಸ್ಯೆಯನ್ನು ಕೂಡಲೇ ಬಗೆಹರಿಸಬೇಕೆಂದು ಪರೀಕ್ಷಾ ಶುಲ್ಕ ಹೆಚ್ಚಳಕ್ಕೆ ಎಬಿವಿಪಿ ವಿರೋಧ ವಿದ್ಯಾರ್ಥಿಗಳು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಎಬಿವಿಪಿ ತಾಲೂಕು ಸಂಚಾಲಕ ಲೋಹಿತ್ ಕುಮಾರ್ ಕೆ.ಎಸ್., ಚಂದ್ರಶೇಖರ್, ಸ್ವಾತಿ, ಸ್ವರೂಪ್, ಮಾಲತೇಶ, ಪುನೀತ್,ಪ್ರಮೋದ್, ರೋಹಿತ್ ಮೊದಲಾದವರಿದ್ದರು.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






