ಕುವೆಂಪು ವಿವಿ ಪರೀಕ್ಷೆಗಳ ವೇಳಾಪಟ್ಟಿ ಸಡಿಲಿಕೆಗೆ ಶಿವಮೊಗ್ಗದಲ್ಲಿ ಪ್ರತಿಭಟನೆ, ವಿದ್ಯಾರ್ಥಿಗಳ ಬೇಡಿಕೆಗಳೇನು?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

SHIVAMOGGA LIVE NEWS | 15 AUGUST 2023

SHIMOGA : ಕುವೆಂಪು ವಿಶ್ವವಿದ್ಯಾಲಯದ ಸೆಮಿಸ್ಟರ್‌ ಪರೀಕ್ಷೆಗಳ (Semester Exams) ತಾತ್ಕಾಲಿಕ ವೇಳಾಪಟ್ಟಿ ಸಡಿಲಿಸುವಂತೆ ಒತ್ತಾಯಿಸಿ ವಿದ್ಯಾರ್ಥಿ ಒಕ್ಕೂಟದಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಆ.30ರಿಂದ ಕುವೆಂಪು ವಿಶ್ವವಿದ್ಯಾಲಯದ ಪದವಿ ತರಗತಿಗಳ ಪರೀಕ್ಷೆ ಆರಂಭವಾಗಲಿದೆ. ಈ ಹಿನ್ನೆಲೆ ವಿವಿಯು ಸಂಭವನೀಯ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಇದರಲ್ಲಿ ವಿಷಯವಾರು ವೇಳಾಪಟ್ಟಿ ಅಂತರ ಕೇವಲ ಒಂದು ದಿನ ಮಾತ್ರ ನೀಡಲಾಗಿದೆ. ಇದರಿಂದ ವಿಷಯಗಳ ಪುನರಾವರ್ತನೆಗೆ ಸಮಯ ಸಿಗುವುದಿಲ್ಲ ಎಂದು ಮನವಿಯಲ್ಲಿ ತಿಳಿಸಲಾಗಿದೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಇದನ್ನೂ ಓದಿ – ಪಂಜರ ಸೇರಿತು ಶಿವಮೊಗ್ಗಕ್ಕೆ ಆಗಮಿಸಿದ್ದ ಟಿ-55 ಯುದ್ಧ ಟ್ಯಾಂಕರ್

ಅಧ್ಯಯನಕ್ಕೆ ಕಡಿಮೆ ಸಮಯ ಸಿಗುವುದರಿಂದ ವಿದ್ಯಾರ್ಥಿಗಳು ತೀವ್ರ ಒತ್ತಡಕ್ಕೆ ಸಿಲುಕಲಿದ್ದಾರೆ. ಆರೋಗ್ಯದ ಮೇಲೂ ಪರಿಣಾಮ ಉಂಟಾಗಲಿದೆ. ಆದ್ದರಿಂದ ವೇಳಾಪಟ್ಟಿಯನ್ನು ಸಡಿಲಿಸುವಂತೆ ವಿದ್ಯಾರ್ಥಿಗಳು ಒತ್ತಾಯಿಸಿದರು. ಈ ವೇಳೆ ಸಿ.ಎಂ.ಚಿನ್ಮಯ್‌, ಅಜಿತ್‌, ದರ್ಶನ್‌ ಸೇರಿದಂತೆ ಹಲವರು ಇದ್ದರು.

PARISHRAMA neet academy

Leave a Comment