SHIVAMOGGA LIVE NEWS | 15 AUGUST 2023
SHIMOGA : ಕುವೆಂಪು ವಿಶ್ವವಿದ್ಯಾಲಯದ ಸೆಮಿಸ್ಟರ್ ಪರೀಕ್ಷೆಗಳ (Semester Exams) ತಾತ್ಕಾಲಿಕ ವೇಳಾಪಟ್ಟಿ ಸಡಿಲಿಸುವಂತೆ ಒತ್ತಾಯಿಸಿ ವಿದ್ಯಾರ್ಥಿ ಒಕ್ಕೂಟದಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಆ.30ರಿಂದ ಕುವೆಂಪು ವಿಶ್ವವಿದ್ಯಾಲಯದ ಪದವಿ ತರಗತಿಗಳ ಪರೀಕ್ಷೆ ಆರಂಭವಾಗಲಿದೆ. ಈ ಹಿನ್ನೆಲೆ ವಿವಿಯು ಸಂಭವನೀಯ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಇದರಲ್ಲಿ ವಿಷಯವಾರು ವೇಳಾಪಟ್ಟಿ ಅಂತರ ಕೇವಲ ಒಂದು ದಿನ ಮಾತ್ರ ನೀಡಲಾಗಿದೆ. ಇದರಿಂದ ವಿಷಯಗಳ ಪುನರಾವರ್ತನೆಗೆ ಸಮಯ ಸಿಗುವುದಿಲ್ಲ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ – ಪಂಜರ ಸೇರಿತು ಶಿವಮೊಗ್ಗಕ್ಕೆ ಆಗಮಿಸಿದ್ದ ಟಿ-55 ಯುದ್ಧ ಟ್ಯಾಂಕರ್
ಅಧ್ಯಯನಕ್ಕೆ ಕಡಿಮೆ ಸಮಯ ಸಿಗುವುದರಿಂದ ವಿದ್ಯಾರ್ಥಿಗಳು ತೀವ್ರ ಒತ್ತಡಕ್ಕೆ ಸಿಲುಕಲಿದ್ದಾರೆ. ಆರೋಗ್ಯದ ಮೇಲೂ ಪರಿಣಾಮ ಉಂಟಾಗಲಿದೆ. ಆದ್ದರಿಂದ ವೇಳಾಪಟ್ಟಿಯನ್ನು ಸಡಿಲಿಸುವಂತೆ ವಿದ್ಯಾರ್ಥಿಗಳು ಒತ್ತಾಯಿಸಿದರು. ಈ ವೇಳೆ ಸಿ.ಎಂ.ಚಿನ್ಮಯ್, ಅಜಿತ್, ದರ್ಶನ್ ಸೇರಿದಂತೆ ಹಲವರು ಇದ್ದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200