ಶಿವಮೊಗ್ಗದಲ್ಲಿ ವಿದ್ಯಾರ್ಥಿಗಳಿಲ್ಲದಿದ್ದರೆ ಸಭೆ, ಸಮಾರಂಭಗಳೆ ನಡೆಯೋದಿಲ್ಲ, ಎಲ್ಲಕ್ಕು ಇವರು ಅನಿವಾರ್ಯ ಪ್ರೇಕ್ಷಕರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-9-years-Number-1.avif

SHIVAMOGGA LIVE NEWS | 11 JANUARY 2024

SHIMOGA : ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಯೋಜನೆ ಯುವನಿಧಿಗೆ ಜ.12ರಂದು ಶಿವಮೊಗ್ಗದಲ್ಲಿ ಚಾಲನೆ ನೀಡಲಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಯೋಜನೆಗೆ ಚಾಲನೆ ನೀಡುತ್ತಿದ್ದಾರೆ. ಈ ಕಾರ್ಯಕ್ರಮಕ್ಕೆ ಶಿವಮೊಗ್ಗ ಮತ್ತು ಹೊರ ಜಿಲ್ಲೆಯ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳನ್ನು ಕರೆತರಲಾಗುತ್ತಿದೆ. ಇದು ರಾಜಕೀಯ ಚರ್ಚೆಗೆ ಕಾರಣವಾಗಿದೆ.

ಸಾವಿರ ಸಾವಿರ ಸಂಖ್ಯೆಯ ವಿದ್ಯಾರ್ಥಿಗಳು

ಯುವನಿಧಿ ಯೋಜನೆ ಚಾಲನೆ ಕಾರ್ಯಕ್ರಮಕ್ಕೆ ಒಂದು ಲಕ್ಷ ಜನರನ್ನು ಸೇರಿಸುವ ಗುರಿ ಹೊಂದಲಾಗಿದೆ. ವಿವಿಧ ಕಾಲೇಜುಗಳ ವಿದ್ಯಾರ್ಥಿಗಳನ್ನು ಕಾರ್ಯಕ್ರಮಕ್ಕೆ ಕರೆ ತರಲಾಗುತ್ತಿದೆ. ಈಗಾಗಲೆ ವಿವಿಧ ಕಾಲೇಜುಗಳ ಆಡಳಿತ ಮಂಡಳಿ, ಪ್ರಾಂಶುಪಾಲರ ಜೊತೆಗೆ ಸಚಿವರು ಸಭೆ ನಡೆಸಿದ್ದಾರೆ. ಪ್ರತಿ ಕಾಲೇಜಿಗು ಬಸ್‌ ಕಳುಹಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ಶಿವಮೊಗ್ಗ ಜಿಲ್ಲೆಯ ಏಳು ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಪದವಿ ಕಾಲೇಜು ವಿದ್ಯಾರ್ಥಿಗಳನ್ನು ಕಾರ್ಯಕ್ರಮಕ್ಕೆ ಕರೆತರಲು ವ್ಯವಸ್ಥೆಯಾಗಿದೆ. ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಉತ್ತರ ಕನ್ನಡ, ಹಾವೇರಿ ಜಿಲ್ಲೆಯ ವಿದ್ಯಾರ್ಥಿಗಳನ್ನು ಕೂಡ ಕರೆತರಲಾಗುತ್ತಿದೆ.ಮಧು ಬಂಗಾರಪ್ಪ, ಶಿಕ್ಷಣ ಸಚಿವ

ಬಿಜೆಪಿ ನಾಯಕರ ಆಕ್ಷೇಪ

ಕಾಲೇಜು ವಿದ್ಯಾರ್ಥಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸುತ್ತಿರುವುದು ಬಿಜೆಪಿ ಮತ್ತು ಅದರ ಸಹ ಸಂಘಟನೆ ಎಬಿಪಿಪಿ ವಿರೋಧ ವ್ಯಕ್ತಪಡಿಸಿದೆ. ಈಗಾಗಲೆ ಎಬಿವಿಪಿ ಸಂಘಟನೆ ಸರ್ಕಾರದ ನಡೆ ವಿರೋಧಿಸಿ ಉನ್ನತ ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕರಿಗೆ ಮನವಿ ಸಲ್ಲಿಸಿದೆ. ಇನ್ನೊಂದೆಡೆ ಬಿಜೆಪಿ ಕೂಡ ಆಕ್ಷೇಪ ವ್ಯಕ್ತಪಡಿಸಿದೆ.

ಯುವನಿಧಿ ಕಾರ್ಯಕ್ರಮಕ್ಕೆ ಅದರ ಫಲಾನುಭವಿಗಳನ್ನು ಕರೆಯಿಸಬೇಕು. ಅದರೆ ಸರ್ಕಾರ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರ ಮೇಲೆ ಒತ್ತಡ ಹೇರಿ ವಿದ್ಯಾರ್ಥಿಗಳನ್ನು ಕಾರ್ಯಕ್ರಮಕ್ಕೆ ಕರೆದೊಯ್ಯುತ್ತಿದೆ. ಕುವೆಂಪು ವಿಶ್ವವಿದ್ಯಾಲಯ ವ್ಯಾಪ್ತಿಯ ವಿದ್ಯಾರ್ಥಿಗಳಿಗೆ ಈ ಯೋಜನೆಯಿಂದ ಲಾಭವಿಲ್ಲ.ಹರಿಕೃಷ್ಣ, ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ

ಯುವಕರ ರಕ್ಷಣೆಗಾಗಿ ಯುವನಿಧಿ

ಬಿಜೆಪಿ ಆರೋಪಕ್ಕೆ ಕಾಂಗ್ರೆಸ್‌ ಮುಖಂಡರು ತಿರುಗೇಟು ನೀಡಲು ಆರಂಭಿಸಿದ್ದಾರೆ. ಯುವ ಸಮೂಹಕ್ಕೆ ತಲುಪಬೇಕಾದ ಕಾರ್ಯಕ್ರಮವಾದ್ದರಿಂದ ಕಾಲೇಜು ವಿದ್ಯಾರ್ಥಿಗಳನ್ನು ಆಹ್ವಾನಿಸಲಾಗುತ್ತಿದೆ ಎಂದು ಸಮರ್ಥಿಸಿಕೊಂಡಿದೆ.

ನಿರುದ್ಯೋಗ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ಆದ್ದರಿಂದ ನಮ್ಮ ರಾಜ್ಯದ ಯುವಕರನ್ನು ರಕ್ಷಿಸುವ ಸಲುವಾಗಿ ಯುವನಿಧಿ ಜಾರಿಗೊಳಿಸುತ್ತಿದ್ದೇವೆ. ಕಾರ್ಯಕ್ರಮಕ್ಕೆ ಪದವಿ ಕಾಲೇಜು ವಿದ್ಯಾರ್ಥಿಗಳನ್ನು ಮಾತ್ರ ಕರೆಸುತ್ತಿದ್ದೇವೆ. ಇದು ಒಂದು ವರ್ಷದ ಕಾರ್ಯಕ್ರಮ ಅಲ್ಲ. ಮುಂದುವರೆಯಲಿದೆ. ಜಾಗೃತಿ ಮೂಡಿಸುವ ಯೋಜನೆಯಾಗಿದೆ.ಡಾ. ಶರಣಪ್ರಕಾಶ್‌ ಪಾಟೀಲ್‌, ಕೌಶಲ್ಯಾಭಿವೃದ್ಧಿ ಸಚಿವ

ವಿದ್ಯಾರ್ಥಿಗಳ ವಿಚಾರದಲ್ಲಿ ವಿವಾದ ಇದೆ ಮೊದಲಲ್ಲ

ಶಿವಮೊಗ್ಗದಲ್ಲಿ ನಡೆಯುತ್ತಿರುವ ಬಹುತೇಕ ಸರ್ಕಾರಿ ಕಾರ್ಯಕ್ರಮಗಳಿಗೆ ವಿದ್ಯಾರ್ಥಿಗಳು ಅನಿವಾರ್ಯ ಸಭೀಕರಾಗಿದ್ದಾರೆ. ಗಣ್ಯರ ಜಯಂತಿ ಕಾರ್ಯಕ್ರಮಗಳು, ಜಾಥಾಗಳು ವಿದ್ಯಾರ್ಥಿಗಳಿಲ್ಲದೆ ನಡೆಯಲು ಸಾಧವಿಲ್ಲ. ಆದರೆ ರಾಜಕಾರಣಿಗಳು ಭಾಗವಹಿಸುವ ಮತ್ತು ರಾಜಕೀಯ ಚರ್ಚೆಗೆ ಕಾರಣವಾಗಿರುವ ಕಾರ್ಯಕ್ರಮ, ಜಾಥಾಗಳಿಗೆ ಶಾಲೆ, ಕಾಲೇಜು ವಿದ್ಯಾರ್ಥಿಗಳ ಬಳಕೆ ವಿವಾದ ಹುಟ್ಟಿಸುತ್ತಿದೆ.

ಇದನ್ನೂ ಓದಿ – ಶಿವಮೊಗ್ಗದ ಜೈಲ್‌ ಸರ್ಕಲ್‌ನಿಂದ ಗೋಪಿ ಸರ್ಕಲ್‌ವರೆಗೆ ಪಂಜು ಹಿಡಿದು ಸಾಗಿದ ಮಿನಿಸ್ಟರ್‌ಗಳು

ಶಿವಮೊಗ್ಗದಲ್ಲಿ ಗಲಭೆಗಳು ನಡೆದಾಗ ಶಾಂತಿಗಾಗಿ ನಡಿಗೆ ಜಾಥಾ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಶಾಲೆ, ಕಾಲೇಜು ವಿದ್ಯಾರ್ಥಿಗಳ ಕರೆತರುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಶಿವಮೊಗ್ಗ ವಿಮಾನ ನಿಲ್ದಾಣ ಕಾರ್ಯಕ್ರಮಕ್ಕು ವಿದ್ಯಾರ್ಥಿಗಳನ್ನು ಕರೆದೊಯ್ಯಲಾಗಿತ್ತು. ಈಗ ಯುವ ನಿಧಿ ಯೋಜನೆ ಚಾಲನಾ ಕಾರ್ಯಕ್ರಮಕ್ಕು ವಿದ್ಯಾರ್ಥಿಗಳ ಕರೆತರಲಾಗುತ್ತಿದೆ. ಸದ್ಯ ಜಿಲ್ಲೆಯ ವಿದ್ಯಾರ್ಥಿಗಳು ಶಾಲೆ, ಕಾಲೇಜು ಚಟುವಟಿಕೆ ಜೊತೆಗೆ ಹೋರಾಟ, ಚಳವಳಿ, ಸಭೆ, ಸಮಾರಂಭಗಳಿಗೆ ಬಲ ತುಂಬುವ ಅನಿವಾರ್ಯವು ಎದುರಾಗಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 11, 2024

Leave a Comment