SHIVAMOGGA LIVE NEWS | 18 AUGUST 2023
SHIMOGA : ವಾಟ್ಸಪ್ ಮೂಲಕ ಸಾರ್ವಜನಿಕರ ಸಮಸ್ಯೆ (Problems) ಆಲಿಸುವ ವಿಭಿನ್ನ ಪ್ರಯೋಗ ಮಾಡಿದ್ದ ಶಾಸಕ ಎಸ್.ಎನ್.ಚನ್ನಬಸಪ್ಪ ಈಗ ಇನ್ನೊಂದು ವಿನೂತನ ಹೆಜ್ಜೆ ಇಟ್ಟಿದ್ದಾರೆ. ಇನ್ನು ಐದು ವರ್ಷ ಶಿವಮೊಗ್ಗ ನಗರ ಹೇಗಿರಬೇಕು ಎಂದು ನಾಗರಿಕರಿಂದ ಸಲಹೆ (Suggestion) ಪಡೆಯಲು ಮುಂದಾಗಿದ್ದಾರೆ. ಇದಕ್ಕಾಗಿ ನಗರದ 50 ಕಡೆ ಸಲಹಾ ಪೆಟ್ಟಿಗೆಗಳನ್ನು (Suggestion Box) ಇರಿಸಲು ತೀರ್ಮಾನಿಸಿದ್ದಾರೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಇದನ್ನೂ ಓದಿ – ಶಿವಮೊಗ್ಗ MLA ಕಚೇರಿಯಲ್ಲಿ ವಾಟ್ಸಪ್ ಹೆಲ್ಪ್ಲೈನ್ ಶುರು, ಏನಿದು? ಹೇಗಿರುತ್ತೆ? ಜನಕ್ಕೇನು ಉಪಯೋಗ?
ಶಿವಮೊಗ್ಗದ ಗೋಪಿ ಸರ್ಕಲ್ನಲ್ಲಿ (Gopi Circle) ಸಲಹಾ ಪಟ್ಟೆಗೆ ಇರಿಸುವ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅಭಿಯಾನಕ್ಕೆ ಚಾಲನೆ ನೀಡಿದರು.
ಏನಿದು ಸಲಹಾ ಪೆಟ್ಟಿಗೆ?
ಆ.17ರಿಂದ ಆ.31ರವರೆಗೆ ಶಿವಮೊಗ್ಗ ನಗರದ ಆಯ್ದ 50 ಕಡೆ ಸಲಹಾ ಪೆಟ್ಟಿಗೆಗಳನ್ನು ಇರಿಸಲು ತೀರ್ಮಾನಿಸಲಾಗಿದೆ. ಇದರ ಜೊತೆಗೆ ಮಾಹಿತಿ ಕಾರ್ಡುಗಳು ಇರಲಿವೆ. ನಾಗರಿಕರು ಇನ್ನು ಐದು ವರ್ಷ ಶಿವಮೊಗ್ಗ ನಗರ ಹೇಗಿರಬೇಕು ಎಂದು ಕಾರ್ಡುಗಳಲ್ಲಿ ಅಭಿಪ್ರಾಯ ಬರೆದು, ಸಲಹಾ ಪೆಟ್ಟಿಗೆಗೆ ಹಾಕಬಹುದು. ನಂತರ ಶಾಸಕರ ಕಚೇರಿ ಕರ್ತವ್ಯ ಭವನದಲ್ಲಿ ಈ ಕಾರ್ಡುಗಳನ್ನು ಪರಿಶೀಲಿಸಿ ಮುಂದಿನ ಯೋಜನೆ ಸಿದ್ಧಪಡಿಸಲಾಗುತ್ತದೆ ಎಂದು ತಿಳಿಸಲಾಗಿದೆ.

ಗೋಪಿ ವೃತ್ತದಲ್ಲಿ ಅಭಿಪ್ರಾಯ ಸಂಗ್ರಹಿಸಲಾಯಿತು. ಸಾರ್ವಜನಿಕರು, ಪೊಲೀಸ್ ಸಿಬ್ಬಂದಿ, ಮಳಿಗೆಗಳ ಮಾಲೀಕರು ಸೇರಿದಂತೆ ಹಲವರು ತಮ್ಮ ಅಭಿಪ್ರಾಯ ಬರೆದು ಪೆಟ್ಟಿಗೆಗೆ ಹಾಕಿದರು.
.jpeg)
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು





