ಮತ್ತೊಂದು ವಿಭಿನ್ನ ಹೆಜ್ಜೆ ಇಟ್ಟ ಶಿವಮೊಗ್ಗ MLA, ನಗರದ 50 ಕಡೆ ಕಾಣಿಸಲಿದೆ ಈ ಪಟ್ಟಿಗೆ, ಏನಿದು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 18 AUGUST 2023

SHIMOGA : ವಾಟ್ಸಪ್‌ ಮೂಲಕ ಸಾರ್ವಜನಿಕರ ಸಮಸ್ಯೆ (Problems) ಆಲಿಸುವ ವಿಭಿನ್ನ ಪ್ರಯೋಗ ಮಾಡಿದ್ದ ಶಾಸಕ ಎಸ್‌.ಎನ್‌.ಚನ್ನಬಸಪ್ಪ ಈಗ ಇನ್ನೊಂದು ವಿನೂತನ ಹೆಜ್ಜೆ ಇಟ್ಟಿದ್ದಾರೆ. ಇನ್ನು ಐದು ವರ್ಷ ಶಿವಮೊಗ್ಗ ನಗರ ಹೇಗಿರಬೇಕು ಎಂದು ನಾಗರಿಕರಿಂದ ಸಲಹೆ (Suggestion) ಪಡೆಯಲು ಮುಂದಾಗಿದ್ದಾರೆ. ಇದಕ್ಕಾಗಿ ನಗರದ 50 ಕಡೆ ಸಲಹಾ ಪೆಟ್ಟಿಗೆಗಳನ್ನು (Suggestion Box) ಇರಿಸಲು ತೀರ್ಮಾನಿಸಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗ MLA ಕಚೇರಿಯಲ್ಲಿ ವಾಟ್ಸಪ್‌ ಹೆಲ್ಪ್‌ಲೈನ್‌ ಶುರು, ಏನಿದು? ಹೇಗಿರುತ್ತೆ? ಜನಕ್ಕೇನು ಉಪಯೋಗ?

ಶಿವಮೊಗ್ಗದ ಗೋಪಿ ಸರ್ಕಲ್‌ನಲ್ಲಿ (Gopi Circle) ಸಲಹಾ ಪಟ್ಟೆಗೆ ಇರಿಸುವ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅಭಿಯಾನಕ್ಕೆ ಚಾಲನೆ ನೀಡಿದರು.

ಏನಿದು ಸಲಹಾ ಪೆಟ್ಟಿಗೆ?

ಆ.17ರಿಂದ ಆ.31ರವರೆಗೆ ಶಿವಮೊಗ್ಗ ನಗರದ ಆಯ್ದ 50 ಕಡೆ ಸಲಹಾ ಪೆಟ್ಟಿಗೆಗಳನ್ನು ಇರಿಸಲು ತೀರ್ಮಾನಿಸಲಾಗಿದೆ. ಇದರ ಜೊತೆಗೆ ಮಾಹಿತಿ ಕಾರ್ಡುಗಳು ಇರಲಿವೆ. ನಾಗರಿಕರು ಇನ್ನು ಐದು ವರ್ಷ ಶಿವಮೊಗ್ಗ ನಗರ ಹೇಗಿರಬೇಕು ಎಂದು ಕಾರ್ಡುಗಳಲ್ಲಿ ಅಭಿಪ್ರಾಯ ಬರೆದು, ಸಲಹಾ ಪೆಟ್ಟಿಗೆಗೆ ಹಾಕಬಹುದು. ನಂತರ ಶಾಸಕರ ಕಚೇರಿ ಕರ್ತವ್ಯ ಭವನದಲ್ಲಿ ಈ ಕಾರ್ಡುಗಳನ್ನು ಪರಿಶೀಲಿಸಿ ಮುಂದಿನ ಯೋಜನೆ ಸಿದ್ಧಪಡಿಸಲಾಗುತ್ತದೆ ಎಂದು ತಿಳಿಸಲಾಗಿದೆ.

Opinion-Box-By-Shimoga-MLA-Channabasappa

ವಾಟ್ಸಪ್‌ ಮೂಲಕ ನಾಗರಿಕರ ಸಮಸ್ಯೆ ಆಲಿಸುವ ಪ್ರಯತ್ನ ಮಾಡಿದ್ದೇವೆ. ಶಿವಮೊಗ್ಗ ನಗರ ಹೇಗಿರಬೇಕು ಎಂದು ಜನರಿಂದ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದ್ದೇವೆ. ಈಶ್ವರಪ್ಪ ಅವರ ನೇತೃತ್ವದಲ್ಲಿ ನಗರದಲ್ಲಿ ಸಾಕಷ್ಟು ಅಭಿವೃದ್ಧಿಯಾಗಿದೆ. ಇನ್ನಷ್ಟು ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಜನರ ಸಲಹೆ ಪಡೆಯಲು ಸಲಹಾ ಪೆಟ್ಟಿಗೆಗಳನ್ನು ಇರಿಸಲಾಗುತ್ತಿದೆ.ಎಸ್‌.ಎನ್.ಚನ್ನಬಸಪ್ಪ, ಶಿವಮೊಗ್ಗ ನಗರ ಶಾಸಕ

ಗೋಪಿ ವೃತ್ತದಲ್ಲಿ ಅಭಿಪ್ರಾಯ ಸಂಗ್ರಹಿಸಲಾಯಿತು. ಸಾರ್ವಜನಿಕರು, ಪೊಲೀಸ್‌ ಸಿಬ್ಬಂದಿ, ಮಳಿಗೆಗಳ ಮಾಲೀಕರು ಸೇರಿದಂತೆ ಹಲವರು ತಮ್ಮ ಅಭಿಪ್ರಾಯ ಬರೆದು ಪೆಟ್ಟಿಗೆಗೆ ಹಾಕಿದರು.

PARISHRAMA neet academy

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 18, 2023

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

Leave a Comment