ಪಾಕ್‌ ಮೇಲೆ ದಾಳಿ, ಪಹಲ್ಗಾಮ್‌ನಲ್ಲಿ ಮೃತರಾದ ರಿಯಲ್‌ ಎಸ್ಟೇಟ್‌ ಉದ್ಯಮಿ ತಾಯಿಯ ಮೊದಲ ರಿಯಾಕ್ಷನ್‌, ಏನಂದ್ರು?

ಶಿವಮೊಗ್ಗ: ಪಹಲ್ಗಾಮ್‌ ದಾಳಿಗೆ ಪ್ರತ್ಯುತ್ತರವಾಗಿ ಭಾರತ ಕಳೆದ ರಾತ್ರಿ ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿದೆ. ಆಪರೇಷನ್‌ ಸಿಂಧೂರ (Operation Sindoor) ಹೆಸರಿನಲ್ಲಿ ನಡೆದ ದಾಳಿಗೆ ಶಿವಮೊಗ್ಗದಲ್ಲಿಯು ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

JNNCE-ADMISSION-2025-26

ಪಹಲ್ಗಾಮ್‌ ದಾಳಿಯಲ್ಲಿ ಮೃತರಾದ ರಿಯಲ್‌ ಎಸ್ಟೇಟ್‌ ಉದ್ಯಮಿ ಮಂಜುನಾಥರಾವ್‌ ಅವರ ತಾಯಿ ಸುಮತಿ, ಸರ್ಕಾರದ ಕ್ರಮವನ್ನು ಸ್ವಾಗತಿಸಿದ್ದಾರೆ.

ಸುಮತಿ ಏನೆಲ್ಲ ಹೇಳಿದರು?

Manjunatha-Rao-mother-sumathi-speaks-about-Operation-Sindoor

Point 1 F1F1F1

ಕುಟುಂಬದಲ್ಲಿ ಯಜಮಾನ ಯಾವುದೇ ತೀರ್ಮಾನ ಕೈಗೊಂಡರು ನಾವೆಲ್ಲ ಬದ್ಧರಾಗಿರುತ್ತೇವೆ. ಹಾಗೆಯೆ ನಮ್ಮ ದೇಶವನ್ನು ಕುಟುಂಬ ಎಂದು ಪರಿಗಣಿಸಿದರೆ ಮೋದಿ ಅವರು ಯಜಮಾನನ ಸ್ಥಾನದಲ್ಲಿದ್ದಾರೆ. ಅವರು ಸರಿಯಾದ ನಿರ್ಧಾರ ತೆಗೆದುಕೊಂಡಿದ್ದಾರೆ.

Point 2 F1F1F1ಹೊರ ದೇಶಕ್ಕೆಲ್ಲ ಆರಾಮವಾಗಿ ಹೋಗಿ ಬರುತ್ತಾರೆ. ಆದರೆ ನಮ್ಮದೇ ದೇಶದಲ್ಲಿ ನಾವು ಓಡಾಡಲು ಸಾಧ್ಯವಾಗುತ್ತಿಲ್ಲವಲ್ಲ ಎಂದು ಅನಿಸುತ್ತಿತ್ತು.

Point 3 F1F1F1ನನ್ನ ಮಗ ಪ್ರಕೃತಿ ಸೌಂದರ್ಯ ನೋಡಿ ಬರಲು ಹೋದ. ಮಲೆನಾಡಿನಲ್ಲಿ ಹುಟ್ಟಿದವನು ಅಲ್ಲಿ ಹೋಗಿ ಅನಾಥವಾಗಿ ಸಾವನ್ನಪ್ಪಿದ್ದ. ಇದು ನನಗೆ ಬಹಳ ನೋವಿದೆ. ಮೋದಿ ಅವರು ಸರಿಯಾದ ನಿರ್ಧಾರ ತೆಗೆದುಕೊಳ್ಳುತ್ತಾರೆ.

ಕಳೆದ ರಾತ್ರಿ ಎರಡ್ಮೂರು ಜನ ಎನ್‌ಐಎ ಅಧಿಕಾರಿಗಳು ಬಂದಿದ್ದರು. ಸರ್ಕಾರದ ಕಡೆಯಿಂದ ಎಂದು ತಿಳಿಸಿದ್ದರು. ಮಾಧ್ಯಮದವರು ಏನೆಲ್ಲ ಪ್ರಶ್ನೆ ಕೇಳುತ್ತಾರೋ ಅದೇ ರೀತಿಯ ಪ್ರಶ್ನೆಗಳನ್ನು ಕೇಳಿದರು. ನಾವು ಉತ್ತರ ನೀಡಿದ್ದೇವೆ. ತುಂಬಾ ಹೊತ್ತು ಮನೆಯಲ್ಲಿದ್ದರು.

ಸುಮತಿ, ಮಂಜುನಾಥ ರಾವ್‌ ತಾಯಿ

Kalleshwara-Enterprises.webp
Manjunatha-Rao-mother-sumathi-speaks-about-Operation-Sindoor

ಇದನ್ನೂ ಓದಿ » ಎಸ್ಸೆಸ್ಸೆಲ್ಸಿ ಪ್ರಥಮ ರ‍್ಯಾಂಕ್‌ ಪಡೆದ ವಿದ್ಯಾರ್ಥಿನಿಗೆ ಉಚಿತ ಸೀಟ್‌, ಪಿಯುಸಿಯ ಟಾಪರ್‌ಗಳಿಗೆ ಅಮೆರಿಕ ಟೂರ್‌

The-Team-PU-College-scaled

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment