ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 9 APRIL 2023
SHIMOGA : ದಿನೇ ದಿನೆ ಬಿಸಿಲ ಝಳ ಹೆಚ್ಚುತ್ತಿದ್ದು ಮಲೆನಾಡು ಕಾದ ಕಾವಲಿಯಂತಾಗಿದೆ (Summer). ಜಿಲ್ಲೆಯ ವಿವಿಧೆಡೆ ಮಳೆಯಾದರೂ ತಾಪಮಾನ ತಗ್ಗಿಲ್ಲ. ಬಿಸಿಲು, ಧಗೆಯಿಂದ ಕಂಗೆಟ್ಟಿರುವುವ ಜನರು ತಂಪು ಪಾನಿಯಗಳ ಮೊರೆ ಹೋಗುತ್ತಿದ್ದಾರೆ.

ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲು ಹೆಚ್ಚಾಗುತ್ತಲೆ ಇದೆ. ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 38 ರಿಂದ 39 ಡಿಗ್ರಿವರೆಗೆ ತಲುಪಿದೆ. ಬಿಸಿಲು ಇನ್ನಷ್ಟು ಹೆಚ್ಚಬಹುದು ಎಂಬ ಆತಂಕ ಜನರಲ್ಲಿದೆ. ಮನೆ, ಕಟ್ಟಡಗಳಿಂದ ಹೊರ ಬರಲು ಜನರು ಹೆದರುವಂತಾಗಿದೆ.
ಇದನ್ನೂ ಓದಿ – ಶಿವಮೊಗ್ಗ ಚೆಕ್ಪೋಸ್ಟ್ನಲ್ಲಿ ಈತನಕ ಏನೆಲ್ಲ ಸೀಜ್ ಆಗಿದೆ? ಎಷ್ಟು ಮೌಲ್ಯದ ನಗದು, ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ?
ವರುಣದೇವನಿಗೆ ಮೊರೆ
ಬಿಸಲ ಧಗೆ ಹೆಚ್ಚುತ್ತಿದ್ದಂತೆ ಬೇಸಿಗೆ (Summer) ಮಳೆಯಾಗಲಿದೆ. ಶಿವಮೊಗ್ಗ ಜಿಲ್ಲೆಯ ಕೆಲವು ಕಡೆ ಮಾತ್ರ ಕೆಲವು ಹೊತ್ತು ಮಳೆಯಾಗಿದೆ. ಹಾಗಾಗಿ ಉಷ್ಣಾಂಶ ಮತ್ತಷ್ಟು ಹೆಚ್ಚಾಗಿದೆ. ಗಾಳಿಯು ಬೀಸದಿರುವುದರಿಂದ ಧಗೆ ಇದೆ. ಜನರು ಫ್ಯಾನು, ಎಸಿ ಮೊರೆ ಹೋಗಿದ್ದಾರೆ. ಇನ್ನೊಂದೆಡೆ ಮಳೆಯಾಗಲಿ ಎಂದು ದೇವರ ಪ್ರಾರ್ಥಿಸುತ್ತಿದ್ದಾರೆ.
ತಂಪು ಪಾನಿಯಗಳಿಗೆ ಡಿಮಾಂಡ್
ಬಿಸಿಲ ಧಗೆಗೆ ಕಂಗೆಟ್ಟಿರುವ ಜನರು ತಂಪು ಪಾನಿಯಗಳ ಮೊರೆ ಹೋಗಿದ್ದಾರೆ. ಕೂಲ್ ಡ್ರಿಂಗ್ಸ್, ಜ್ಯೂಸ್ ಸೆಂಟರ್, ಐಸ್ ಕ್ರೀಂ ಪಾರ್ಲರ್ಗಳಲ್ಲಿ ಹೆಚ್ಚು ಜನರನ್ನು ಕಾಣಬಹುದಾಗಿದೆ. ಎಳೆನೀರಿಗೆ ಫುಲ್ ಡಿಮಾಂಡ್ ಬಂದಿದೆ.
LATEST NEWS
- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

About The Editor
ನಿತಿನ್ ಆರ್.ಕೈದೊಟ್ಲು

CLICK HERE TO JOIN SHIVAMOGGA LIVE WHATSAPP GROUP













