SHIVAMOGGA LIVE NEWS | 1 SEPTEMBER 2023
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
SHIMOGA : ಸಾಮಾಜಿಕ ಜಾಲತಾಣದಲ್ಲಿ (Social Media) ಕಾಂಗ್ರೆಸ್ ಕಾರ್ಯಕರ್ತೆಗೆ ಅವಹೇಳನ ಮಾಡಿದ ಚಕ್ರವರ್ತಿ ಸೂಲಿಬೆಲೆ (Chakravarti Sulibele) ತಕ್ಷಣ ಕ್ಷಮೆ ಕೇಳಬೇಕು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುಂದರೇಶ್, ಸಾಮಾಜಿಕ ಜಾಲತಾಣದಲ್ಲಿ (Social Media) ಕಾಂಗ್ರೆಸ್ ಕಾರ್ಯಕರ್ತೆ ಸೌಗಂಧಿಕ ಅವರ ಅವಹೇಳನ ಮಾಡಲಾಗಿದೆ. ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ಠಾಣೆಗೆ ಹಾಜರಾಗಿದ್ದ ಚಕ್ರವರ್ತಿ ಸೂಲಿಬೆಲೆ ಸ್ಟೇಷನ್ ಬೇಲ್ ಪಡೆದು ಹೊರಬಂದಿದ್ದಾರೆ. ಆ ಬಳಿಕ ಅವರು ನೀಡಿದ ಹೇಳಿಕೆ ಸಹಿಸುವಂತದ್ದಲ್ಲ. ಆದ್ದರಿಂದ ಚಕ್ರವರ್ತಿ ಸೂಲಿಬೆಲೆ ಸೌಗಂಧಿಕ ಅವರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ – ರಾಖಿ ಕಟ್ಟಿಕೊಂಡು ಬಂದ ವಿದ್ಯಾರ್ಥಿಗಳನ್ನು ಹೊರಗೆ ನಿಲ್ಲಿಸಿದ್ದ ಖಾಸಗಿ ಶಾಲೆ, ಪೋಷಕರ ಆಕ್ರೋಶ
ಮಹಿಳೆ, ಭಾರತೀಯ ಸಂಸ್ಕೃತಿ ಕುರಿತು ಚಕ್ರವರ್ತಿ ಸೂಲಿಬೆಲೆ ಭಾಷಣ ಮಾಡುತ್ತಾರೆ. ಆದರೆ ಮಹಿಳೆಯ ನಿಂದನೆ ಮಾಡುತ್ತಿರುವುದು ಯಾವ ಸಂಸ್ಕೃತಿ. ಪ್ರಕರಣ ಸಂಬಂಧ ಆಗಾಗ ಹೇಳಿಕೆಗಳನ್ನು ತಿರುಚುತ್ತಿದ್ದಾರೆ. ಜಿಲ್ಲೆಯ ರಾಜಕಾರಣದಲ್ಲಿ ಸೌರ್ಹಾದ ವಾತಾವರಣವಿದೆ. ಚಕ್ರವರ್ತಿ ಸೂಲಿಬೆಲೆ ಇಲ್ಲಿ ವಿಷ ಬೀಜ ಬಿತ್ತಿವುದು ಬೇಡ ಎಂದರು.
ವಿಧಾನ ಪರಿಷತ್ ಮಾಜಿ ಸದಸ್ಯ ಆರ್.ಪ್ರಸನ್ನಕುಮಾರ್, ಚಂದ್ರಭೂಪಾಲ್, ಸೌಗಂಧಿಕ ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿ ಇದ್ದರು.
LATEST NEWS
- ಉಪನ್ಯಾಸಕಿಗೆ ವಿಡಿಯೋ ಕರೆ ಮಾಡಿ ಅಶ್ಲೀಲ ವರ್ತನೆ, ದಾಖಲಾಯ್ತು ಕೇಸ್, ಏನಿದು ಪ್ರಕರಣ?

- ಕಪ್ಪು ಪ್ಯಾಕೆಟ್ ಕೇಸ್, ಮೂವರು ಅರೆಸ್ಟ್, ಏನಿದು ಪ್ರಕರಣ? ಯಾರಿವರು ಬಂಧಿತರು?

- ಅರ್ಜಿಗಳನ್ನು ಪೂರ್ತಿಗೊಳಿಸಲು ಫೆಬ್ರವರಿ 12ರವರೆಗೆ ಅವಕಾಶ, ಇಲ್ಲಿದೆ ಕಂಪ್ಲೀಟ್ ಮಾಹಿತಿ

- ಸೋಗಾನೆಯಲ್ಲಿ ಧಗಧಗ ಹೊತ್ತಿ ಉರಿದ ತೊಗರಿ, ಹುರುಳಿಯ ಬೊಣವೆ, ಆಗಿದ್ದೇನು?

- ಕಾರು, ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಗೆ ನೆರವಾದ ಶಿವಮೊಗ್ಗ ಜಿಲ್ಲಾಧಿಕಾರಿ, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






