ಸಂಡೆ ಲಾಕ್‌ಡೌನ್, ಶಿವಮೊಗ್ಗ ಸಿಟಿಯಲ್ಲಿ ಹೇಗಿದೆ ಪರಿಸ್ಥಿತಿ? ಜನ, ವಾಹನ ಸಂಚಾರವಿದೆಯಾ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಮೇ 2020

ಶಿವಮೊಗ್ಗದಲ್ಲಿ ಒಂದು ದಿನದ ಕರೋನ ಸಂಪೂರ್ಣ ಲಾಕ್‍ಡೌನ್‍ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಶಿವಮೊಗ್ಗ ಸಿಟಿಯಲ್ಲಿ ಜನ ಸಂಚಾರ ಸಂಪೂರ್ಣ ತಗ್ಗಿದೆ. ಅಗತ್ಯ ವಸ್ತು ಖರೀದಿ ಹೊರತು ಬೇರೆ ಕಾರಣಕ್ಕೆ ಜನರು ಹೊರ ಬರುತ್ತಿಲ್ಲ.

ಬೆಳಗ್ಗೆ ಸ್ವಲ್ಪ ಹೊತ್ತು ಜನ ಸಂಚಾರ

ಜನ ಸಂಚಾರ ಈಗ ಸಂಪೂರ್ಣ ಕಡಿಮೆಯಾಗಿದೆ.  ಆದರೆ ಬೆಳಗ್ಗೆ ಸ್ವಲ್ಪ ಹೊತ್ತು ಜನ ಸಂಚಾರವಿತ್ತು. ಅಗತ್ಯ ವಸ್ತುಗಳ ಖರೀದಿಗೆ ಜನರು ಮನೆಯಿಂದ ಹೊರ ಬಂದಿದ್ದರು. ಕೆಲವೇ ಹೊತ್ತಿನಲ್ಲಿ ಈ ಸಂಖ್ಯೆಯು ಕುಸಿತ ಕಂಡಿದೆ.

100508692 1127464104281675 298421818149044224 n.jpg? nc cat=107& nc sid=8024bb& nc ohc=rK23tqSY nIAX9TXdkF& nc ht=scontent.fblr1 3

ಪ್ರಮುಖ ರಸ್ತೆ, ಸರ್ಕಲ್‍ನಲ್ಲಿ ಬ್ಯಾರಿಕೇಡ್

ವಾಹನ ಸಂಚಾರ ತಡೆಗೆ ಶಿವಮೊಗ್ಗ ನಗರದ ಪ್ರಮುಖ ರಸ್ತೆ, ಸರ್ಕಲ್‍ಗಳಲ್ಲಿ ಬ್ಯಾರಿಕೇಡ್ ಹಾಕಲಾಗಿದೆ. ಹಾಗಾಗಿ ಮುಖ್ಯ ರೆಸ್ತೆಗಳಲ್ಲಿ ವಾಹನ ಸಂಚಾರವಿಲ್ಲ. ಗೋಪಿ ಸರ್ಕಲ್, ಅಮೀರ್ ಅಹಮದ್ ರಸ್ತೆ, ಸರ್.ಎಂ.ವಿ ರಸ್ತೆಯಲ್ಲಿ ಬ್ಯಾರಿಕೇಡ್‍ಗಳನ್ನು ಹಾಕಲಾಗಿದೆ.

ಕೆಎಸ್‍ಆರ್‌ಟಿಸಿ ಬಸ್‍ ಸ್ಟಾಂಡ್ ಖಾಲಿ ಖಾಲಿ

ಒಂದು ದಿನದ ಸಂಪೂರ್ಣ ಲಾಕ್‍ಡೌನ್ ಹಿನ್ನೆಲೆ, ಶಿವಮೊಗ್ಗದ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣ ಖಾಲಿ ಖಾಲಿಯಾಗಿದೆ. ಬಸ್ ಸಂಚಾರ ಸ್ಥಗಿತವಾಗಿರುವುದರಿಂದ ನಿಲ್ದಾಣದಲ್ಲಿ ಒಂದೂ ಬಸ್ ಇಲ್ಲ. ಹಾಗಾಗಿ ಪ್ರಯಾಣಿಕರು ಕಾಣಸಿಗುವುದಿಲ್ಲ.

98966478 1127464140948338 6145882142246174720 n.jpg? nc cat=111& nc sid=8024bb& nc ohc=dM84UPIP1tUAX8VPM1i& nc ht=scontent.fblr1 4

ಮಟನ್, ಚಿಕನ್, ಮೀನು ಖರೀದಿ

ಮಟನ್, ಚಿಕನ್, ಮೀನು ಖರೀದಿಗೆ ಅವಕಾಶವಿತ್ತು. ಹಾಗಾಗಿ ಬೆಳಗ್ಗೆಯಿಂದ ನಗರದ ವಿವಿಧ ಅಂಗಡಿಗಳಲ್ಲಿ ಖರೀದಿ ಜೋರಾಗಿತ್ತು. ಕೆಲವು ಕಡೆ ಸಾಮಾಜಿಕ ಅಂತರ ಕಣ್ಮರೆಯಾಗಿದ್ದರೂ, ಖರೀದಿ ನಿರಂತರವಾಗಿತ್ತು.

100668495 1127464217614997 1315235843505389568 n.jpg? nc cat=105& nc sid=8024bb& nc ohc=W7tRIYVtyRQAX 086xL& nc ht=scontent.fblr1 4

ಸಿಟಿಯಲ್ಲಿ ಬಿಗಿ ಬಂದೋಬಸ್ತ್

ಜನ ಸಂಚಾರವನ್ನು ನಿಯಂತ್ರಿಸುವ ಸಲುವಾಗಿ ಶಿವಮೊಗ್ಗ ನಗರದಾದ್ಯಂತ ಪೊಲೀಸರನ್ನು ನಿಯೋಜಿಸಲಾಗಿದೆ. ಪ್ರಮುಖ ರಸ್ತೆ, ಸರ್ಕಲ್‍ಗಳಲ್ಲಿ ಪೊಲೀಸರು ಬಂದೋಬಸ್ತ್ ಮಾಡುತ್ತಿದ್ದಾರೆ.  

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 24, 2020

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment