ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 3 FEBRUARY 2023
SHIMOGA : ಹುಣಸೋಡು ಕಲ್ಲು ಕ್ವಾರಿಯಲ್ಲಿ ಸಂಭವಿಸಿದ ಸ್ಫೋಟ ಪ್ರಕರಣ ಸಂಬಂಧ ಎರಡು ವರ್ಷದ ಬಳಿಕ ಮತ್ತೊಂದು ಪ್ರಕರಣ ದಾಖಲಾಗಿದೆ. ನಕಲಿ ಕಾಲ್ ಡಿಟೇಲ್ ರೆಕಾರ್ಡ್ (ಸಿಡಿಆರ್) ಒದಗಿಸಲಾಗಿದೆ ಎಂದು ಪೊಲೀಸರು ಸ್ವಯಂ ಪ್ರೇರಿತವಾಗಿ (suo moto) ದೂರು ದಾಖಲಿಸಿಕೊಂಡಿದ್ದಾರೆ.

ಏನಿದು ಪ್ರಕರಣ?
2021ರ ಜನವರಿ 21ರಂದು ಶಿವಮೊಗ್ಗದ ಹುಣಸೋಡು ಗ್ರಾಮದ ಕಲ್ಲು ಕ್ವಾರಿಯಲ್ಲಿ ಭಾರಿ ಸ್ಪೋಟ ಸಂಭವಿಸಿತ್ತು. ಇದರಲ್ಲಿ 6 ಮಂದಿ ಸಾವನ್ನಪ್ಪಿದ್ದರು. ಘಟನೆ ಬಳಿಕ ಭದ್ರಾವತಿಯ ಪುನೀತ್ ಗೌಡ ಸುಳಿವಿಲ್ಲದಂತಾಗಿದೆ. ಆತ ಬದುಕಿದ್ದಾನೆ. ಹುಡುಕಿಕೊಡಿ ಎಂದು ಕುಟುಂಬದವರ ಒತ್ತಾಯವಾಗಿದೆ. ಈ ಕುರಿತು ತನಿಖೆ ನಡೆಯುತ್ತಿದೆ. ಪೊಲೀಸ್ ಇಲಾಖೆ ದಾಖಲೆಗಳ ಪರಿಶೀಲನೆ ನಡೆಸುತ್ತಿದೆ. ಈ ವೇಳೆ ನಕಲಿ ಸಿಡಿಆರ್ ಒದಗಿಸಿರುವುದು ಬೆಳಕಿಗೆ ಬಂದಿದೆ.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯ 3 ಗ್ರಾಮ ಪಂಚಾಯಿತಿಯ 4 ಸ್ಥಾನಕ್ಕೆ ಉಪ ಚುನಾವಣೆ, ದಿನಾಂಕ ನಿಗದಿ
ಎಫ್ಐಆರ್ ನಲ್ಲಿ ಏನಿದೆ?
ಭದ್ರಾವತಿಯ ಪುನೀತ್ ಗೌಡ ಮೊಬೈಲ್ ಸಿಡಿಆರ್ ಎಂದು ಪೊಲೀಸ್ ಇಲಾಖೆಗೆ ದಾಖಲೆ ಒದಗಿಸಲಾಗಿತ್ತು. ಡಿವೈಎಸ್ಪಿ ಅವರು ಇದರ ವಿಚಾರಣೆ ನಡೆಸಿ, ದಾಖಲೆಗಳ ಪರಿಶೀಲನೆ ನಡೆಸಿದ್ದರು. ಪುನೀತ್ ಗೌಡ ಮೊಬೈಲ್ ನಂಬರ್ ಸಿಡಿಆರ್ ಪ್ರತಿ ಪರಿಶೀಲನೆ ವೇಳೆ, ಮೇಲ್ನೋಟಕ್ಕೆ ಅದು ನಕಲಿ ಎಂಬುದು ಗೊತ್ತಾಗಿದೆ. ವಂಚಿಸುವ ಉದ್ದೇಶದಿಂದ ಈ ಕೃತ್ಯ ಎಸಗಲಾಗಿದೆ ಎಂದು ಪೊಲೀಸರು ಸ್ವಯಂ ಪ್ರೇರಿತವಾಗಿ (suo moto) ದೂರು ದಾಖಲಿಸಿಕೊಂಡಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LATEST NEWS
- ಬೆಳಗ್ಗೆ ಲೇಔಟ್ಗೆ ಬಂದ ಲೆಕ್ಚರರ್ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

About The Editor
ನಿತಿನ್ ಆರ್.ಕೈದೊಟ್ಲು

CLICK HERE TO JOIN SHIVAMOGGA LIVE WHATSAPP GROUP













