| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
SHIVAMOGGA LIVE NEWS | 3 FEBRUARY 2023
SHIMOGA : ಹುಣಸೋಡು ಕಲ್ಲು ಕ್ವಾರಿಯಲ್ಲಿ ಸಂಭವಿಸಿದ ಸ್ಫೋಟ ಪ್ರಕರಣ ಸಂಬಂಧ ಎರಡು ವರ್ಷದ ಬಳಿಕ ಮತ್ತೊಂದು ಪ್ರಕರಣ ದಾಖಲಾಗಿದೆ. ನಕಲಿ ಕಾಲ್ ಡಿಟೇಲ್ ರೆಕಾರ್ಡ್ (ಸಿಡಿಆರ್) ಒದಗಿಸಲಾಗಿದೆ ಎಂದು ಪೊಲೀಸರು ಸ್ವಯಂ ಪ್ರೇರಿತವಾಗಿ (suo moto) ದೂರು ದಾಖಲಿಸಿಕೊಂಡಿದ್ದಾರೆ.
![]()
ಏನಿದು ಪ್ರಕರಣ?
2021ರ ಜನವರಿ 21ರಂದು ಶಿವಮೊಗ್ಗದ ಹುಣಸೋಡು ಗ್ರಾಮದ ಕಲ್ಲು ಕ್ವಾರಿಯಲ್ಲಿ ಭಾರಿ ಸ್ಪೋಟ ಸಂಭವಿಸಿತ್ತು. ಇದರಲ್ಲಿ 6 ಮಂದಿ ಸಾವನ್ನಪ್ಪಿದ್ದರು. ಘಟನೆ ಬಳಿಕ ಭದ್ರಾವತಿಯ ಪುನೀತ್ ಗೌಡ ಸುಳಿವಿಲ್ಲದಂತಾಗಿದೆ. ಆತ ಬದುಕಿದ್ದಾನೆ. ಹುಡುಕಿಕೊಡಿ ಎಂದು ಕುಟುಂಬದವರ ಒತ್ತಾಯವಾಗಿದೆ. ಈ ಕುರಿತು ತನಿಖೆ ನಡೆಯುತ್ತಿದೆ. ಪೊಲೀಸ್ ಇಲಾಖೆ ದಾಖಲೆಗಳ ಪರಿಶೀಲನೆ ನಡೆಸುತ್ತಿದೆ. ಈ ವೇಳೆ ನಕಲಿ ಸಿಡಿಆರ್ ಒದಗಿಸಿರುವುದು ಬೆಳಕಿಗೆ ಬಂದಿದೆ.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯ 3 ಗ್ರಾಮ ಪಂಚಾಯಿತಿಯ 4 ಸ್ಥಾನಕ್ಕೆ ಉಪ ಚುನಾವಣೆ, ದಿನಾಂಕ ನಿಗದಿ
ಎಫ್ಐಆರ್ ನಲ್ಲಿ ಏನಿದೆ?
ಭದ್ರಾವತಿಯ ಪುನೀತ್ ಗೌಡ ಮೊಬೈಲ್ ಸಿಡಿಆರ್ ಎಂದು ಪೊಲೀಸ್ ಇಲಾಖೆಗೆ ದಾಖಲೆ ಒದಗಿಸಲಾಗಿತ್ತು. ಡಿವೈಎಸ್ಪಿ ಅವರು ಇದರ ವಿಚಾರಣೆ ನಡೆಸಿ, ದಾಖಲೆಗಳ ಪರಿಶೀಲನೆ ನಡೆಸಿದ್ದರು. ಪುನೀತ್ ಗೌಡ ಮೊಬೈಲ್ ನಂಬರ್ ಸಿಡಿಆರ್ ಪ್ರತಿ ಪರಿಶೀಲನೆ ವೇಳೆ, ಮೇಲ್ನೋಟಕ್ಕೆ ಅದು ನಕಲಿ ಎಂಬುದು ಗೊತ್ತಾಗಿದೆ. ವಂಚಿಸುವ ಉದ್ದೇಶದಿಂದ ಈ ಕೃತ್ಯ ಎಸಗಲಾಗಿದೆ ಎಂದು ಪೊಲೀಸರು ಸ್ವಯಂ ಪ್ರೇರಿತವಾಗಿ (suo moto) ದೂರು ದಾಖಲಿಸಿಕೊಂಡಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
![]()
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಕೋಟೆ ದೇವಸ್ಥಾನದಲ್ಲಿ 30 ದಿನ ಸೀತಾಕಲ್ಯಾಣ ಶತಮಾನೋತ್ಸವ, ಏನೇನೆಲ್ಲ ಕಾರ್ಯಕ್ರಮ ಇರಲಿದೆ?
- BREAKING NEWS – ಶಿವಮೊಗ್ಗದ ಖ್ಯಾತ ಡಾಕ್ಟರ್ ಮತ್ತು ಪುತ್ರ ನೇಣಿಗೆ ಶರಣು
- ಬಿಸ್ಕತ್ತು, ಕೇಕ್, ಪಿಜ್ಜಾ, ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ, ಯಾರೆಲ್ಲ ಭಾಗವಹಿಸಬಹುದು?
- ಕ್ರೆಡಿಟ್ ಕಾರ್ಡ್ನಿಂದ ಹಣ ಕಡಿತ, ಎಸ್ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ
- ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?
- ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
- BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್ ಆದೇಶ, ಯಾಕೆ?
![]()