ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 26 APRIL 2023
SHIMOGA : ಬೀಗ ಹಾಕಿದ್ದ ಮನೆಯೊಂದರ ಮುಂದೆ ಅನುಮಾನಾಸ್ಪದವಾಗಿ (Suspect) ನಿಂತಿದ್ದ ವ್ಯಕ್ತಿಯೊಬ್ಬನನ್ನು ರಾತ್ರಿ ಗಸ್ತು ಪೊಲೀಸರು ವಿಚಾರಣೆ ಮಾಡಿ, ಬಂಧಿಸಿದ್ದಾರೆ. ಶಿವಮೊಗ್ಗದ ವಿದ್ಯಾನಗರದಲ್ಲಿ ಘಟನೆ ಸಂಭವಿಸಿದೆ.

ವಿದ್ಯಾನಗರದ 2ನೇ ಅಡ್ಡರಸ್ತೆಯಲ್ಲಿ ಕೋಟೆ ಠಾಣೆ ಸಿಬ್ಬಂದಿ ಗಸ್ತು ತಿರುಗುತ್ತಿದ್ದರು. ಈ ವೇಳೆ ಮನೆಯೊಂದರ ಮುಂದೆ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ (Suspect) ನಿಂತಿದ್ದ. ಪೊಲೀಸರನ್ನು ಕಂಡ ಕೂಡಲೆ ಮರೆಯಾಗಲು ಯತ್ನಿಸಿದ್ದಾನೆ. ಪೊಲೀಸರು ಆತನನ್ನು ಹಿಡಿದು ವಿಚಾರಣೆ ಮಾಡಿದಾಗ ಸ್ಪಷ್ಟ ಉತ್ತರ ಹೇಳಿಲ್ಲ. ಒಂದೊಂದು ಸರ್ತಿ ಒಂದೊಂದು ಹೆಸರು, ಊರು ತಿಳಿಸಿದ್ದಾನೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಲೋಕಾಯುಕ್ತ ದಾಳಿ, ನಿವೃತ್ತ ಅರಣ್ಯಾಧಿಕಾರಿ, ಹಿಂದಿನ ತಹಶೀಲ್ದಾರ್ ಸಂಬಂಧಿ ಮನೆಯಲ್ಲಿ ಶೋಧ
ಹೆಚ್ಚಿನ ವಿಚಾರಣೆ ಮಾಡಿದಾಗ ತಾನು ಭದ್ರಾವತಿ ಹೊಸಮನೆಯ ಧರ್ಮರಾಜ್ ಎಂದು ತಿಳಿಸಿದ್ದಾನೆ. ಮನೆ ಕಳ್ಳತನ ಮಾಡುವ ಸಂಶಯವಿದ್ದಿದ್ದರಿಂದ ಆತನ ವಿರುದ್ದ ಪ್ರಕರಣ ದಾಖಲು ಮಾಡಿದ್ದಾರೆ.
LATEST NEWS
- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

About The Editor
ನಿತಿನ್ ಆರ್.ಕೈದೊಟ್ಲು






