ಶಿವಮೊಗ್ಗ ಸಿಟಿಯಲ್ಲಿ ಮುಂದುವರೆದ ಸಸ್ಪೆನ್ಸ್‌, ಜನರಲ್ಲಿ ಹೆಚ್ಚಿದ ಕುತೂಹಲ, ರಾಜಕೀಯ ಲೆಕ್ಕಾಚಾರ ಚುರುಕು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 11 APRIL 2023

SHIMOGA : ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಶಿವಮೊಗ್ಗ ಜಿಲ್ಲೆಯ ಆರು ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ ಮಾಡಲಾಗಿದೆ. ಆದರೆ ಶಿವಮೊಗ್ಗ ನಗರ ಕ್ಷೇತ್ರದ ವಿಚಾರದಲ್ಲಿ ಹೈಕಮಾಂಡ್‌ ಸಸ್ಪೆನ್ಸ್‌ (suspense) ಉಳಿಸಿದೆ.

Shimoga-Election-News-General-Image

ಹಾಲಿ ಶಾಸಕ ಕೆ.ಎಸ್.ಈಶ್ವರಪ್ಪ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಹಾಗಾಗಿ ಶಿವಮೊಗ್ಗ ನಗರದಲ್ಲಿ ಬಿಜೆಪಿ ಯಾರನ್ನು ಕಣಕ್ಕಿಳಿಸಲಿದೆ ಎಂಬ ಕುತೂಹಲವಿತ್ತು. ಆದರೆ ಈ ಸಸ್ಪೆನ್ಸ್‌  (suspense) ಅನ್ನು ಮುಂದಿನ ಪಟ್ಟಿವರೆಗೆ ಬಿಜೆಪಿ ಹೈಕಮಾಂಡ್‌ ಕಾಯ್ದಿರಿಸಿದೆ.

ಹಲವರ ಹೆಸರು ಗಿರಕಿ

ಪಟ್ಟಿ ಬಿಡುಗಡೆಗು ಮೊದಲು ಶಿವಮೊಗ್ಗ ನಗರಕ್ಕೆ ಬಿಜೆಪಿ ಯಾರನ್ನು ಕಣಕ್ಕಿಳಿಸಲಿದೆ ಎಂಬುದರ ಕುರಿತು ಚರ್ಚೆಗಳಾಗಿದ್ದವು. ಸಾಮಾಜಿಕ ಜಾಲತಾಣದಲ್ಲಿ ಹಲವರ ಹೆಸರುಗಳು ಕಾಣಿಸಿಕೊಂಡಿದ್ದವು. ಕೆ.ಎಸ್‌.ಈಶ್ವರಪ್ಪ ಅವರ ಬದಲಿಗೆ ಅವರ ಪುತ್ರ ಕೆ.ಈ.ಕಾಂತೇಶ್‌ ಅವರಿಗೆ ಟಿಕೆಟ್‌ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿತ್ತು. ಅವರ ಅಭಿಮಾನಿಗಳು ಕೂಡ ಇದೇ ಆಗ್ರಹ ಮಾಡಿದ್ದರು.

ಮತ್ತೊಂದೆಡೆ ವಿಧಾನ ಪರಿಷತ್‌ ಸದಸ್ಯ ಆಯನೂರು ಮಂಜುನಾಥ್‌ ಅವರ ಹೆಸರು ಘೋಷಣೆಯಾಲಿದೆ ಎಂದು ಕೇಳಿ ಬಂದಿತ್ತು. ಎಸ್‌.ಎಸ್.ಜ್ಯೋತಿ ಪ್ರಕಾಶ್‌, ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಹರಿಕೃಷ್ಣ ಅವರ ಹೆಸರು ಅಂತಿಮವಾಗಿದೆ ಎಂದೆಲ್ಲ ಹರಿದಾಡಿತ್ತು.

ಕಾಂಗ್ರೆಸ್‌ನಲ್ಲೂ ಸಸ್ಪೆನ್ಸ್‌

ಶಿವಮೊಗ್ಗ ನಗರದ ಟಿಕೆಟ್‌ ವಿಚಾರದಲ್ಲಿ ಕಾಂಗ್ರೆಸ್‌ ಪಕ್ಷದಲ್ಲಿಯು ಸಸ್ಪೆನ್ಸ್‌ ಮುಂದುವರೆದಿದೆ. ಹನ್ನೊಂದು ಮಂದಿ ಆಕಾಂಕ್ಷಿಗಳಿದ್ದಾರೆ. ಆದರೆ ಯಾರಿಗೆ ಟಿಕೆಟ್‌ ಫೈನಲ್‌ ಆಗಲಿದೆ ಎಂಬುದು ಇನ್ನೂ ಕುತೂಹಲವಾಗಿಯೇ ಇದೆ. ಈಗ ಬಿಜೆಪಿ ಕೂಡ ಸಸ್ಪೆನ್ಸ್‌ ಮುಂದುವರೆಸಿರುವುದು ರಾಜಕೀಯ ಲೆಕ್ಕಾಚಾರಗಳು ಮತ್ತಷ್ಟು ಬಿರುಸು ಪಡೆಯುವಂತೆ ಮಾಡಿದೆ.

ಇದನ್ನೂ ಓದಿ – ಬಿಜೆಪಿ ಪಟ್ಟಿ, ಶಿವಮೊಗ್ಗ ಜಿಲ್ಲೆಯ ಆರು ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆ

ಸುದ್ದಿಗೋಷ್ಠಿ ಕರೆದ ಆಯನೂರು

ಈ ನಡುವೆ ವಿಧಾನ ಪರಿಷತ್‌ ಸದಸ್ಯ ಆಯನೂರು ಮಂಜುನಾಥ್‌ ಅವರು ಬುಧವಾರ ಸುದ್ದಿಗೋಷ್ಠಿ ಕರೆದಿದ್ದಾರೆ. ಮತ್ತೊಮ್ಮೆ ಆಯನೂರು ಮಂಜುನಾಥ್‌ ಅವರ ಸುದ್ದಿಗೋಷ್ಠಿ ಕುತೂಹಲ ಮತ್ತು ಅಂತೆ, ಕಂತೆಗಳಿಗೆ ಅವಕಾಶ ಮಾಡಿಕೊಟ್ಟಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 11, 2023

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment