ಶಿವಮೊಗ್ಗದಲ್ಲಿ ಧೂಳು ಹಿಡಿಯುತ್ತಿದೆ ಯುದ್ಧ ಟ್ಯಾಂಕರ್‌, 9 ತಿಂಗಳಿಂದ ಪಂಜರದಲ್ಲಿ ಬಂಧಿ, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 26 MAY 2024

SHIMOGA : ಯುವಕರಲ್ಲಿ ದೇಶ ಪ್ರೇಮ ಬಿತ್ತುವ ಉದ್ದೇಶದಿಂದ ಶಿವಮೊಗ್ಗಕ್ಕೆ ತರಿಸಲಾಗಿರುವ ಯುದ್ಧ ಟ್ಯಾಂಕರ್‌ (Tanker), ಈಗ ಕೆಸರಿನ ಮಧ್ಯೆ ಧೂಳು ಹಿಡಿಯುತ್ತಿದೆ. ಒಂಭತ್ತು ತಿಂಗಳಿಂದ ಪಂಜರದಲ್ಲಿ ಬಂಧಿಯಾಗಿದೆ.

Tanker T55 in Shimoga

ಅದ್ಧೂರಿ ಸ್ವಾಗತ, ಕಬ್ಬಿಣದ ಪಂಜರ

2023ರ ಆಗಸ್ಟ್‌ 12ರಂದು ಮಹಾರಾಷ್ಟ್ರದ ಪುಣೆಯ ಕಿರ್ಕಿ ಸೇನಾ ಕಂಟೋನ್ಮೆಂಟ್‌ ಬೋರ್ಡ್‌ನಿಂದ ಟಿ-55 ಮಾದರಿಯ ಯುದ್ಧ ಟ್ಯಾಂಕರ್‌ ಅನ್ನು ಶಿವಮೊಗ್ಗಕ್ಕೆ ತರಲಾಯಿತು. ಜಿಲ್ಲಾಡಳಿತ, ಮಹಾನಗರ ಪಾಲಿಕೆ ವತಿಯಿಂದ ಟ್ಯಾಂಕರ್‌ಗೆ ಅದ್ಧೂರಿ ಸ್ವಾಗತ ನೀಡಲಾಗಿತ್ತು.

ಎಂಆರ್‌ಎಸ್‌ ಸರ್ಕಲ್‌ನಲ್ಲಿ ಅದನ್ನು ಸ್ಥಾಪಿಸುವ ಉದ್ದೇಶವಿತ್ತು. ಹಾಗಾಗಿ ಅಲ್ಲೆ ಪಕ್ಕದಲ್ಲಿರುವ ಮೆಸ್ಕಾಂ ವಸತಿ ಗೃಹಗಳ ಆವರಣದಲ್ಲಿ ಟ್ಯಾಂಕರ್‌ ಅನ್ನು ತಾತ್ಕಲಿಕವಾಗಿ ನಿಲ್ಲಿಸಲಾಯಿತು. ಅದರ ಸುತ್ತಲು ಪಂಜರ ಸ್ಥಾಪಿಸಲಾಯಿತು. 9 ತಿಂಗಳಾದರೂ ಟ್ಯಾಂಕರ್‌ ಪಂಜರದಿಂದ ಹೊರ ಬಂದಿಲ್ಲ. ಅಲಂಕಾರಕ್ಕೆ ಹಾಕಿದ್ದ ಹೂವು ಕೊಳೆತು, ಒಣಗಿದ್ದರು ತೆಗೆದಿಲ್ಲ. ಟ್ಯಾಂಕರ್‌ ಸಂಪೂರ್ಣ ಧೂಳಿನಲ್ಲಿ ಮುಳುಗಿದೆ. ಅಕ್ಕಪಕ್ಕ ಸಂಪೂರ್ಣ ಕೆಸರುಮಯವಾಗಿದೆ.

Tanker T55 in Shimoga

ಟ್ಯಾಂಕರ್‌ ಸ್ಥಾಪನೆಗೆ ನಿಗದಿಯಾಗದ ಜಾಗ

1971ರಲ್ಲಿ ಪಾಕಿಸ್ತಾನದಿಂದ ಬಾಂಗ್ಲಾದೇಶ ವಿಮೋಚನೆ ಬಯಸಿತು. ಈ ಸಂದರ್ಭ ಎರಡು ದೇಶಗಳ ಮಧ್ಯೆ ಯುದ್ದ ನಡೆಯಿತು. ಆಗ ಪಾಕಿಸ್ತಾನ ಸೇನೆಯ ವಿಮಾನಗಳು ಭಾರತದ ಮೇಲೆ ದಾಳಿ ನಡೆಸಿದ್ದವು. ಹಾಗಾಗಿ ಭಾರತ ಪಾಕಿಸ್ತಾನದ ವಿರುದ್ಧ ಯುದ್ದ ಸಾರಿತು. ಈ ಯುದ್ದದಲ್ಲಿ ಭಾರತ ಜಯ ಗಳಿಸಿತು. ಬಾಂಗ್ಲಾದೇಶಕ್ಕೆ ಸ್ವಾತಂತ್ರ್ಯ ಲಭಿಸಿತು. ಆ ಯುದ್ದದಲ್ಲಿ ಭಾಗವಹಿಸಿದ್ದ ರಷ್ಯಾ ನಿರ್ಮಿತ ಟಿ 55 ಯುದ್ದ ಟ್ಯಾಂಕರ್‌ ಇದು. ಸುಮಾರು 36 ಸಾವಿರ ಕೆ.ಜಿ. ತೂಕವಿದೆ.

Tanker T55 in Shimoga

ಇದನ್ನೂ ಓದಿ – ಚಂದ್ರಗುತ್ತಿಯಲ್ಲಿ ಆಗೀ ಹುಣ್ಣಿಮೆ, ದೊಡ್ಡ ಸಂಖ್ಯೆಯ ಭಕ್ತರಿಂದ ಪೂಜೆ, ಏನೆಲ್ಲ ಧಾರ್ಮಿಕ ಕಾರ್ಯಕ್ರಮ ನಡೆದವು?

ಎಂಆರ್‌ಎಸ್‌ ಸರ್ಕಲ್‌ನಲ್ಲಿ ಯುದ್ದ ಟ್ಯಾಂಕರ್‌ ಸ್ಥಾಪನೆಗೆ ಯೋಜಿಸಲಾಗಿತ್ತು. ಆದರೆ ಇಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಮೇಲ್ಸೇತುವೆ ನಿರ್ಮಾಣವಾಗಲಿದೆ. ಹಾಗಾಗಿ ಎಂಆರ್‌ಎಸ್‌ ಸರ್ಕಲ್‌ನಲ್ಲಿ ಟ್ಯಾಂಕರ್‌ ಸ್ಥಾಪನೆಗೆ ಅನುಮತಿ ನಿರಾಕರಿಸಲಾಗಿದೆ. ಬೇರೆ ಸ್ಥಳದಲ್ಲಿ ಸ್ಥಾಪನೆಗೆ ಮಹಾನಗರ ಪಾಲಿಕೆ ಸಭೆಯಲ್ಲಿ ತೀರ್ಮಾನವಾಗಬೇಕು. ಅವಧಿ ಪೂರ್ಣಗೊಂಡಿರುವುದರಿಂದ ಮಹಾನಗರ ಪಾಲಿಕೆಗೆ ಚುನಾವಣೆ ನಡೆದು, ನೂತನ ಸದಸ್ಯರು ಬರಬೇಕಿದೆ. ಅಲ್ಲಿಯ ತನಕ ಟಿ 55 ಟ್ಯಾಂಕರ್‌ಗೆ ಧೂಳಿನಲ್ಲೆ ಉಳಿಯುವುದು ನಿಶ್ಚಿತ ಎಂಬಂತಾಗಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 26, 2024

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

ಶಿವಮೊಗ್ಗದಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್‌? 16 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗದಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್‌? 16 ಮಾರ್ಚ್‌ 2026 – ಅಡಿಕೆ ಧಾರಣೆ

ತೀರ್ಥಹಳ್ಳಿ ಮಹಿಳೆಯರಿಗೆ ಮೊದಲ ಮೂರು ಬಹುಮಾನ, ಹೇಗಿತ್ತು ಸ್ಪರ್ಧೆ? ವಿಜೇತರು ಯಾರು?

ತೀರ್ಥಹಳ್ಳಿ ಮಹಿಳೆಯರಿಗೆ ಮೊದಲ ಮೂರು ಬಹುಮಾನ, ಹೇಗಿತ್ತು ಸ್ಪರ್ಧೆ? ವಿಜೇತರು ಯಾರು?

Leave a Comment